Homeಕರ್ನಾಟಕಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಮಹಾತ್ಮ ಗಾಂಧಿಯ ಪ್ರತಿಮೆ ನೋಡಿ ಗಾಬರಿಯಾದ ಕಲಾವಿದರು

- Advertisement -
- Advertisement -

ಹಾಸನವು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳದ ಅದ್ಭುತ ಶಿಲ್ಪ ಕಲೆಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಆದರೆ ನಗರದ ಗಾಂಧಿ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಳಪೆ ವಿನ್ಯಾಸ ಮತ್ತು ಗುಣಮಟ್ಟವಿಲ್ಲದೆ ರಚಿಸಲಾಗಿದ್ದು, ಕಲಾವಿರು ಸೇರಿದಂತೆ ಸಾಮಾಜಿಕ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಭವನವನ್ನು ಗುರುವಾರ ನಡೆಯಲಿರುವ ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕರು ನಾನುಗೌರಿ.ಕಾಂಗೆ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಾಸನ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಗಾಂಧಿ ಭವನದ ನಿರ್ಮಾಣ ಮತ್ತು ಕಲಾಕೃತಿಗಳಿಗೆ ಇಲಾಖೆಯು 3 ಕೋಟಿ ರೂಗಳನ್ನು ವೆಚ್ಚ ಮಾಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹಾಸನದ ಖ್ಯಾತ ಕಲಾವಿದ ಕೆ.ಟಿ. ಶಿವಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನೋಡಿ ನಾನು ಗಾಬರಿಯಾದೆ ಎಂದು ಆಘಾತ ವ್ಯಕ್ತಪಡಿಸಿದರು.

“ಗಾಂಧಿಯಂತಹ ಮಹಾತ್ಮರ ಪ್ರತಿಮೆಯನ್ನು ಮಾಡಬೇಕೆಂದರೆ ಅದಕ್ಕೆ ಅಗಾಧ ಪ್ರತಿಭೆ ಬೇಕಾಗುತ್ತದೆ. ಆದರೆ ಇಲ್ಲಿ ಯಾರನ್ನೊ ಕರೆಸಿ ಅದನ್ನು ನಿರ್ಮಿಸಿದ್ದು, ಪ್ರತಿಮೆ ಭಯಾನಕವಾಗಿದೆ. ಮಹಾತ್ಮ ಗಾಂಧಿ ಹಾಸ್ಯದ ವಸ್ತುವಲ್ಲ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ. ಪ್ರತಿಮೆಯನ್ನು ಅನಾವರಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ಅದನ್ನೇ ಅನಾವರಣ ಮಾಡುವುದಾದರೆ ಪ್ರತಿಭಟಿಸಿ ಜೈಲಿಗೆ ಹೋಗಲೂ ಸಿದ್ದ” ಎಂದು ಕಲಾವಿದ ಕೆ.ಟಿ. ಶಿವಪ್ರಸಾದ್ ಹೇಳಿದರು.

ಹಾಸನದ ಚಿತ್ರ ಕಲಾವಿದರಾದ ಬಿ.ಎಸ್‌. ದೇಸಾಯಿ ಮಾತನಾಡಿ, ಅದೊಂದು ಆಕಾರವಲ್ಲ, ವಿಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಗಾಂಧಿ ಪ್ರತಿಮೆಯನ್ನು ನೋಡಿದರೆ ಮಹಾತ್ಮರ ವ್ಯಕ್ತಿತ್ವ, ಅವರ ಚಳವಳಿ ನಮಗೆ ನೆನಪಾಗಬೇಕು. ಆದರೆ ಈ ಪ್ರತಿಮೆಯನ್ನು ನೋಡಿದರೆ ಅದು ಸಾಧ್ಯವಿಲ್ಲ. ಪ್ರತಿಮೆ ಬಹಳ ಕೆಟ್ಟದ್ದಾಗಿದ್ದು, ಒಬ್ಬ ಕಲಾವಿದನಾಗಿ ಹೇಳಬೇಕೆಂದರೆ ಹಾಗೆ ಮಾಡಿದ್ದು ಖಂಡಿತಾ ತಪ್ಪು. ಶಿಲ್ಪಕಲೆಗೆ ಹೆಸರಾದ ಹಾಸನ ಜಿಲ್ಲೆಗೆ ಈ ಪ್ರತಿಮೆ ಒಂದು ಕಪ್ಪುಚುಕ್ಕೆಯಾಗುತ್ತದೆ. ಪ್ರತಿಮೆ ಮರು ಬದಲಾವಣೆಯಾಗಬೇಕು, ಅದು ಇರುವುದು ಶೋಭೆಯಲ್ಲ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

