Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....