Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...