Homeಮುಖಪುಟಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

ಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

- Advertisement -
- Advertisement -

ಜೀವನ ಕಲೆಗಳು ಅಂಕಣ: 9

ಸೃಜನಾತ್ಮಕ ಚಿಂತನೆ ಎಂದರೆ ಸಮಸ್ಯೆಯನ್ನು ಹೊಸ ದೃಷ್ಟಿಕೋನದಿಂದ ವೀಕ್ಷಿಸಿ, ಪಾರಂಪರಿಕವಲ್ಲದ ಪರಿಹಾರ ಸೂಚಿಸುವ ಪ್ರಯತ್ನ. ಇದು ಪ್ರಾರಂಭದಲ್ಲಿ ವಿಚಲಿತಗೊಳಿಸಬಹುದು. ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ಮುಕ್ತ ಆಲೋಚನೆ (ಓಪನ್ ಮೈಂಡ್). ಸೃಜನಾತ್ಮಕ ಚಿಂತನೆಯನ್ನು ವ್ಯವಸ್ಥಿತ ಅಥವಾ ಅವ್ಯಸ್ಥಿತ ಪ್ರಕ್ರಿಯೆಯಿಂದ ಚಾಲನೆಗೆ ತರಬಹುದು. ಚಿಂತನೆ ಸಹಜವಾಗಿ ಬಂದಿರಬಹುದು ಅಥವಾ ಅಕಸ್ಮಿಕವೂ ಆಗಿರಬಹುದು. ಯಾವುದೇ ಪ್ರಯತ್ನವಿಲ್ಲದೆ ಸೃಜನಾತ್ಮಕ ಚಿಂತನೆ ತಾನಾಗಿಯೇ ನಡೆಯುತ್ತದೆ ಆದರೆ ಆಕಸ್ಮಿಕವಾಗಿ. ಪ್ರಯತ್ನಪೂರ್ವಕ ಸೃಜನಾತ್ಮಕ ಚಿಂತನೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಆದರೆ ಇದ್ದಕ್ಕಿದಂತೆ ಹೊಳೆದ ಉಪಾಯ ಕೂಡಲೇ ಮಹತ್ತರ ಬದಲಾವಣೆ ತರಬಲ್ಲದು. ಇದನ್ನು ಚೌಕಟ್ಟಿನ ಹೊರಗಿನ ಚಿಂತನೆ (ಥಿಂಕಿಂಗ್ ಔಟ್ ಆಫ್ ದಿ ಬಾಕ್ಸ್) ಎನ್ನುತ್ತಾರೆ.
ಕೆಲವು ವಿಶೇಷ ಉಪಾಯಗಳಿಂದ ಈ ಸೃಜನಾತ್ಮಕ ಚಿಂತನೆ ಬೇಗಲೇ ಆಗುವಂತೆ ಮಾಡಬಹುದು. ಇದರಿಂದ ಹೊಸ ರೀತಿಯ ಯೋಚನೆಗಳು ಏಕ ಕಾಲಕ್ಕೆ ಬಂದು ಅಥವಾ ಒಂದರಿಂದ ಒಂದು ಹುಟ್ಟಿಕೊಂಡು ಅಥವಾ ಒಂದಕ್ಕೊಂದು ಸೇರಿ, ಹೊಸ ರೀತಿಯ ಉಪಾಯ ಅಥವಾ ಪ್ರಕ್ರಿಯೆಗೆ ದಾರಿ ಮಾಡಿಕೊಡಬಹುದು. ಇದನ್ನು ಬ್ರೇನ್ ಸ್ಟಾರ್ಮಿಂಗ್ ಎನ್ನುತ್ತಾರೆ. ಒಂದಕ್ಕಿಂತ ಹೆಚ್ಚು ತಲೆಗಳು ಒಟ್ಟಿಗೆ ಕೆಲಸ ಮಾಡಿದಾಗ ಪರಿಣಾಮ ಇನ್ನೂ ಹೆಚ್ಚುತ್ತದೆ.

