Homeಕರ್ನಾಟಕಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಮಹಾತ್ಮ ಗಾಂಧಿಯ ಪ್ರತಿಮೆ ನೋಡಿ ಗಾಬರಿಯಾದ ಕಲಾವಿದರು

- Advertisement -
- Advertisement -

ಹಾಸನವು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳದ ಅದ್ಭುತ ಶಿಲ್ಪ ಕಲೆಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಆದರೆ ನಗರದ ಗಾಂಧಿ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಳಪೆ ವಿನ್ಯಾಸ ಮತ್ತು ಗುಣಮಟ್ಟವಿಲ್ಲದೆ ರಚಿಸಲಾಗಿದ್ದು, ಕಲಾವಿರು ಸೇರಿದಂತೆ ಸಾಮಾಜಿಕ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಭವನವನ್ನು ಗುರುವಾರ ನಡೆಯಲಿರುವ ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕರು ನಾನುಗೌರಿ.ಕಾಂಗೆ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಾಸನ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಗಾಂಧಿ ಭವನದ ನಿರ್ಮಾಣ ಮತ್ತು ಕಲಾಕೃತಿಗಳಿಗೆ ಇಲಾಖೆಯು 3 ಕೋಟಿ ರೂಗಳನ್ನು ವೆಚ್ಚ ಮಾಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹಾಸನದ ಖ್ಯಾತ ಕಲಾವಿದ ಕೆ.ಟಿ. ಶಿವಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನೋಡಿ ನಾನು ಗಾಬರಿಯಾದೆ ಎಂದು ಆಘಾತ ವ್ಯಕ್ತಪಡಿಸಿದರು.

“ಗಾಂಧಿಯಂತಹ ಮಹಾತ್ಮರ ಪ್ರತಿಮೆಯನ್ನು ಮಾಡಬೇಕೆಂದರೆ ಅದಕ್ಕೆ ಅಗಾಧ ಪ್ರತಿಭೆ ಬೇಕಾಗುತ್ತದೆ. ಆದರೆ ಇಲ್ಲಿ ಯಾರನ್ನೊ ಕರೆಸಿ ಅದನ್ನು ನಿರ್ಮಿಸಿದ್ದು, ಪ್ರತಿಮೆ ಭಯಾನಕವಾಗಿದೆ. ಮಹಾತ್ಮ ಗಾಂಧಿ ಹಾಸ್ಯದ ವಸ್ತುವಲ್ಲ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ. ಪ್ರತಿಮೆಯನ್ನು ಅನಾವರಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ಅದನ್ನೇ ಅನಾವರಣ ಮಾಡುವುದಾದರೆ ಪ್ರತಿಭಟಿಸಿ ಜೈಲಿಗೆ ಹೋಗಲೂ ಸಿದ್ದ” ಎಂದು ಕಲಾವಿದ ಕೆ.ಟಿ. ಶಿವಪ್ರಸಾದ್ ಹೇಳಿದರು.

ಹಾಸನದ ಚಿತ್ರ ಕಲಾವಿದರಾದ ಬಿ.ಎಸ್‌. ದೇಸಾಯಿ ಮಾತನಾಡಿ, ಅದೊಂದು ಆಕಾರವಲ್ಲ, ವಿಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಗಾಂಧಿ ಪ್ರತಿಮೆಯನ್ನು ನೋಡಿದರೆ ಮಹಾತ್ಮರ ವ್ಯಕ್ತಿತ್ವ, ಅವರ ಚಳವಳಿ ನಮಗೆ ನೆನಪಾಗಬೇಕು. ಆದರೆ ಈ ಪ್ರತಿಮೆಯನ್ನು ನೋಡಿದರೆ ಅದು ಸಾಧ್ಯವಿಲ್ಲ. ಪ್ರತಿಮೆ ಬಹಳ ಕೆಟ್ಟದ್ದಾಗಿದ್ದು, ಒಬ್ಬ ಕಲಾವಿದನಾಗಿ ಹೇಳಬೇಕೆಂದರೆ ಹಾಗೆ ಮಾಡಿದ್ದು ಖಂಡಿತಾ ತಪ್ಪು. ಶಿಲ್ಪಕಲೆಗೆ ಹೆಸರಾದ ಹಾಸನ ಜಿಲ್ಲೆಗೆ ಈ ಪ್ರತಿಮೆ ಒಂದು ಕಪ್ಪುಚುಕ್ಕೆಯಾಗುತ್ತದೆ. ಪ್ರತಿಮೆ ಮರು ಬದಲಾವಣೆಯಾಗಬೇಕು, ಅದು ಇರುವುದು ಶೋಭೆಯಲ್ಲ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