“ಹಾಸನದಲ್ಲಿ ಉದ್ಘಾಟನೆಗೆ ತಯಾರಾಗಿ ನಿಂತಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಮೂರ್ತಿಗಳನ್ನು ಗಾಂಧಿಗೆ ಅವಮಾನ ಮಾಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಿಮೆಂಟ್ ನಿಂದ ನಿರ್ಮಿಸಿರುವ ಈ ಕಲಾಕೃತಿಗಳಲ್ಲಿ ಯಾವುದರಲ್ಲಿಯೂ ಗಾಂಧಿಯ ಹೋಲಿಕೆ ಇಲ್ಲ. ಇದು ಬೇಲೂರು, ಹಳೇಬೀಡು, ಶ್ರವಣಬೆಳಗುಳದಂತಹ ಜಗದ್ವಿಖ್ಯಾತ ಶಿಲ್ಪಕಲೆಗಳ ತವರಿನಲ್ಲಿ ಈರೀತಿ ಕಲಾಕೃತಿಗಳ ಅಂದ ಕೆಡಿಸುವುದು ಗಾಂಧಿಜಿಗೂ ಅವಮಾನ, ಹಾಸನ ಜಿಲ್ಲೆಗೂ ಅವಮಾನ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದ್ದಾರೆ.

ಕೂಡಲೇ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಮತ್ತು ಕೂಡಲೆ ಈ ಎಲ್ಲಾ ಕಲಾಕೃತಿಗಳನ್ನು ತೆರವುಗೊಳಿಸಿ ಅಂದವಾಗಿ ಗಾಂಧಿಜಿಯ ಕಲಾಕೃತಿಗಳನ್ನು ನಿರ್ಮಾಣಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹರ್ಷ ಕುಮಾರ್‌, ಪ್ರತಿಮೆ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಏನೇ ತಪ್ಪುಗಳಿದ್ದರೂ ಅವುಗಳನ್ನು ಸರಿ ಪಡಿಸಿ ಮಹಾತ್ಮರ ಗೌರವಕ್ಕೆ ಯಾವುದೆ ಧಕ್ಕೆ ಬರದಂತೆ ನಿರ್ಮಾಣ ಮಾಡಿ ಉದ್ಘಾಟನೆ ಬಗ್ಗೆ ಯೋಜಿಸುತ್ತೇವೆ ಎಂದು ಹೇಳಿದರು.

“ನಾವು ಜನರ ಭಾವನೆಗಳಿಗೆ ಸ್ಪಂಧಿಸಿ, ಕೂಡಲೇ ಕಲೆಯ ಬಗ್ಗೆ ಸಮರ್ಪಕವಾದ ಮಾಹಿತಿ ಕಲಾವಿದರನ್ನು ಕರೆಸಿ ಅವರೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದು ಇನ್ನೂ ಪ್ರಗತಿಯಲ್ಲಿ ಇರುವ ಕಾಮಗಾರಿಯಾಗಿದ್ದು, ಯಾವುದೆ ಕಾರಣಕ್ಕೂ ನಾಳೆ ಉದ್ಘಾಟನೆ ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ನಿರ್ಮಾಣದ ಜವಾಬ್ದಾರಿ ವಹಿಸಿದ್ದು, ಅವರು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿರ್ಮಿತಿ ಕೇಂದ್ರಕ್ಕೆ ನಾವು ಟೆಂಡರ್‌ ಕೊಟ್ಟಿದ್ದು, ಸಾರ್ವಜನಿಕರ ಎಳ್ಳಷ್ಟು ಹಣ ಪೋಲಾಗುವುದಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವಾರ್ತಾ ಇಲಾಖೆಯ ಹಾಸನ ಜಿಲ್ಲಾ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು,“ಗಾಂಧಿ ಪ್ರತಿಕೃತಿಯನ್ನು ತಿದ್ದುಪಡಿ ಮಾಡಲು ಸೂಚನೆ ಕೊಟ್ಟಿದ್ದೇವೆ. ನಾಳೆ ನಡೆಸಲು ಉದ್ದೇಶಿಸಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ತಪ್ಪುಗಳನ್ನು ಸರಿ ಪಡಿಸಿದ ನಂತರ ಉದ್ಘಾಟನೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...