Homeಮುಖಪುಟಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

ಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

- Advertisement -
- Advertisement -

ಜೀವನ ಕಲೆಗಳು ಅಂಕಣ: 9

ಸೃಜನಾತ್ಮಕ ಚಿಂತನೆ ಎಂದರೆ ಸಮಸ್ಯೆಯನ್ನು ಹೊಸ ದೃಷ್ಟಿಕೋನದಿಂದ ವೀಕ್ಷಿಸಿ, ಪಾರಂಪರಿಕವಲ್ಲದ ಪರಿಹಾರ ಸೂಚಿಸುವ ಪ್ರಯತ್ನ. ಇದು ಪ್ರಾರಂಭದಲ್ಲಿ ವಿಚಲಿತಗೊಳಿಸಬಹುದು. ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ಮುಕ್ತ ಆಲೋಚನೆ (ಓಪನ್ ಮೈಂಡ್). ಸೃಜನಾತ್ಮಕ ಚಿಂತನೆಯನ್ನು ವ್ಯವಸ್ಥಿತ ಅಥವಾ ಅವ್ಯಸ್ಥಿತ ಪ್ರಕ್ರಿಯೆಯಿಂದ ಚಾಲನೆಗೆ ತರಬಹುದು. ಚಿಂತನೆ ಸಹಜವಾಗಿ ಬಂದಿರಬಹುದು ಅಥವಾ ಅಕಸ್ಮಿಕವೂ ಆಗಿರಬಹುದು. ಯಾವುದೇ ಪ್ರಯತ್ನವಿಲ್ಲದೆ ಸೃಜನಾತ್ಮಕ ಚಿಂತನೆ ತಾನಾಗಿಯೇ ನಡೆಯುತ್ತದೆ ಆದರೆ ಆಕಸ್ಮಿಕವಾಗಿ. ಪ್ರಯತ್ನಪೂರ್ವಕ ಸೃಜನಾತ್ಮಕ ಚಿಂತನೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಆದರೆ ಇದ್ದಕ್ಕಿದಂತೆ ಹೊಳೆದ ಉಪಾಯ ಕೂಡಲೇ ಮಹತ್ತರ ಬದಲಾವಣೆ ತರಬಲ್ಲದು. ಇದನ್ನು ಚೌಕಟ್ಟಿನ ಹೊರಗಿನ ಚಿಂತನೆ (ಥಿಂಕಿಂಗ್ ಔಟ್ ಆಫ್ ದಿ ಬಾಕ್ಸ್) ಎನ್ನುತ್ತಾರೆ.
ಕೆಲವು ವಿಶೇಷ ಉಪಾಯಗಳಿಂದ ಈ ಸೃಜನಾತ್ಮಕ ಚಿಂತನೆ ಬೇಗಲೇ ಆಗುವಂತೆ ಮಾಡಬಹುದು. ಇದರಿಂದ ಹೊಸ ರೀತಿಯ ಯೋಚನೆಗಳು ಏಕ ಕಾಲಕ್ಕೆ ಬಂದು ಅಥವಾ ಒಂದರಿಂದ ಒಂದು ಹುಟ್ಟಿಕೊಂಡು ಅಥವಾ ಒಂದಕ್ಕೊಂದು ಸೇರಿ, ಹೊಸ ರೀತಿಯ ಉಪಾಯ ಅಥವಾ ಪ್ರಕ್ರಿಯೆಗೆ ದಾರಿ ಮಾಡಿಕೊಡಬಹುದು. ಇದನ್ನು ಬ್ರೇನ್ ಸ್ಟಾರ್ಮಿಂಗ್ ಎನ್ನುತ್ತಾರೆ. ಒಂದಕ್ಕಿಂತ ಹೆಚ್ಚು ತಲೆಗಳು ಒಟ್ಟಿಗೆ ಕೆಲಸ ಮಾಡಿದಾಗ ಪರಿಣಾಮ ಇನ್ನೂ ಹೆಚ್ಚುತ್ತದೆ.

