Homeಮುಖಪುಟ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ

- Advertisement -
- Advertisement -

ದೆಹಲಿ ಕ್ರಿಕೆಟ್​ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಅವರ ಮೂರ್ತಿಯನ್ನು ದೆಹಲಿಯ ಫಿರೋಜ್​ ಷಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಕ್ರಿಕೆಟಿಗ ಸ್ಪಿನ್​ ದಂತಕಥೆ ಬಿಷನ್​ ಸಿಂಗ್ ಬೇಡಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಿಂದಲೇ ಹೊರ ನಡೆದಿದ್ದಾರೆ. ರಾಜಕಾರಣಿಗಳ ಪುತ್ಥಳಿಯನ್ನು ಕ್ರಿಕೆಟ್​ ಅಂಗಳದಲ್ಲಿ ಸ್ಥಾಪಿಸುವುದರಿಂದ ಸ್ವಜನಪಕ್ಷಪಾತವನ್ನು ಉತ್ತೇಜಿಸುವಂತಾಗುತ್ತದೆ ಮತ್ತು ಆಟಗಾರರಿಗಿಂತ ನಿರ್ವಾಹಕರೇ ಅಧಿಕ ಎನ್ನುವಂತಹ ಸಂಸ್ಕೃತಿಗೆ ಕಾರಣವಾಗುತ್ತದೆ, ಹೀಗಾಗಿ ಸ್ಟೇಡಿಯಂನ ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನೂ ಶೀಘ್ರವಾಗಿ ಅಳಿಸಿ ಹಾಕಿ ಎಂದು, ಪ್ರಸ್ತುತ ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅರುಣ್ ಜೇಟ್ಲಿ ಅವರ ಮಗ ರೋಹನ್​ ಜೇಟ್ಲಿಗೆ ಪತ್ರ ಬರೆದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟ್​ ದಂತಕಥೆ ಹಾಗೂ 1983 ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಮೊಹಿಂದರ್​ ಅಮರನಾಥ್​ ಹಾಗೂ ಬಿಷನ್​ ಸಿಂಗ್ ಬೇಡಿ ಅವರ ಹೆಸರನ್ನು 2017 ರಲ್ಲಿ ದೆಹಲಿ ಕ್ರಿಕೆಟ್​ ಅಸೋಸಿಯೇಷನ್ ಕ್ರೀಡಾಂಗಣದ ಒಂದು ಸ್ಟ್ಯಾಂಡ್​ಗೆ ನಾಮಕರಣ ಮಾಡಿತ್ತು.​

ಇದನ್ನೂ ಓದಿ: ಅರುಣ್ ಜೈಟ್ಲಿ ಕೆಲ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದರೆ? ಇಲ್ಲಿದೆ ಹೊಸ ವಿವಾದ

ಬಿಷನ್​ ಸಿಂಗ್ ಬೇಡಿ ಡಿಡಿಸಿಎ ಅಧ್ಯಕ್ಷರಿಗೆ ತಾವು ಬರೆದಿರುವ ಪತ್ರದಲ್ಲಿ, “ನಾನು ಅಪಾರ ಸಹಿಷ್ಣುತೆ ಮತ್ತು ತಾಳ್ಮೆಯ ಮನುಷ್ಯ. ಈ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಡಿಡಿಸಿಎ ಇದೀಗ ನನ್ನ ಸಹಿಷ್ಣುತೆಯನ್ನು ನಿಜವಾಗಿಯೂ ಪರೀಕ್ಷಿಸುತ್ತಿದೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನನ್ನು ಪ್ರೇರೇಪಿಸುತ್ತಿದೆ.

ಆದ್ದರಿಂದ ಡಿಡಿಸಿಎ ಅಧ್ಯಕ್ಷರಾದ ರೋಹನ್​ ಜೇಟ್ಲಿ ಅವರಿಗೆ ನನ್ನ ಹೆಸರಿನ ನಿಲುವನ್ನು ತಕ್ಷಣದಿಂದ ಜಾರಿಗೆ ತರಲು ನಾನು ವಿನಂತಿಸುತ್ತೇನೆ. ವೀಕ್ಷಕರ ಸ್ಟಾಂಡ್​ಗೆ ಇಟ್ಟಿರುವ ನನ್ನ ಹೆಸರನ್ನು ಶೀಘ್ರದಲ್ಲೇ ತೆಗೆದುಹಾಕಿ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನು ನಾನು ತ್ಯಜಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, “ನಾನು ಸಾಕಷ್ಟು ಯೋಚಿಸಿಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನಗೆ ದೊರೆತ ಗೌರವವನ್ನು ನಾನು ನಿರ್ಲಕ್ಷಿಸುತ್ತಿಲ್ಲ. ಎಲ್ಲರೂ ತಿಳಿದಿರುವಂತೆ ಗೌರವ ಎಂಬುದು ನಮ್ಮ ಜವಾಬ್ದಾರಿಗಳಿಂದ ನಮಗೆ ಧಕ್ಕುತ್ತದೆ. ನನಗೆ ಸಿಕ್ಕ ಗೌರವವೂ ಅಂಗಳದಲ್ಲಿ ನಾನು ತೋರಿದ ಪ್ರದರ್ಶನ ನನಗೆ ತಂದುಕೊಟ್ಟದ್ದು.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

ಆದರೆ, ನಾನೀಗ ಕ್ರಿಕೆಟ್​ ಅಂಗಳದಿಂದ ನಿವೃತ್ತನಾಗಿದ್ದೇನೆ. ನಾನು ನಂಬಿದ ಮೌಲ್ಯಗಳ ಭರವಸೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾನು ಈಗ ನನ್ನ ಗೌರವವನ್ನು ಹಿಂದಿರುಗಿಸುತ್ತಿದ್ದೇನೆ. ಏಕೆಂದರೆ ನಾನೂ ಇನ್ನೂ ನನ್ನ ಮೌಲ್ಯಗಳನ್ನು ಉಳಿಸಿಕೊಂಡಿದ್ದೇನೆ.

ನನ್ನ ಈ ನಿರ್ಧಾರವನ್ನು ಇಂದಿನ ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ ನಾನು ಎಂದಿಗೂ ಅರುಣ್​ ಜೇಟ್ಲಿ ಅವರ ಕಾರ್ಯಶೈಲಿಯ ಅಭಿಮಾನಿಯಲ್ಲ. ನಾನು ಒಪ್ಪದ ಯಾವುದೇ ನಿರ್ಧಾರಗಳನ್ನು ಎಂದಿಗೂ ವಿರೋಧಿಸುತ್ತಲೇ ಇರುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಅರುಣ್​ ಜೇಟ್ಲಿ ಕೇಂದ್ರ ಸರ್ಕಾರದ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮುನ್ನ 1999 ರಿಂದ 2013 ರವರೆಗೆ ಸತತ 14 ವರ್ಷಗಳ ಕಾಲ ದೆಹಲಿ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಸ್ಮರಣಾರ್ಥ ಫಿರೋಜ್​ ಷಾ ಕೋಟ್ಲಾದಲ್ಲಿ ಅರುಣ್​ ಜೇಟ್ಲಿ ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ನಿರ್ಧರಿಸಿದೆ.

ಇದನ್ನೂ ಓದಿ: ಮದ್ದೂರಿನ ಹೆಸರು ಅರ್ಜುನಪುರಿಯೇ? ಊರ ಹೆಸರುಗಳ ಮೇಲೂ ಪುರೋಹಿತಶಾಹಿ ಆಕ್ರಮಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...