Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...