Homeಮುಖಪುಟಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

ಸೃಜನಾತ್ಮಕ ಚಿಂತನೆ : ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹೌದು ಸಾಧ್ಯ

- Advertisement -
- Advertisement -

ಜೀವನ ಕಲೆಗಳು ಅಂಕಣ: 9

ಸೃಜನಾತ್ಮಕ ಚಿಂತನೆ ಎಂದರೆ ಸಮಸ್ಯೆಯನ್ನು ಹೊಸ ದೃಷ್ಟಿಕೋನದಿಂದ ವೀಕ್ಷಿಸಿ, ಪಾರಂಪರಿಕವಲ್ಲದ ಪರಿಹಾರ ಸೂಚಿಸುವ ಪ್ರಯತ್ನ. ಇದು ಪ್ರಾರಂಭದಲ್ಲಿ ವಿಚಲಿತಗೊಳಿಸಬಹುದು. ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ಮುಕ್ತ ಆಲೋಚನೆ (ಓಪನ್ ಮೈಂಡ್). ಸೃಜನಾತ್ಮಕ ಚಿಂತನೆಯನ್ನು ವ್ಯವಸ್ಥಿತ ಅಥವಾ ಅವ್ಯಸ್ಥಿತ ಪ್ರಕ್ರಿಯೆಯಿಂದ ಚಾಲನೆಗೆ ತರಬಹುದು. ಚಿಂತನೆ ಸಹಜವಾಗಿ ಬಂದಿರಬಹುದು ಅಥವಾ ಅಕಸ್ಮಿಕವೂ ಆಗಿರಬಹುದು. ಯಾವುದೇ ಪ್ರಯತ್ನವಿಲ್ಲದೆ ಸೃಜನಾತ್ಮಕ ಚಿಂತನೆ ತಾನಾಗಿಯೇ ನಡೆಯುತ್ತದೆ ಆದರೆ ಆಕಸ್ಮಿಕವಾಗಿ. ಪ್ರಯತ್ನಪೂರ್ವಕ ಸೃಜನಾತ್ಮಕ ಚಿಂತನೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಆದರೆ ಇದ್ದಕ್ಕಿದಂತೆ ಹೊಳೆದ ಉಪಾಯ ಕೂಡಲೇ ಮಹತ್ತರ ಬದಲಾವಣೆ ತರಬಲ್ಲದು. ಇದನ್ನು ಚೌಕಟ್ಟಿನ ಹೊರಗಿನ ಚಿಂತನೆ (ಥಿಂಕಿಂಗ್ ಔಟ್ ಆಫ್ ದಿ ಬಾಕ್ಸ್) ಎನ್ನುತ್ತಾರೆ.
ಕೆಲವು ವಿಶೇಷ ಉಪಾಯಗಳಿಂದ ಈ ಸೃಜನಾತ್ಮಕ ಚಿಂತನೆ ಬೇಗಲೇ ಆಗುವಂತೆ ಮಾಡಬಹುದು. ಇದರಿಂದ ಹೊಸ ರೀತಿಯ ಯೋಚನೆಗಳು ಏಕ ಕಾಲಕ್ಕೆ ಬಂದು ಅಥವಾ ಒಂದರಿಂದ ಒಂದು ಹುಟ್ಟಿಕೊಂಡು ಅಥವಾ ಒಂದಕ್ಕೊಂದು ಸೇರಿ, ಹೊಸ ರೀತಿಯ ಉಪಾಯ ಅಥವಾ ಪ್ರಕ್ರಿಯೆಗೆ ದಾರಿ ಮಾಡಿಕೊಡಬಹುದು. ಇದನ್ನು ಬ್ರೇನ್ ಸ್ಟಾರ್ಮಿಂಗ್ ಎನ್ನುತ್ತಾರೆ. ಒಂದಕ್ಕಿಂತ ಹೆಚ್ಚು ತಲೆಗಳು ಒಟ್ಟಿಗೆ ಕೆಲಸ ಮಾಡಿದಾಗ ಪರಿಣಾಮ ಇನ್ನೂ ಹೆಚ್ಚುತ್ತದೆ.