ನಮ್ಮ ಎಡ ಬದಿಯ ಮೆದುಳು ವ್ಯವಸ್ಥಿತ ಸಾಧಾರಣ ಯೋಚನೆಗಳಿಗೂ (ತರ್ಕ, ಗಣಿತ, ಯಾಂತ್ರಿಕ ಕೆಲಸ) ಮತ್ತು ಬಲಬದಿಯ ಮೆದುಳು ಸೃಜನಾತ್ಮಕ ಚಿಂತನೆಗೂ ಬಳಕೆಯಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇತ್ತೀಚಿನ ವೈದ್ಯಕೀಯ ಪರಿಶೋಧನೆಯ ವರದಿ ಪ್ರಕಾರ ಎರಡೂ ಬದಿಯ ಮೆದುಳು ಏಕ ಕಾಲಕ್ಕೆ, ಒಂದೇ ಸಂಕೀರ್ಣ ವಿಚಾರದ ಬಗ್ಗೆ ಕೆಲಸ ಮಾಡುತ್ತವೆ ಎಂಬುದು ಸಿದ್ಧವಾಗಿದೆ. ಆದ್ದರಿಂದ ಎಡ-ಬಲ ಮೆದುಳಿನ ಪ್ರವೃತ್ತಿ ಎನ್ನುವುದು ತಪ್ಪು ಪರಿಕಲ್ಪನೆ. ಯಾವುದೋ ಒಂದು ಯೋಚನೆಯ ಮೇಲೆ ತೀರಾ ಮಗ್ನರಾಗಿ ಏನೂ ತೋಚದೇ ಇದ್ದಾಗ, ಮೆದುಳಿನ ಮೇಲಿನ ಒತ್ತಡವನ್ನು ತಗ್ಗಿಸಿ, ಮನಸ್ಸನ್ನು ಬೇರೆಡೆಗೆ ಹೊರಳಿಸಿದಾಗ, ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಥಟ್ಟನೇ ಹೊಳೆಯುವ ಸಾಧ್ಯತೆ ಹೆಚ್ಚು. ಇದನ್ನು ಕೆಲವೊಮ್ಮೆ ಬಲ ಬದಿಯ ಮೆದುಳನ್ನು ಬಳಸುವುದು ಎಂದು ಕರೆಯುವ ವಾಡಿಕೆಯುಂಟು.

ಕೆಲವು ಮೆದುಳಿನ ಆಟಗಳು ಮತ್ತು ವ್ಯಾಯಾಮದಿಂದ, ತ್ರಿ-ಪರಿಮಾಣದಲ್ಲಿ (3-ಡೈಮೆನ್ಷನಲ್) ಚಿಂತನೆ ಮಾಡುವುದರ ಮೂಲಕ, ಚಿತ್ರ/ಮಾದರಿಗಳನ್ನು ರಚಿಸುವುದರ ಮೂಲಕ ಹೆಚ್ಚಿನ ಸೃಜನಾತ್ಮಕ ಯೋಚನೆಗಳು ತಲೆಯಲ್ಲಿ ಹುಟ್ಟುತ್ತವೆ ಎಂಬುದು ನಿಜ. ಇಂತಹ ವ್ಯಾಯಾಮವನ್ನು ಏಕಾಂಗಿಯಾಗಿ ಅಥವಾ ಗುಂಪುಗೂಡಿಯೂ ಮಾಡಬಹುದು. ಒಬ್ಬರ ಯೋಚನೆಗೆ ಇನ್ನೊಬ್ಬರು ಮೌಲ್ಯ ಸೇರಿಸಬಹುದು. ಬ್ರೇನ್ ಸ್ಟಾರ್ಮಿಂಗಿನ ಮುಖ್ಯ ನಿಯಮವೆಂದರೆ ಎಲ್ಲರಿಗೂ ಹೇಳುವ ಹಕ್ಕಿದೆ, ಎಲ್ಲರ ಯೋಚನೆಗಳಿಗೂ ಅದರದರ ಮೌಲ್ಯವಿದೆ ಮತ್ತು ಒಬ್ಬರ ಚಿಂತನೆಯ ಬಗ್ಗೆ ಯಾರೂ ಟೀಕೆ/ಟಿಪ್ಪಣಿ ಮಾಡುವಂತಿಲ್ಲ. ಹೀಗಿದ್ದಾಗ ಗುಂಪಿನಲ್ಲಿ ಹೊಸ-ಹೊಸ ಸೃಜನಾತ್ಮಕ ಯೋಚನೆಗಳಿಗೆ ಕೊರತೆ ಇರುವುದಿಲ್ಲ. ಆದರೂ ಕೆಲವರು ಮಿಕ್ಕವರಿಗಿಂತ ಹೆಚ್ಚಿನ ಯೋಚನೆಗಳನ್ನು ಮೇಜಿಗೆ ತರುತ್ತಾರೆ. ಅದು ಅವರ ಸ್ವಾಭಾವಿಕ ಶಕ್ತಿ.