“ಹಾಸನದಲ್ಲಿ ಉದ್ಘಾಟನೆಗೆ ತಯಾರಾಗಿ ನಿಂತಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಮೂರ್ತಿಗಳನ್ನು ಗಾಂಧಿಗೆ ಅವಮಾನ ಮಾಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಿಮೆಂಟ್ ನಿಂದ ನಿರ್ಮಿಸಿರುವ ಈ ಕಲಾಕೃತಿಗಳಲ್ಲಿ ಯಾವುದರಲ್ಲಿಯೂ ಗಾಂಧಿಯ ಹೋಲಿಕೆ ಇಲ್ಲ. ಇದು ಬೇಲೂರು, ಹಳೇಬೀಡು, ಶ್ರವಣಬೆಳಗುಳದಂತಹ ಜಗದ್ವಿಖ್ಯಾತ ಶಿಲ್ಪಕಲೆಗಳ ತವರಿನಲ್ಲಿ ಈರೀತಿ ಕಲಾಕೃತಿಗಳ ಅಂದ ಕೆಡಿಸುವುದು ಗಾಂಧಿಜಿಗೂ ಅವಮಾನ, ಹಾಸನ ಜಿಲ್ಲೆಗೂ ಅವಮಾನ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದ್ದಾರೆ.

ಕೂಡಲೇ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಮತ್ತು ಕೂಡಲೆ ಈ ಎಲ್ಲಾ ಕಲಾಕೃತಿಗಳನ್ನು ತೆರವುಗೊಳಿಸಿ ಅಂದವಾಗಿ ಗಾಂಧಿಜಿಯ ಕಲಾಕೃತಿಗಳನ್ನು ನಿರ್ಮಾಣಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹರ್ಷ ಕುಮಾರ್‌, ಪ್ರತಿಮೆ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಏನೇ ತಪ್ಪುಗಳಿದ್ದರೂ ಅವುಗಳನ್ನು ಸರಿ ಪಡಿಸಿ ಮಹಾತ್ಮರ ಗೌರವಕ್ಕೆ ಯಾವುದೆ ಧಕ್ಕೆ ಬರದಂತೆ ನಿರ್ಮಾಣ ಮಾಡಿ ಉದ್ಘಾಟನೆ ಬಗ್ಗೆ ಯೋಜಿಸುತ್ತೇವೆ ಎಂದು ಹೇಳಿದರು.

“ನಾವು ಜನರ ಭಾವನೆಗಳಿಗೆ ಸ್ಪಂಧಿಸಿ, ಕೂಡಲೇ ಕಲೆಯ ಬಗ್ಗೆ ಸಮರ್ಪಕವಾದ ಮಾಹಿತಿ ಕಲಾವಿದರನ್ನು ಕರೆಸಿ ಅವರೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದು ಇನ್ನೂ ಪ್ರಗತಿಯಲ್ಲಿ ಇರುವ ಕಾಮಗಾರಿಯಾಗಿದ್ದು, ಯಾವುದೆ ಕಾರಣಕ್ಕೂ ನಾಳೆ ಉದ್ಘಾಟನೆ ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ನಿರ್ಮಾಣದ ಜವಾಬ್ದಾರಿ ವಹಿಸಿದ್ದು, ಅವರು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿರ್ಮಿತಿ ಕೇಂದ್ರಕ್ಕೆ ನಾವು ಟೆಂಡರ್‌ ಕೊಟ್ಟಿದ್ದು, ಸಾರ್ವಜನಿಕರ ಎಳ್ಳಷ್ಟು ಹಣ ಪೋಲಾಗುವುದಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವಾರ್ತಾ ಇಲಾಖೆಯ ಹಾಸನ ಜಿಲ್ಲಾ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು,“ಗಾಂಧಿ ಪ್ರತಿಕೃತಿಯನ್ನು ತಿದ್ದುಪಡಿ ಮಾಡಲು ಸೂಚನೆ ಕೊಟ್ಟಿದ್ದೇವೆ. ನಾಳೆ ನಡೆಸಲು ಉದ್ದೇಶಿಸಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ತಪ್ಪುಗಳನ್ನು ಸರಿ ಪಡಿಸಿದ ನಂತರ ಉದ್ಘಾಟನೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...