ನಮ್ಮ ಎಡ ಬದಿಯ ಮೆದುಳು ವ್ಯವಸ್ಥಿತ ಸಾಧಾರಣ ಯೋಚನೆಗಳಿಗೂ (ತರ್ಕ, ಗಣಿತ, ಯಾಂತ್ರಿಕ ಕೆಲಸ) ಮತ್ತು ಬಲಬದಿಯ ಮೆದುಳು ಸೃಜನಾತ್ಮಕ ಚಿಂತನೆಗೂ ಬಳಕೆಯಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇತ್ತೀಚಿನ ವೈದ್ಯಕೀಯ ಪರಿಶೋಧನೆಯ ವರದಿ ಪ್ರಕಾರ ಎರಡೂ ಬದಿಯ ಮೆದುಳು ಏಕ ಕಾಲಕ್ಕೆ, ಒಂದೇ ಸಂಕೀರ್ಣ ವಿಚಾರದ ಬಗ್ಗೆ ಕೆಲಸ ಮಾಡುತ್ತವೆ ಎಂಬುದು ಸಿದ್ಧವಾಗಿದೆ. ಆದ್ದರಿಂದ ಎಡ-ಬಲ ಮೆದುಳಿನ ಪ್ರವೃತ್ತಿ ಎನ್ನುವುದು ತಪ್ಪು ಪರಿಕಲ್ಪನೆ. ಯಾವುದೋ ಒಂದು ಯೋಚನೆಯ ಮೇಲೆ ತೀರಾ ಮಗ್ನರಾಗಿ ಏನೂ ತೋಚದೇ ಇದ್ದಾಗ, ಮೆದುಳಿನ ಮೇಲಿನ ಒತ್ತಡವನ್ನು ತಗ್ಗಿಸಿ, ಮನಸ್ಸನ್ನು ಬೇರೆಡೆಗೆ ಹೊರಳಿಸಿದಾಗ, ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಥಟ್ಟನೇ ಹೊಳೆಯುವ ಸಾಧ್ಯತೆ ಹೆಚ್ಚು. ಇದನ್ನು ಕೆಲವೊಮ್ಮೆ ಬಲ ಬದಿಯ ಮೆದುಳನ್ನು ಬಳಸುವುದು ಎಂದು ಕರೆಯುವ ವಾಡಿಕೆಯುಂಟು.

ಕೆಲವು ಮೆದುಳಿನ ಆಟಗಳು ಮತ್ತು ವ್ಯಾಯಾಮದಿಂದ, ತ್ರಿ-ಪರಿಮಾಣದಲ್ಲಿ (3-ಡೈಮೆನ್ಷನಲ್) ಚಿಂತನೆ ಮಾಡುವುದರ ಮೂಲಕ, ಚಿತ್ರ/ಮಾದರಿಗಳನ್ನು ರಚಿಸುವುದರ ಮೂಲಕ ಹೆಚ್ಚಿನ ಸೃಜನಾತ್ಮಕ ಯೋಚನೆಗಳು ತಲೆಯಲ್ಲಿ ಹುಟ್ಟುತ್ತವೆ ಎಂಬುದು ನಿಜ. ಇಂತಹ ವ್ಯಾಯಾಮವನ್ನು ಏಕಾಂಗಿಯಾಗಿ ಅಥವಾ ಗುಂಪುಗೂಡಿಯೂ ಮಾಡಬಹುದು. ಒಬ್ಬರ ಯೋಚನೆಗೆ ಇನ್ನೊಬ್ಬರು ಮೌಲ್ಯ ಸೇರಿಸಬಹುದು. ಬ್ರೇನ್ ಸ್ಟಾರ್ಮಿಂಗಿನ ಮುಖ್ಯ ನಿಯಮವೆಂದರೆ ಎಲ್ಲರಿಗೂ ಹೇಳುವ ಹಕ್ಕಿದೆ, ಎಲ್ಲರ ಯೋಚನೆಗಳಿಗೂ ಅದರದರ ಮೌಲ್ಯವಿದೆ ಮತ್ತು ಒಬ್ಬರ ಚಿಂತನೆಯ ಬಗ್ಗೆ ಯಾರೂ ಟೀಕೆ/ಟಿಪ್ಪಣಿ ಮಾಡುವಂತಿಲ್ಲ. ಹೀಗಿದ್ದಾಗ ಗುಂಪಿನಲ್ಲಿ ಹೊಸ-ಹೊಸ ಸೃಜನಾತ್ಮಕ ಯೋಚನೆಗಳಿಗೆ ಕೊರತೆ ಇರುವುದಿಲ್ಲ. ಆದರೂ ಕೆಲವರು ಮಿಕ್ಕವರಿಗಿಂತ ಹೆಚ್ಚಿನ ಯೋಚನೆಗಳನ್ನು ಮೇಜಿಗೆ ತರುತ್ತಾರೆ. ಅದು ಅವರ ಸ್ವಾಭಾವಿಕ ಶಕ್ತಿ.

