Homeಕರ್ನಾಟಕಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಮಹಾತ್ಮ ಗಾಂಧಿಯ ಪ್ರತಿಮೆ ನೋಡಿ ಗಾಬರಿಯಾದ ಕಲಾವಿದರು

- Advertisement -
- Advertisement -

ಹಾಸನವು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳದ ಅದ್ಭುತ ಶಿಲ್ಪ ಕಲೆಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಆದರೆ ನಗರದ ಗಾಂಧಿ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಳಪೆ ವಿನ್ಯಾಸ ಮತ್ತು ಗುಣಮಟ್ಟವಿಲ್ಲದೆ ರಚಿಸಲಾಗಿದ್ದು, ಕಲಾವಿರು ಸೇರಿದಂತೆ ಸಾಮಾಜಿಕ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಭವನವನ್ನು ಗುರುವಾರ ನಡೆಯಲಿರುವ ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕರು ನಾನುಗೌರಿ.ಕಾಂಗೆ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಾಸನ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಗಾಂಧಿ ಭವನದ ನಿರ್ಮಾಣ ಮತ್ತು ಕಲಾಕೃತಿಗಳಿಗೆ ಇಲಾಖೆಯು 3 ಕೋಟಿ ರೂಗಳನ್ನು ವೆಚ್ಚ ಮಾಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹಾಸನದ ಖ್ಯಾತ ಕಲಾವಿದ ಕೆ.ಟಿ. ಶಿವಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನೋಡಿ ನಾನು ಗಾಬರಿಯಾದೆ ಎಂದು ಆಘಾತ ವ್ಯಕ್ತಪಡಿಸಿದರು.

“ಗಾಂಧಿಯಂತಹ ಮಹಾತ್ಮರ ಪ್ರತಿಮೆಯನ್ನು ಮಾಡಬೇಕೆಂದರೆ ಅದಕ್ಕೆ ಅಗಾಧ ಪ್ರತಿಭೆ ಬೇಕಾಗುತ್ತದೆ. ಆದರೆ ಇಲ್ಲಿ ಯಾರನ್ನೊ ಕರೆಸಿ ಅದನ್ನು ನಿರ್ಮಿಸಿದ್ದು, ಪ್ರತಿಮೆ ಭಯಾನಕವಾಗಿದೆ. ಮಹಾತ್ಮ ಗಾಂಧಿ ಹಾಸ್ಯದ ವಸ್ತುವಲ್ಲ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ. ಪ್ರತಿಮೆಯನ್ನು ಅನಾವರಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ಅದನ್ನೇ ಅನಾವರಣ ಮಾಡುವುದಾದರೆ ಪ್ರತಿಭಟಿಸಿ ಜೈಲಿಗೆ ಹೋಗಲೂ ಸಿದ್ದ” ಎಂದು ಕಲಾವಿದ ಕೆ.ಟಿ. ಶಿವಪ್ರಸಾದ್ ಹೇಳಿದರು.

ಹಾಸನದ ಚಿತ್ರ ಕಲಾವಿದರಾದ ಬಿ.ಎಸ್‌. ದೇಸಾಯಿ ಮಾತನಾಡಿ, ಅದೊಂದು ಆಕಾರವಲ್ಲ, ವಿಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಗಾಂಧಿ ಪ್ರತಿಮೆಯನ್ನು ನೋಡಿದರೆ ಮಹಾತ್ಮರ ವ್ಯಕ್ತಿತ್ವ, ಅವರ ಚಳವಳಿ ನಮಗೆ ನೆನಪಾಗಬೇಕು. ಆದರೆ ಈ ಪ್ರತಿಮೆಯನ್ನು ನೋಡಿದರೆ ಅದು ಸಾಧ್ಯವಿಲ್ಲ. ಪ್ರತಿಮೆ ಬಹಳ ಕೆಟ್ಟದ್ದಾಗಿದ್ದು, ಒಬ್ಬ ಕಲಾವಿದನಾಗಿ ಹೇಳಬೇಕೆಂದರೆ ಹಾಗೆ ಮಾಡಿದ್ದು ಖಂಡಿತಾ ತಪ್ಪು. ಶಿಲ್ಪಕಲೆಗೆ ಹೆಸರಾದ ಹಾಸನ ಜಿಲ್ಲೆಗೆ ಈ ಪ್ರತಿಮೆ ಒಂದು ಕಪ್ಪುಚುಕ್ಕೆಯಾಗುತ್ತದೆ. ಪ್ರತಿಮೆ ಮರು ಬದಲಾವಣೆಯಾಗಬೇಕು, ಅದು ಇರುವುದು ಶೋಭೆಯಲ್ಲ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