ನಮ್ಮ ಎಡ ಬದಿಯ ಮೆದುಳು ವ್ಯವಸ್ಥಿತ ಸಾಧಾರಣ ಯೋಚನೆಗಳಿಗೂ (ತರ್ಕ, ಗಣಿತ, ಯಾಂತ್ರಿಕ ಕೆಲಸ) ಮತ್ತು ಬಲಬದಿಯ ಮೆದುಳು ಸೃಜನಾತ್ಮಕ ಚಿಂತನೆಗೂ ಬಳಕೆಯಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇತ್ತೀಚಿನ ವೈದ್ಯಕೀಯ ಪರಿಶೋಧನೆಯ ವರದಿ ಪ್ರಕಾರ ಎರಡೂ ಬದಿಯ ಮೆದುಳು ಏಕ ಕಾಲಕ್ಕೆ, ಒಂದೇ ಸಂಕೀರ್ಣ ವಿಚಾರದ ಬಗ್ಗೆ ಕೆಲಸ ಮಾಡುತ್ತವೆ ಎಂಬುದು ಸಿದ್ಧವಾಗಿದೆ. ಆದ್ದರಿಂದ ಎಡ-ಬಲ ಮೆದುಳಿನ ಪ್ರವೃತ್ತಿ ಎನ್ನುವುದು ತಪ್ಪು ಪರಿಕಲ್ಪನೆ. ಯಾವುದೋ ಒಂದು ಯೋಚನೆಯ ಮೇಲೆ ತೀರಾ ಮಗ್ನರಾಗಿ ಏನೂ ತೋಚದೇ ಇದ್ದಾಗ, ಮೆದುಳಿನ ಮೇಲಿನ ಒತ್ತಡವನ್ನು ತಗ್ಗಿಸಿ, ಮನಸ್ಸನ್ನು ಬೇರೆಡೆಗೆ ಹೊರಳಿಸಿದಾಗ, ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಥಟ್ಟನೇ ಹೊಳೆಯುವ ಸಾಧ್ಯತೆ ಹೆಚ್ಚು. ಇದನ್ನು ಕೆಲವೊಮ್ಮೆ ಬಲ ಬದಿಯ ಮೆದುಳನ್ನು ಬಳಸುವುದು ಎಂದು ಕರೆಯುವ ವಾಡಿಕೆಯುಂಟು.

ಕೆಲವು ಮೆದುಳಿನ ಆಟಗಳು ಮತ್ತು ವ್ಯಾಯಾಮದಿಂದ, ತ್ರಿ-ಪರಿಮಾಣದಲ್ಲಿ (3-ಡೈಮೆನ್ಷನಲ್) ಚಿಂತನೆ ಮಾಡುವುದರ ಮೂಲಕ, ಚಿತ್ರ/ಮಾದರಿಗಳನ್ನು ರಚಿಸುವುದರ ಮೂಲಕ ಹೆಚ್ಚಿನ ಸೃಜನಾತ್ಮಕ ಯೋಚನೆಗಳು ತಲೆಯಲ್ಲಿ ಹುಟ್ಟುತ್ತವೆ ಎಂಬುದು ನಿಜ. ಇಂತಹ ವ್ಯಾಯಾಮವನ್ನು ಏಕಾಂಗಿಯಾಗಿ ಅಥವಾ ಗುಂಪುಗೂಡಿಯೂ ಮಾಡಬಹುದು. ಒಬ್ಬರ ಯೋಚನೆಗೆ ಇನ್ನೊಬ್ಬರು ಮೌಲ್ಯ ಸೇರಿಸಬಹುದು. ಬ್ರೇನ್ ಸ್ಟಾರ್ಮಿಂಗಿನ ಮುಖ್ಯ ನಿಯಮವೆಂದರೆ ಎಲ್ಲರಿಗೂ ಹೇಳುವ ಹಕ್ಕಿದೆ, ಎಲ್ಲರ ಯೋಚನೆಗಳಿಗೂ ಅದರದರ ಮೌಲ್ಯವಿದೆ ಮತ್ತು ಒಬ್ಬರ ಚಿಂತನೆಯ ಬಗ್ಗೆ ಯಾರೂ ಟೀಕೆ/ಟಿಪ್ಪಣಿ ಮಾಡುವಂತಿಲ್ಲ. ಹೀಗಿದ್ದಾಗ ಗುಂಪಿನಲ್ಲಿ ಹೊಸ-ಹೊಸ ಸೃಜನಾತ್ಮಕ ಯೋಚನೆಗಳಿಗೆ ಕೊರತೆ ಇರುವುದಿಲ್ಲ. ಆದರೂ ಕೆಲವರು ಮಿಕ್ಕವರಿಗಿಂತ ಹೆಚ್ಚಿನ ಯೋಚನೆಗಳನ್ನು ಮೇಜಿಗೆ ತರುತ್ತಾರೆ. ಅದು ಅವರ ಸ್ವಾಭಾವಿಕ ಶಕ್ತಿ.

