Homeಕರ್ನಾಟಕ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿದ್ದ ಅಭಿಮಾನಿಯನ್ನು ತಡೆದ ಪೊಲೀಸ್: ಸಾಮಾಜಿಕ ಮಾಧ್ಯಮದಲ್ಲಿ ಟೀಕೆ

‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿದ್ದ ಅಭಿಮಾನಿಯನ್ನು ತಡೆದ ಪೊಲೀಸ್: ಸಾಮಾಜಿಕ ಮಾಧ್ಯಮದಲ್ಲಿ ಟೀಕೆ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನಿ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬರು “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರು ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ, ಆಗ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಪಾಕಿಸ್ತಾನದ ಅಭಿಮಾನಿಯೊಬ್ಬರು “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗುವುದನ್ನು ಪೊಲೀಸ್ ಅಧಿಕಾರಿಯೊಬ್ಬರು ತಡೆದ ವಿಡಿಯೋ ಆನ್‌ಲೈನ್‌ನಲ್ಲಿ ಟೀಕೆಗೆ ಗುರಿಯಾಗಿದೆ.

ಎಕ್ಸ್‌ ಖಾತೆಯಲ್ಲಿ ಹರಿದಾಡುತ್ತಿರುವ 45 ಸೆಕೆಂಡುಗಳ ವೀಡಿಯೋದಲ್ಲಿ, ಪಾಕ್‌ ಅಭಿಮಾನಿ ಜಿಂದಾಬಾದ್‌ ಘೋಷಣೆ ಕೂಗಲು ಪೊಲೀಸ್‌ ಅಧಿಕಾರಿ ತಡೆಯೊಡ್ಡಿದ್ದಾರೆ. ಆಗ ಪಾಕ್‌ ಅಭಿಮಾನಿ, ”ನಾನು ಪಾಕಿಸ್ತಾನದವನು, ಪಾಕಿಸ್ತಾನ್‌ ಜಿಂದಾಬಾದ್‌ ಅನ್ನದೇ ಇನ್ನೇನು ಹೇಳಬೇಕು? “ಭಾರತ್ ಮಾತಾ ಕಿ ಜೈ” ಅನ್ನುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಯಾಕೆ ಹೇಳಬಾರದು?” ಎಂದು ಅಧಿಕಾರಿಯನ್ನ ಪ್ರಶ್ನಿಸಿದ್ದಾರೆ.

ಇದಕ್ಕೆ ಪೋಲೀಸ್ ಅಧಿಕಾರಿ ಹೇಳುತ್ತಾರೆ: ”ಭಾರತ್ ಮಾತಾ ಕೀ ಜೈ ಒಳ್ಳೆಯದು, ಆದರೆ ಪಾಕಿಸ್ತಾನ್ ಜಿಂದಾಬಾದ್ ಒಳ್ಳೆಯದಲ್ಲ” ಎನ್ನುತ್ತಾರೆ.

”ಪಾಕಿಸ್ತಾನ ಆಡುತ್ತಿದೆ, ಇನ್ನೇನು ಜಪ ಮಾಡಬೇಕೆಂದು?” ಎಂದು ಅಭಿಮಾನಿ ಕೇಳುತ್ತಾನೆ.

ಬಳಿಕ ಅಧಿಕಾರಿಯ ನಡೆಯನ್ನ ವೀಡಿಯೋ ಮಾಡಿಕೊಂಡಿದ್ದಾನೆ. ಪೊಲೀಸ್‌ ಅಧಿಕಾರಿ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದೆ ಸಾಗುತ್ತಿದ್ದಂತೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲು ಶುರು ಮಾಡಿದ್ದಾನೆ.

ಈ ವೀಡಿಯೋ ಎಕ್ಸ್‌ನಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ”ಒಬ್ಬ ಪಾಕಿಸ್ತಾನಿ ತನ್ನ ದೇಶಕ್ಕಾಗಿ ಹುರಿದುಂಬಿಸಲು ಅವಕಾಶ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಪಾಕಿಸ್ತಾನದ ಒಬ್ಬ ಅಭಿಮಾನಿ ತನ್ನ ದೇಶದ ಪರ ಘೋಷಣೆ ಕೂಗಲು ಬಿಡುತ್ತಿಲ್ಲವೆನ್ನೋದು ಖಂಡನೀಯ. ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಇದನ್ನು ಗಮನಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...