“ಹಾಸನದಲ್ಲಿ ಉದ್ಘಾಟನೆಗೆ ತಯಾರಾಗಿ ನಿಂತಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಮೂರ್ತಿಗಳನ್ನು ಗಾಂಧಿಗೆ ಅವಮಾನ ಮಾಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಿಮೆಂಟ್ ನಿಂದ ನಿರ್ಮಿಸಿರುವ ಈ ಕಲಾಕೃತಿಗಳಲ್ಲಿ ಯಾವುದರಲ್ಲಿಯೂ ಗಾಂಧಿಯ ಹೋಲಿಕೆ ಇಲ್ಲ. ಇದು ಬೇಲೂರು, ಹಳೇಬೀಡು, ಶ್ರವಣಬೆಳಗುಳದಂತಹ ಜಗದ್ವಿಖ್ಯಾತ ಶಿಲ್ಪಕಲೆಗಳ ತವರಿನಲ್ಲಿ ಈರೀತಿ ಕಲಾಕೃತಿಗಳ ಅಂದ ಕೆಡಿಸುವುದು ಗಾಂಧಿಜಿಗೂ ಅವಮಾನ, ಹಾಸನ ಜಿಲ್ಲೆಗೂ ಅವಮಾನ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದ್ದಾರೆ.

ಕೂಡಲೇ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಮತ್ತು ಕೂಡಲೆ ಈ ಎಲ್ಲಾ ಕಲಾಕೃತಿಗಳನ್ನು ತೆರವುಗೊಳಿಸಿ ಅಂದವಾಗಿ ಗಾಂಧಿಜಿಯ ಕಲಾಕೃತಿಗಳನ್ನು ನಿರ್ಮಾಣಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹರ್ಷ ಕುಮಾರ್‌, ಪ್ರತಿಮೆ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಏನೇ ತಪ್ಪುಗಳಿದ್ದರೂ ಅವುಗಳನ್ನು ಸರಿ ಪಡಿಸಿ ಮಹಾತ್ಮರ ಗೌರವಕ್ಕೆ ಯಾವುದೆ ಧಕ್ಕೆ ಬರದಂತೆ ನಿರ್ಮಾಣ ಮಾಡಿ ಉದ್ಘಾಟನೆ ಬಗ್ಗೆ ಯೋಜಿಸುತ್ತೇವೆ ಎಂದು ಹೇಳಿದರು.

“ನಾವು ಜನರ ಭಾವನೆಗಳಿಗೆ ಸ್ಪಂಧಿಸಿ, ಕೂಡಲೇ ಕಲೆಯ ಬಗ್ಗೆ ಸಮರ್ಪಕವಾದ ಮಾಹಿತಿ ಕಲಾವಿದರನ್ನು ಕರೆಸಿ ಅವರೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದು ಇನ್ನೂ ಪ್ರಗತಿಯಲ್ಲಿ ಇರುವ ಕಾಮಗಾರಿಯಾಗಿದ್ದು, ಯಾವುದೆ ಕಾರಣಕ್ಕೂ ನಾಳೆ ಉದ್ಘಾಟನೆ ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ನಿರ್ಮಾಣದ ಜವಾಬ್ದಾರಿ ವಹಿಸಿದ್ದು, ಅವರು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿರ್ಮಿತಿ ಕೇಂದ್ರಕ್ಕೆ ನಾವು ಟೆಂಡರ್‌ ಕೊಟ್ಟಿದ್ದು, ಸಾರ್ವಜನಿಕರ ಎಳ್ಳಷ್ಟು ಹಣ ಪೋಲಾಗುವುದಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವಾರ್ತಾ ಇಲಾಖೆಯ ಹಾಸನ ಜಿಲ್ಲಾ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು,“ಗಾಂಧಿ ಪ್ರತಿಕೃತಿಯನ್ನು ತಿದ್ದುಪಡಿ ಮಾಡಲು ಸೂಚನೆ ಕೊಟ್ಟಿದ್ದೇವೆ. ನಾಳೆ ನಡೆಸಲು ಉದ್ದೇಶಿಸಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ತಪ್ಪುಗಳನ್ನು ಸರಿ ಪಡಿಸಿದ ನಂತರ ಉದ್ಘಾಟನೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...