Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...