“ಮೈಂಡ್ ಮ್ಯಾಪಿಂಗ್” ಎನ್ನುವ ಕಲೆ/ಆಟ/ವ್ಯಾಯಾಮ ಉಪಯೋಗಿಸಿ ಒಂದು ದೊಡ್ಡ ಹಾಳೆಯ ಮೇಲೆ ನಮ್ಮ ಮುಖ್ಯ ಯೋಚನೆ ಅಥವಾ ಗುರಿಯನ್ನು ಕೇಂದ್ರ ಬಿಂದುವನ್ನಾಗಿ ರಚಿಸಿಕೊಂಡು ಅದರಿಂದ ಹೊರಟ ಯೋಚನೆಗಳನ್ನು ರೇಖೆಗಳ ಸಹಾಯದಿಂದ ಕೇಂದ್ರಬಿಂದುವಿಗೆ ಸೇರಿಸುತ್ತಾ ಹೋಗುವುದು. ಕೆಲವು ಯೋಚನೆಗಳು ಕ್ಷಣಿಕ/ಕ್ಷುಲ್ಲಕವಾಗಿದ್ದು ಅವನ್ನು ಹೆಚ್ಚು ವಿಕಸಿತಗೊಳಿಸಲು ಬರದಿರಬಹುದು ಆದರೆ ಕೆಲವು ಯೋಚನೆಗಳಲ್ಲಿ ತುಂಬಾ ಸಾಧ್ಯತೆಗಳಿರುತ್ತವೆ. ಹೀಗೆ ಒಂದಕ್ಕೊಂದು ಕೊಂಡಿ ಬೆಳೆಯುತ್ತಾ ಹೋಗಿ ನಮಗೆ ಬೇಕಿದ್ದ ಪರಿಹಾರ ಸ್ಪಷ್ಟವಾಗುತ್ತಾ ಹೋಗಬಹುದು.

“ಮೈಂಡ್ ಮ್ಯಾಪಿಂಗ್” ಎನ್ನುವ  ಕಲೆಯನ್ನು ಟೋನಿ ಬುಜಾನ್ ಎಂಬವರು ಮೂಲವಾಗಿ ಕಂಡು ಹಿಡಿದಿದ್ದು, ಅದನ್ನು ಅನೇಕರು ಮೌಲ್ಯವೃದ್ಧಿಗೊಳಿಸಿರುತ್ತಾರೆ. ಅದೇ ತರಹ “ರಿಚ್ ಪಿಕ್ಚರ್ಸ್” ಮತ್ತು ’ಎನ್ವಿಸೇಜಿಂಗ್ ದಿ ಫ್ಯೂಚರ್” ಎಂಬ ಕಸರತ್ತುಗಳೂ ಸಹ ಸೃಜನಾತ್ಮಕ ಚಿಂತನೆಗೆ ಸಹಕಾರಿಯಾಗಿರುತ್ತವೆ.

ಸೃಜನಾತ್ಮಕ ಚಿಂತನೆಗೆ ಕೆಲವು ಸರಳ ಉದಾಹರಣೆಗಳು:

ಯೋಚಿಸಿ, ಹದಿಮೂರರ ಅರ್ಧ ಎರಡು, ಹನ್ನೊಂದು ಅಥವಾ ಎಂಟಾಗಲು ಸಾಧ್ಯವೇ? ಹಾಗೆಯೇ ಎಂಟರ ಅರ್ಧ ಮೂರು ಆಗಲು ಸಾಧ್ಯವೇ? ಹದಿಮೂರರ ಆರ್ಧ ಆರೂವರೆ ಮತ್ತು ಎಂಟರ ಅರ್ಧ ನಾಲ್ಕು ಇದೇ ನಿಮ್ಮ ಕಡೆಯ ಉತ್ತರವೇ? (ಉತ್ತರ ಲೇಖನದ ಕೊನೆಯಲ್ಲಿದೆ).

