Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...