“ಮೈಂಡ್ ಮ್ಯಾಪಿಂಗ್” ಎನ್ನುವ ಕಲೆ/ಆಟ/ವ್ಯಾಯಾಮ ಉಪಯೋಗಿಸಿ ಒಂದು ದೊಡ್ಡ ಹಾಳೆಯ ಮೇಲೆ ನಮ್ಮ ಮುಖ್ಯ ಯೋಚನೆ ಅಥವಾ ಗುರಿಯನ್ನು ಕೇಂದ್ರ ಬಿಂದುವನ್ನಾಗಿ ರಚಿಸಿಕೊಂಡು ಅದರಿಂದ ಹೊರಟ ಯೋಚನೆಗಳನ್ನು ರೇಖೆಗಳ ಸಹಾಯದಿಂದ ಕೇಂದ್ರಬಿಂದುವಿಗೆ ಸೇರಿಸುತ್ತಾ ಹೋಗುವುದು. ಕೆಲವು ಯೋಚನೆಗಳು ಕ್ಷಣಿಕ/ಕ್ಷುಲ್ಲಕವಾಗಿದ್ದು ಅವನ್ನು ಹೆಚ್ಚು ವಿಕಸಿತಗೊಳಿಸಲು ಬರದಿರಬಹುದು ಆದರೆ ಕೆಲವು ಯೋಚನೆಗಳಲ್ಲಿ ತುಂಬಾ ಸಾಧ್ಯತೆಗಳಿರುತ್ತವೆ. ಹೀಗೆ ಒಂದಕ್ಕೊಂದು ಕೊಂಡಿ ಬೆಳೆಯುತ್ತಾ ಹೋಗಿ ನಮಗೆ ಬೇಕಿದ್ದ ಪರಿಹಾರ ಸ್ಪಷ್ಟವಾಗುತ್ತಾ ಹೋಗಬಹುದು.

“ಮೈಂಡ್ ಮ್ಯಾಪಿಂಗ್” ಎನ್ನುವ  ಕಲೆಯನ್ನು ಟೋನಿ ಬುಜಾನ್ ಎಂಬವರು ಮೂಲವಾಗಿ ಕಂಡು ಹಿಡಿದಿದ್ದು, ಅದನ್ನು ಅನೇಕರು ಮೌಲ್ಯವೃದ್ಧಿಗೊಳಿಸಿರುತ್ತಾರೆ. ಅದೇ ತರಹ “ರಿಚ್ ಪಿಕ್ಚರ್ಸ್” ಮತ್ತು ’ಎನ್ವಿಸೇಜಿಂಗ್ ದಿ ಫ್ಯೂಚರ್” ಎಂಬ ಕಸರತ್ತುಗಳೂ ಸಹ ಸೃಜನಾತ್ಮಕ ಚಿಂತನೆಗೆ ಸಹಕಾರಿಯಾಗಿರುತ್ತವೆ.

ಸೃಜನಾತ್ಮಕ ಚಿಂತನೆಗೆ ಕೆಲವು ಸರಳ ಉದಾಹರಣೆಗಳು:

ಯೋಚಿಸಿ, ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹಾಗೆಯೇ ಎಂಟರ ಅರ್ಧ ಮೂರು ಆಗಲು ಸಾಧ್ಯವೇ? ಹದಿಮೂರರ ಆರ್ಧ ಆರೂವರೆ ಮತ್ತು ಎಂಟರ ಅರ್ಧ ನಾಲ್ಕು ಇದೇ ನಿಮ್ಮ ಕಡೆಯ ಉತ್ತರವೇ? (ಉತ್ತರ ಲೇಖನದ ಕೊನೆಯಲ್ಲಿದೆ).

