Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...