“ಮೈಂಡ್ ಮ್ಯಾಪಿಂಗ್” ಎನ್ನುವ ಕಲೆ/ಆಟ/ವ್ಯಾಯಾಮ ಉಪಯೋಗಿಸಿ ಒಂದು ದೊಡ್ಡ ಹಾಳೆಯ ಮೇಲೆ ನಮ್ಮ ಮುಖ್ಯ ಯೋಚನೆ ಅಥವಾ ಗುರಿಯನ್ನು ಕೇಂದ್ರ ಬಿಂದುವನ್ನಾಗಿ ರಚಿಸಿಕೊಂಡು ಅದರಿಂದ ಹೊರಟ ಯೋಚನೆಗಳನ್ನು ರೇಖೆಗಳ ಸಹಾಯದಿಂದ ಕೇಂದ್ರಬಿಂದುವಿಗೆ ಸೇರಿಸುತ್ತಾ ಹೋಗುವುದು. ಕೆಲವು ಯೋಚನೆಗಳು ಕ್ಷಣಿಕ/ಕ್ಷುಲ್ಲಕವಾಗಿದ್ದು ಅವನ್ನು ಹೆಚ್ಚು ವಿಕಸಿತಗೊಳಿಸಲು ಬರದಿರಬಹುದು ಆದರೆ ಕೆಲವು ಯೋಚನೆಗಳಲ್ಲಿ ತುಂಬಾ ಸಾಧ್ಯತೆಗಳಿರುತ್ತವೆ. ಹೀಗೆ ಒಂದಕ್ಕೊಂದು ಕೊಂಡಿ ಬೆಳೆಯುತ್ತಾ ಹೋಗಿ ನಮಗೆ ಬೇಕಿದ್ದ ಪರಿಹಾರ ಸ್ಪಷ್ಟವಾಗುತ್ತಾ ಹೋಗಬಹುದು.

“ಮೈಂಡ್ ಮ್ಯಾಪಿಂಗ್” ಎನ್ನುವ  ಕಲೆಯನ್ನು ಟೋನಿ ಬುಜಾನ್ ಎಂಬವರು ಮೂಲವಾಗಿ ಕಂಡು ಹಿಡಿದಿದ್ದು, ಅದನ್ನು ಅನೇಕರು ಮೌಲ್ಯವೃದ್ಧಿಗೊಳಿಸಿರುತ್ತಾರೆ. ಅದೇ ತರಹ “ರಿಚ್ ಪಿಕ್ಚರ್ಸ್” ಮತ್ತು ’ಎನ್ವಿಸೇಜಿಂಗ್ ದಿ ಫ್ಯೂಚರ್” ಎಂಬ ಕಸರತ್ತುಗಳೂ ಸಹ ಸೃಜನಾತ್ಮಕ ಚಿಂತನೆಗೆ ಸಹಕಾರಿಯಾಗಿರುತ್ತವೆ.

ಸೃಜನಾತ್ಮಕ ಚಿಂತನೆಗೆ ಕೆಲವು ಸರಳ ಉದಾಹರಣೆಗಳು:

ಯೋಚಿಸಿ, ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹಾಗೆಯೇ ಎಂಟರ ಅರ್ಧ ಮೂರು ಆಗಲು ಸಾಧ್ಯವೇ? ಹದಿಮೂರರ ಆರ್ಧ ಆರೂವರೆ ಮತ್ತು ಎಂಟರ ಅರ್ಧ ನಾಲ್ಕು ಇದೇ ನಿಮ್ಮ ಕಡೆಯ ಉತ್ತರವೇ? (ಉತ್ತರ ಲೇಖನದ ಕೊನೆಯಲ್ಲಿದೆ).