ಸರಕಾರೇತರ ಸ್ವಯಂಸೇವಿ ಸಂಸ್ಥೆಯೊಂದರ ಸಹಯೋಗದೊಂದಿಗೆ ಒಮ್ಮೆ ಕೊಳಗೇರಿ ಯುವ ಮಕ್ಕಳಿಗೆ ಪಾಠ ಮಾಡುತ್ತಿರುವಾಗ, ನಾನೊಂದು ವಿಚಿತ್ರವಾದ ಪ್ರಶ್ನೆ ಕೇಳಿದೆ: ಒಂದು ಅಂಡರ್ ಬ್ರಿಡ್ಜಿನಲ್ಲಿ ಹೋಗುತ್ತಿದ್ದ ಸರಕು ವಾಹನವೊಂದು, ಎತ್ತರದ ಎಡವಟ್ಟಿನಿಂದಾಗಿ, ಬ್ರಿಡ್ಜಿನ ಕೆಳಗೆ ಸಿಕ್ಕಿಕೊಂಡಿದೆ. ಹಿಂದಕ್ಕೂ ಮುಂದಕ್ಕೂ ಹೋಗಲಾದದೆ, ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ, ಜನ ಕಿರುಚಾಡುತ್ತಿದ್ದಾರೆ. ಅಲ್ಲಿಗೆ ಬಂದ ಅಭಿಯಂತರುಗಳು, ಪರಿಸ್ಥಿತಿಯನ್ನು ನಿರೀಕ್ಷಿಸಿ, “ಕೇವಲ ಒಂದು ಅಂಗುಲ (ಇಂಚು) ಎತ್ತರದ ಎಡವಟ್ಟಿನಿಂದಾಗಿ ಈ ವಾಹನ ಸಿಲುಕಿಕೊಂಡಿದೆ. ವಾಹನದ ಒಂದು ಅಂಗುಲ ಮೇಲ್ಭಾಗವನ್ನು ಕತ್ತರಿಸಿ ತೆಗೆಯಬೇಕು ಅಥವಾ ಸೇತುವೆಯ ಕೆಳ ಭಾಗದ ಒಂದು ಅಂಗುಲ ಕತ್ತರಿಸಬೇಕು. ಹೋಗಿ ಕತ್ತರಿಸುವ ಸಲಕರಣೆ ತನ್ನಿ” ಎಂದು ಆದೇಶ ನೀಡಿದರು. “ಮಕ್ಕಳೇ, ನಿಮಗೆ ಇಲ್ಲಿ ಯಾವುದು ಸರಿಯಾದ ಕ್ರಮ ಎಂದು ಅನಿಸುತ್ತದೆ” ಎಂದು ಕೇಳಿದೆ. ಒಬ್ಬೊಬ್ಬರು ಒಂದೊಂದು ಉತ್ತರ ನೀಡಿದರು. ಅಷ್ಟೇನು ಜಾಣನಂತೆ ಕಾಣುತ್ತಿಲ್ಲದ ಓರ್ವಹುಡುಗನನ್ನು ನಾನೇ ಬಲವಂತದಿಂದ ಉತ್ತರಿಸಲು ಹೇಳಿದೆ. ಆತ “ವಾಹನದ ನಾಲ್ಕೂ ಚಕ್ರಗಳಿಂದ ಗಾಳಿ ತೆಗೆದಲ್ಲಿ ವಾಹನ ತಾನಾಗಿಯೇ ಒಂದು ಅಂಗುಲ ಕೆಳಗೆ ಬರುವುದಿಲ್ಲವೇ?” ಎಂದು ಹೇಳಿದ. ಆ ಹುಡುಗ ರಸ್ತೆ ಬದಿಯಲ್ಲಿಯ ದ್ವಿಚಕ್ರ ವಾಹನ ದುರಸ್ತಿ/ಪಂಚರ್ ಶಾಪಿನಲ್ಲಿ ಕೆಲಸ ಮಾಡುವ ಹದಿನಾರು ವರ್ಷದ ಹುಡುಗ. ಹಾಗಾಗಿ ಸೃಜನಾತ್ಮಕ ಚಿಂತನೆ ಯಾರೊಬ್ಬರ ಖಾಸಗಿ ಆಸ್ತಿ ಅಲ್ಲ. ಎಲ್ಲರೂ ಎಲ್ಲಾ ಕಾಲದಲ್ಲೂ ಪಡೆಯಬಹುದಾದ ಕಲೆ.

ಸೃಜನಾತ್ಮಕ ಚಿಂತನೆಗೆ ಯಾವುದೇ ಇತಿ-ಮಿತಿ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (ಯು.ಪಿ.ಎಸ್.ಸಿ., ಮುಂತಾದ) ಇಂತಹ ಉತ್ತರಕ್ಕೆ ಹೆಚ್ಚಿನ ಅಂಕಗಳು ದೊರೆಯುತ್ತವೆ. ನೀವೂ ಸೃಜನಾತ್ಮಕರಾಗಿ. ಮಕ್ಕಳಿಗೂ ಕಲಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...