Homeಕರ್ನಾಟಕಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಮಹಾತ್ಮ ಗಾಂಧಿಯ ಪ್ರತಿಮೆ ನೋಡಿ ಗಾಬರಿಯಾದ ಕಲಾವಿದರು

- Advertisement -
- Advertisement -

ಹಾಸನವು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳದ ಅದ್ಭುತ ಶಿಲ್ಪ ಕಲೆಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಆದರೆ ನಗರದ ಗಾಂಧಿ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಳಪೆ ವಿನ್ಯಾಸ ಮತ್ತು ಗುಣಮಟ್ಟವಿಲ್ಲದೆ ರಚಿಸಲಾಗಿದ್ದು, ಕಲಾವಿರು ಸೇರಿದಂತೆ ಸಾಮಾಜಿಕ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಭವನವನ್ನು ಗುರುವಾರ ನಡೆಯಲಿರುವ ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕರು ನಾನುಗೌರಿ.ಕಾಂಗೆ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಾಸನ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಗಾಂಧಿ ಭವನದ ನಿರ್ಮಾಣ ಮತ್ತು ಕಲಾಕೃತಿಗಳಿಗೆ ಇಲಾಖೆಯು 3 ಕೋಟಿ ರೂಗಳನ್ನು ವೆಚ್ಚ ಮಾಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹಾಸನದ ಖ್ಯಾತ ಕಲಾವಿದ ಕೆ.ಟಿ. ಶಿವಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನೋಡಿ ನಾನು ಗಾಬರಿಯಾದೆ ಎಂದು ಆಘಾತ ವ್ಯಕ್ತಪಡಿಸಿದರು.

“ಗಾಂಧಿಯಂತಹ ಮಹಾತ್ಮರ ಪ್ರತಿಮೆಯನ್ನು ಮಾಡಬೇಕೆಂದರೆ ಅದಕ್ಕೆ ಅಗಾಧ ಪ್ರತಿಭೆ ಬೇಕಾಗುತ್ತದೆ. ಆದರೆ ಇಲ್ಲಿ ಯಾರನ್ನೊ ಕರೆಸಿ ಅದನ್ನು ನಿರ್ಮಿಸಿದ್ದು, ಪ್ರತಿಮೆ ಭಯಾನಕವಾಗಿದೆ. ಮಹಾತ್ಮ ಗಾಂಧಿ ಹಾಸ್ಯದ ವಸ್ತುವಲ್ಲ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ. ಪ್ರತಿಮೆಯನ್ನು ಅನಾವರಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ಅದನ್ನೇ ಅನಾವರಣ ಮಾಡುವುದಾದರೆ ಪ್ರತಿಭಟಿಸಿ ಜೈಲಿಗೆ ಹೋಗಲೂ ಸಿದ್ದ” ಎಂದು ಕಲಾವಿದ ಕೆ.ಟಿ. ಶಿವಪ್ರಸಾದ್ ಹೇಳಿದರು.

ಹಾಸನದ ಚಿತ್ರ ಕಲಾವಿದರಾದ ಬಿ.ಎಸ್‌. ದೇಸಾಯಿ ಮಾತನಾಡಿ, ಅದೊಂದು ಆಕಾರವಲ್ಲ, ವಿಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಗಾಂಧಿ ಪ್ರತಿಮೆಯನ್ನು ನೋಡಿದರೆ ಮಹಾತ್ಮರ ವ್ಯಕ್ತಿತ್ವ, ಅವರ ಚಳವಳಿ ನಮಗೆ ನೆನಪಾಗಬೇಕು. ಆದರೆ ಈ ಪ್ರತಿಮೆಯನ್ನು ನೋಡಿದರೆ ಅದು ಸಾಧ್ಯವಿಲ್ಲ. ಪ್ರತಿಮೆ ಬಹಳ ಕೆಟ್ಟದ್ದಾಗಿದ್ದು, ಒಬ್ಬ ಕಲಾವಿದನಾಗಿ ಹೇಳಬೇಕೆಂದರೆ ಹಾಗೆ ಮಾಡಿದ್ದು ಖಂಡಿತಾ ತಪ್ಪು. ಶಿಲ್ಪಕಲೆಗೆ ಹೆಸರಾದ ಹಾಸನ ಜಿಲ್ಲೆಗೆ ಈ ಪ್ರತಿಮೆ ಒಂದು ಕಪ್ಪುಚುಕ್ಕೆಯಾಗುತ್ತದೆ. ಪ್ರತಿಮೆ ಮರು ಬದಲಾವಣೆಯಾಗಬೇಕು, ಅದು ಇರುವುದು ಶೋಭೆಯಲ್ಲ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

