Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...