Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...