ಸರಕಾರೇತರ ಸ್ವಯಂಸೇವಿ ಸಂಸ್ಥೆಯೊಂದರ ಸಹಯೋಗದೊಂದಿಗೆ ಒಮ್ಮೆ ಕೊಳಗೇರಿ ಯುವ ಮಕ್ಕಳಿಗೆ ಪಾಠ ಮಾಡುತ್ತಿರುವಾಗ, ನಾನೊಂದು ವಿಚಿತ್ರವಾದ ಪ್ರಶ್ನೆ ಕೇಳಿದೆ: ಒಂದು ಅಂಡರ್ ಬ್ರಿಡ್ಜಿನಲ್ಲಿ ಹೋಗುತ್ತಿದ್ದ ಸರಕು ವಾಹನವೊಂದು, ಎತ್ತರದ ಎಡವಟ್ಟಿನಿಂದಾಗಿ, ಬ್ರಿಡ್ಜಿನ ಕೆಳಗೆ ಸಿಕ್ಕಿಕೊಂಡಿದೆ. ಹಿಂದಕ್ಕೂ ಮುಂದಕ್ಕೂ ಹೋಗಲಾದದೆ, ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ, ಜನ ಕಿರುಚಾಡುತ್ತಿದ್ದಾರೆ. ಅಲ್ಲಿಗೆ ಬಂದ ಅಭಿಯಂತರುಗಳು, ಪರಿಸ್ಥಿತಿಯನ್ನು ನಿರೀಕ್ಷಿಸಿ, “ಕೇವಲ ಒಂದು ಅಂಗುಲ (ಇಂಚು) ಎತ್ತರದ ಎಡವಟ್ಟಿನಿಂದಾಗಿ ಈ ವಾಹನ ಸಿಲುಕಿಕೊಂಡಿದೆ. ವಾಹನದ ಒಂದು ಅಂಗುಲ ಮೇಲ್ಭಾಗವನ್ನು ಕತ್ತರಿಸಿ ತೆಗೆಯಬೇಕು ಅಥವಾ ಸೇತುವೆಯ ಕೆಳ ಭಾಗದ ಒಂದು ಅಂಗುಲ ಕತ್ತರಿಸಬೇಕು. ಹೋಗಿ ಕತ್ತರಿಸುವ ಸಲಕರಣೆ ತನ್ನಿ” ಎಂದು ಆದೇಶ ನೀಡಿದರು. “ಮಕ್ಕಳೇ, ನಿಮಗೆ ಇಲ್ಲಿ ಯಾವುದು ಸರಿಯಾದ ಕ್ರಮ ಎಂದು ಅನಿಸುತ್ತದೆ” ಎಂದು ಕೇಳಿದೆ. ಒಬ್ಬೊಬ್ಬರು ಒಂದೊಂದು ಉತ್ತರ ನೀಡಿದರು. ಅಷ್ಟೇನು ಜಾಣನಂತೆ ಕಾಣುತ್ತಿಲ್ಲದ ಓರ್ವಹುಡುಗನನ್ನು ನಾನೇ ಬಲವಂತದಿಂದ ಉತ್ತರಿಸಲು ಹೇಳಿದೆ. ಆತ “ವಾಹನದ ನಾಲ್ಕೂ ಚಕ್ರಗಳಿಂದ ಗಾಳಿ ತೆಗೆದಲ್ಲಿ ವಾಹನ ತಾನಾಗಿಯೇ ಒಂದು ಅಂಗುಲ ಕೆಳಗೆ ಬರುವುದಿಲ್ಲವೇ?” ಎಂದು ಹೇಳಿದ. ಆ ಹುಡುಗ ರಸ್ತೆ ಬದಿಯಲ್ಲಿಯ ದ್ವಿಚಕ್ರ ವಾಹನ ದುರಸ್ತಿ/ಪಂಚರ್ ಶಾಪಿನಲ್ಲಿ ಕೆಲಸ ಮಾಡುವ ಹದಿನಾರು ವರ್ಷದ ಹುಡುಗ. ಹಾಗಾಗಿ ಸೃಜನಾತ್ಮಕ ಚಿಂತನೆ ಯಾರೊಬ್ಬರ ಖಾಸಗಿ ಆಸ್ತಿ ಅಲ್ಲ. ಎಲ್ಲರೂ ಎಲ್ಲಾ ಕಾಲದಲ್ಲೂ ಪಡೆಯಬಹುದಾದ ಕಲೆ.

ಸೃಜನಾತ್ಮಕ ಚಿಂತನೆಗೆ ಯಾವುದೇ ಇತಿ-ಮಿತಿ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (ಯು.ಪಿ.ಎಸ್.ಸಿ., ಮುಂತಾದ) ಇಂತಹ ಉತ್ತರಕ್ಕೆ ಹೆಚ್ಚಿನ ಅಂಕಗಳು ದೊರೆಯುತ್ತವೆ. ನೀವೂ ಸೃಜನಾತ್ಮಕರಾಗಿ. ಮಕ್ಕಳಿಗೂ ಕಲಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...