HomeUncategorizedಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

ಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

- Advertisement -
- Advertisement -

ಹಲವು ದೇಶಗಳು ತಮ್ಮ ಧ್ವಜದ ಮೇಲೆ ಚಂದ್ರನ ಚಿತ್ರವನ್ನು ಹೊಂದಿವೆ

ಅದೇ ಸಂದರ್ಭದಲ್ಲಿ ಕೆಲವು ದೇಶಗಳ ಧ್ವಜಗಳು ಚಂದ್ರನ ಮೇಲಿವೆ.. #ಚಂದ್ರಯಾನ-2

ಹೀಗೆಂದು ಟ್ವೀಟ್ ಮಾಡಿದವರು ಭಾರತ ತಂಡದ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್. ಇದಕ್ಕೂ ಹಲವಾರು ಜನರು ಲೈಕ್ ಮಾಡಿದ್ದಾರೆ. ಆದರೆ ಬಹಳಷ್ಟು ಜನರು ಈ ಟ್ವೀಟ್ ನೋಡಿ ಹರಭಜನ್ ಸಿಂಗ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಪದಿಂದ ಪ್ರತಿಕ್ರಿಯಿಸಿದ್ದಾರೆ.

ಭಾರತ ಯಶಸ್ವಿಯಾಗಿ ಚಂದ್ರಯಾನ ಮಾಡಿದ್ದು ಸಂತಸದ ವಿಷಯ. ಆದರೆ ಅದೇ ಸಂದರ್ಭದಲ್ಲಿ ಉಳಿದ ದೇಶಗಳು ಆ ಸಾಧನೆಯನ್ನು ಮಾಡಲಾಗಿಲ್ಲ ಎಂದು ಹಂಗಿಸುವುದು ಎಷ್ಟು ಸರಿ? ಅದರಲ್ಲೂ ಮುಸ್ಲಿಂ ರಾಷ್ಟ್ರಗಳನ್ನೇ ಉದ್ದೇಶಪೂರ್ವಕವಾಗಿ ಆಯ್ದುಕೊಂಡು ಟೀಕಿಸುವುದು ಮತಾಂಧತೆಯಲ್ಲವೇ? ಈ ಚೀಪ್ ಪಾಲಿಟಿಕ್ಸ್ ಬಿಟ್ಟುಬಿಡಿ ಎಂದು ಕಿಡಿಕಾರಿದ್ದಾರೆ.

ಹೌದು ಹರಭಜನ್ ತಮ್ಮ ಟ್ವೀಟ್ ನಲ್ಲಿ ಚಂದ್ರನ ಚಿಹ್ನೆಯುಳ್ಳ 09 ರಾಷ್ಟ್ರಗಳ ಧ್ವಜಗಳನ್ನು ಅಂಟಿಸಿದ್ದಾರೆ. ಅವೆಲ್ಲವೂ ಮುಸ್ಲಿಂ ರಾಷ್ಟ್ರಗಳೇ ಆಗಿವೆ. ಹಾಗೆಯೇ ಚಂದ್ರಯಾನ ಮಾಡಿದ ನಾಲ್ಕು ರಾಷ್ಟ್ರಗಳ ಚಿತ್ರಗಳನ್ನು ಹಾಕಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಖ್ಯಾತ ಹೋರಾಟಗಾರ್ತಿ ಕವಿತ್ ಕೃಷ್ಣನ್ “ನಿಮ್ಮ ಈ ದೊಡ್ಡ ಕಥೆಯನ್ನು ನಾನು ಸ್ವಲ್ಪ ವಾಸ್ತವದೊಂದಿಗೆ ತೊಂದರೆಗೊಳಿಸಬಹುದೇ? ಇದು ನೇಪಾಳ ಧ್ವಜ, ಅದರ ಮೇಲೆ ಅರ್ಧಚಂದ್ರ ಚಂದ್ರನೂ ಇದೆ. ಇದು ಎಲ್ಲಾ ‘ಮುಸ್ಲಿಂ’ ದೇಶಗಳನ್ನು ಅಕ್ಷರಶಃ ಕೆಟ್ಟದಾಗಿ ಚಿತ್ರಿಸುವ ಇಸ್ಲಾಮಿಫೋಬಿಯಾದ ಮೂಲತತ್ವವಾಗಿದೆ. ಶ್ರೀಲಂಕಾದ ಕ್ರಿಕೆಟಿಗರಿಂದ ನೀವು ಕಲಿಯಿರಿ ಮತ್ತು ಇದಕ್ಕಿಂತ ಮೇಲೇರಿ.” ಎಂದು ರಿಪ್ಲೈ ಮಾಡಿದ್ದಾರೆ.

ಇನ್ನು ಕೆಲವರು ವಾಟ್ಸಾಪ್ ಮೆಸೇಜ್ ಗಳನ್ನು ಫಾರ್ವಾಡ್ ಮಾಡುವ ಅಭ್ಯಾಸ ಬಿಡಿ, ನಿಮ್ಮ ಟ್ವೀಟ್ ಕೆಟ್ಟ ಉದ್ದೇಶದಿಂದ ಕೂಡಿದೆ, ನೀವು ಉತ್ತಮ ಕ್ರೀಡಾಪಡು ಅಲ್ಲ ಬದಲಿಗೆ ಕೋಮುವಾದಿಯಾಗಿದ್ದೀಯಾ ಎಂದು ಟ್ವೀಟ್ ಮಾಡಿದ್ದಾರೆ/

ನಮ್ಮ ಸಾಧನೆಯನ್ನು ಸಂಭ್ರಮಿಸುವ ರೀತಿ ಇದಲ್ಲ. ಇನ್ನೊಬ್ಬರನ್ನು ಕೆಳಗಿಳಿಸಿ ನೋಡುವುದನ್ನು ಬಿಟ್ಟು ನಾವಿನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...