ಸರಕಾರೇತರ ಸ್ವಯಂಸೇವಿ ಸಂಸ್ಥೆಯೊಂದರ ಸಹಯೋಗದೊಂದಿಗೆ ಒಮ್ಮೆ ಕೊಳಗೇರಿ ಯುವ ಮಕ್ಕಳಿಗೆ ಪಾಠ ಮಾಡುತ್ತಿರುವಾಗ, ನಾನೊಂದು ವಿಚಿತ್ರವಾದ ಪ್ರಶ್ನೆ ಕೇಳಿದೆ: ಒಂದು ಅಂಡರ್ ಬ್ರಿಡ್ಜಿನಲ್ಲಿ ಹೋಗುತ್ತಿದ್ದ ಸರಕು ವಾಹನವೊಂದು, ಎತ್ತರದ ಎಡವಟ್ಟಿನಿಂದಾಗಿ, ಬ್ರಿಡ್ಜಿನ ಕೆಳಗೆ ಸಿಕ್ಕಿಕೊಂಡಿದೆ. ಹಿಂದಕ್ಕೂ ಮುಂದಕ್ಕೂ ಹೋಗಲಾದದೆ, ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ, ಜನ ಕಿರುಚಾಡುತ್ತಿದ್ದಾರೆ. ಅಲ್ಲಿಗೆ ಬಂದ ಅಭಿಯಂತರುಗಳು, ಪರಿಸ್ಥಿತಿಯನ್ನು ನಿರೀಕ್ಷಿಸಿ, “ಕೇವಲ ಒಂದು ಅಂಗುಲ (ಇಂಚು) ಎತ್ತರದ ಎಡವಟ್ಟಿನಿಂದಾಗಿ ಈ ವಾಹನ ಸಿಲುಕಿಕೊಂಡಿದೆ. ವಾಹನದ ಒಂದು ಅಂಗುಲ ಮೇಲ್ಭಾಗವನ್ನು ಕತ್ತರಿಸಿ ತೆಗೆಯಬೇಕು ಅಥವಾ ಸೇತುವೆಯ ಕೆಳ ಭಾಗದ ಒಂದು ಅಂಗುಲ ಕತ್ತರಿಸಬೇಕು. ಹೋಗಿ ಕತ್ತರಿಸುವ ಸಲಕರಣೆ ತನ್ನಿ” ಎಂದು ಆದೇಶ ನೀಡಿದರು. “ಮಕ್ಕಳೇ, ನಿಮಗೆ ಇಲ್ಲಿ ಯಾವುದು ಸರಿಯಾದ ಕ್ರಮ ಎಂದು ಅನಿಸುತ್ತದೆ” ಎಂದು ಕೇಳಿದೆ. ಒಬ್ಬೊಬ್ಬರು ಒಂದೊಂದು ಉತ್ತರ ನೀಡಿದರು. ಅಷ್ಟೇನು ಜಾಣನಂತೆ ಕಾಣುತ್ತಿಲ್ಲದ ಓರ್ವಹುಡುಗನನ್ನು ನಾನೇ ಬಲವಂತದಿಂದ ಉತ್ತರಿಸಲು ಹೇಳಿದೆ. ಆತ “ವಾಹನದ ನಾಲ್ಕೂ ಚಕ್ರಗಳಿಂದ ಗಾಳಿ ತೆಗೆದಲ್ಲಿ ವಾಹನ ತಾನಾಗಿಯೇ ಒಂದು ಅಂಗುಲ ಕೆಳಗೆ ಬರುವುದಿಲ್ಲವೇ?” ಎಂದು ಹೇಳಿದ. ಆ ಹುಡುಗ ರಸ್ತೆ ಬದಿಯಲ್ಲಿಯ ದ್ವಿಚಕ್ರ ವಾಹನ ದುರಸ್ತಿ/ಪಂಚರ್ ಶಾಪಿನಲ್ಲಿ ಕೆಲಸ ಮಾಡುವ ಹದಿನಾರು ವರ್ಷದ ಹುಡುಗ. ಹಾಗಾಗಿ ಸೃಜನಾತ್ಮಕ ಚಿಂತನೆ ಯಾರೊಬ್ಬರ ಖಾಸಗಿ ಆಸ್ತಿ ಅಲ್ಲ. ಎಲ್ಲರೂ ಎಲ್ಲಾ ಕಾಲದಲ್ಲೂ ಪಡೆಯಬಹುದಾದ ಕಲೆ.

ಸೃಜನಾತ್ಮಕ ಚಿಂತನೆಗೆ ಯಾವುದೇ ಇತಿ-ಮಿತಿ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (ಯು.ಪಿ.ಎಸ್.ಸಿ., ಮುಂತಾದ) ಇಂತಹ ಉತ್ತರಕ್ಕೆ ಹೆಚ್ಚಿನ ಅಂಕಗಳು ದೊರೆಯುತ್ತವೆ. ನೀವೂ ಸೃಜನಾತ್ಮಕರಾಗಿ. ಮಕ್ಕಳಿಗೂ ಕಲಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...