Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....