Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...