“ಹಾಸನದಲ್ಲಿ ಉದ್ಘಾಟನೆಗೆ ತಯಾರಾಗಿ ನಿಂತಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಮೂರ್ತಿಗಳನ್ನು ಗಾಂಧಿಗೆ ಅವಮಾನ ಮಾಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಿಮೆಂಟ್ ನಿಂದ ನಿರ್ಮಿಸಿರುವ ಈ ಕಲಾಕೃತಿಗಳಲ್ಲಿ ಯಾವುದರಲ್ಲಿಯೂ ಗಾಂಧಿಯ ಹೋಲಿಕೆ ಇಲ್ಲ. ಇದು ಬೇಲೂರು, ಹಳೇಬೀಡು, ಶ್ರವಣಬೆಳಗುಳದಂತಹ ಜಗದ್ವಿಖ್ಯಾತ ಶಿಲ್ಪಕಲೆಗಳ ತವರಿನಲ್ಲಿ ಈರೀತಿ ಕಲಾಕೃತಿಗಳ ಅಂದ ಕೆಡಿಸುವುದು ಗಾಂಧಿಜಿಗೂ ಅವಮಾನ, ಹಾಸನ ಜಿಲ್ಲೆಗೂ ಅವಮಾನ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದ್ದಾರೆ.

ಕೂಡಲೇ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಮತ್ತು ಕೂಡಲೆ ಈ ಎಲ್ಲಾ ಕಲಾಕೃತಿಗಳನ್ನು ತೆರವುಗೊಳಿಸಿ ಅಂದವಾಗಿ ಗಾಂಧಿಜಿಯ ಕಲಾಕೃತಿಗಳನ್ನು ನಿರ್ಮಾಣಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹರ್ಷ ಕುಮಾರ್‌, ಪ್ರತಿಮೆ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಏನೇ ತಪ್ಪುಗಳಿದ್ದರೂ ಅವುಗಳನ್ನು ಸರಿ ಪಡಿಸಿ ಮಹಾತ್ಮರ ಗೌರವಕ್ಕೆ ಯಾವುದೆ ಧಕ್ಕೆ ಬರದಂತೆ ನಿರ್ಮಾಣ ಮಾಡಿ ಉದ್ಘಾಟನೆ ಬಗ್ಗೆ ಯೋಜಿಸುತ್ತೇವೆ ಎಂದು ಹೇಳಿದರು.

“ನಾವು ಜನರ ಭಾವನೆಗಳಿಗೆ ಸ್ಪಂಧಿಸಿ, ಕೂಡಲೇ ಕಲೆಯ ಬಗ್ಗೆ ಸಮರ್ಪಕವಾದ ಮಾಹಿತಿ ಕಲಾವಿದರನ್ನು ಕರೆಸಿ ಅವರೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದು ಇನ್ನೂ ಪ್ರಗತಿಯಲ್ಲಿ ಇರುವ ಕಾಮಗಾರಿಯಾಗಿದ್ದು, ಯಾವುದೆ ಕಾರಣಕ್ಕೂ ನಾಳೆ ಉದ್ಘಾಟನೆ ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ನಿರ್ಮಾಣದ ಜವಾಬ್ದಾರಿ ವಹಿಸಿದ್ದು, ಅವರು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿರ್ಮಿತಿ ಕೇಂದ್ರಕ್ಕೆ ನಾವು ಟೆಂಡರ್‌ ಕೊಟ್ಟಿದ್ದು, ಸಾರ್ವಜನಿಕರ ಎಳ್ಳಷ್ಟು ಹಣ ಪೋಲಾಗುವುದಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವಾರ್ತಾ ಇಲಾಖೆಯ ಹಾಸನ ಜಿಲ್ಲಾ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು,“ಗಾಂಧಿ ಪ್ರತಿಕೃತಿಯನ್ನು ತಿದ್ದುಪಡಿ ಮಾಡಲು ಸೂಚನೆ ಕೊಟ್ಟಿದ್ದೇವೆ. ನಾಳೆ ನಡೆಸಲು ಉದ್ದೇಶಿಸಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ತಪ್ಪುಗಳನ್ನು ಸರಿ ಪಡಿಸಿದ ನಂತರ ಉದ್ಘಾಟನೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...