HomeUncategorizedಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

ಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

- Advertisement -
- Advertisement -

ಹಲವು ದೇಶಗಳು ತಮ್ಮ ಧ್ವಜದ ಮೇಲೆ ಚಂದ್ರನ ಚಿತ್ರವನ್ನು ಹೊಂದಿವೆ

ಅದೇ ಸಂದರ್ಭದಲ್ಲಿ ಕೆಲವು ದೇಶಗಳ ಧ್ವಜಗಳು ಚಂದ್ರನ ಮೇಲಿವೆ.. #ಚಂದ್ರಯಾನ-2

ಹೀಗೆಂದು ಟ್ವೀಟ್ ಮಾಡಿದವರು ಭಾರತ ತಂಡದ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್. ಇದಕ್ಕೂ ಹಲವಾರು ಜನರು ಲೈಕ್ ಮಾಡಿದ್ದಾರೆ. ಆದರೆ ಬಹಳಷ್ಟು ಜನರು ಈ ಟ್ವೀಟ್ ನೋಡಿ ಹರಭಜನ್ ಸಿಂಗ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಪದಿಂದ ಪ್ರತಿಕ್ರಿಯಿಸಿದ್ದಾರೆ.

ಭಾರತ ಯಶಸ್ವಿಯಾಗಿ ಚಂದ್ರಯಾನ ಮಾಡಿದ್ದು ಸಂತಸದ ವಿಷಯ. ಆದರೆ ಅದೇ ಸಂದರ್ಭದಲ್ಲಿ ಉಳಿದ ದೇಶಗಳು ಆ ಸಾಧನೆಯನ್ನು ಮಾಡಲಾಗಿಲ್ಲ ಎಂದು ಹಂಗಿಸುವುದು ಎಷ್ಟು ಸರಿ? ಅದರಲ್ಲೂ ಮುಸ್ಲಿಂ ರಾಷ್ಟ್ರಗಳನ್ನೇ ಉದ್ದೇಶಪೂರ್ವಕವಾಗಿ ಆಯ್ದುಕೊಂಡು ಟೀಕಿಸುವುದು ಮತಾಂಧತೆಯಲ್ಲವೇ? ಈ ಚೀಪ್ ಪಾಲಿಟಿಕ್ಸ್ ಬಿಟ್ಟುಬಿಡಿ ಎಂದು ಕಿಡಿಕಾರಿದ್ದಾರೆ.

ಹೌದು ಹರಭಜನ್ ತಮ್ಮ ಟ್ವೀಟ್ ನಲ್ಲಿ ಚಂದ್ರನ ಚಿಹ್ನೆಯುಳ್ಳ 09 ರಾಷ್ಟ್ರಗಳ ಧ್ವಜಗಳನ್ನು ಅಂಟಿಸಿದ್ದಾರೆ. ಅವೆಲ್ಲವೂ ಮುಸ್ಲಿಂ ರಾಷ್ಟ್ರಗಳೇ ಆಗಿವೆ. ಹಾಗೆಯೇ ಚಂದ್ರಯಾನ ಮಾಡಿದ ನಾಲ್ಕು ರಾಷ್ಟ್ರಗಳ ಚಿತ್ರಗಳನ್ನು ಹಾಕಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಖ್ಯಾತ ಹೋರಾಟಗಾರ್ತಿ ಕವಿತ್ ಕೃಷ್ಣನ್ “ನಿಮ್ಮ ಈ ದೊಡ್ಡ ಕಥೆಯನ್ನು ನಾನು ಸ್ವಲ್ಪ ವಾಸ್ತವದೊಂದಿಗೆ ತೊಂದರೆಗೊಳಿಸಬಹುದೇ? ಇದು ನೇಪಾಳ ಧ್ವಜ, ಅದರ ಮೇಲೆ ಅರ್ಧಚಂದ್ರ ಚಂದ್ರನೂ ಇದೆ. ಇದು ಎಲ್ಲಾ ‘ಮುಸ್ಲಿಂ’ ದೇಶಗಳನ್ನು ಅಕ್ಷರಶಃ ಕೆಟ್ಟದಾಗಿ ಚಿತ್ರಿಸುವ ಇಸ್ಲಾಮಿಫೋಬಿಯಾದ ಮೂಲತತ್ವವಾಗಿದೆ. ಶ್ರೀಲಂಕಾದ ಕ್ರಿಕೆಟಿಗರಿಂದ ನೀವು ಕಲಿಯಿರಿ ಮತ್ತು ಇದಕ್ಕಿಂತ ಮೇಲೇರಿ.” ಎಂದು ರಿಪ್ಲೈ ಮಾಡಿದ್ದಾರೆ.

ಇನ್ನು ಕೆಲವರು ವಾಟ್ಸಾಪ್ ಮೆಸೇಜ್ ಗಳನ್ನು ಫಾರ್ವಾಡ್ ಮಾಡುವ ಅಭ್ಯಾಸ ಬಿಡಿ, ನಿಮ್ಮ ಟ್ವೀಟ್ ಕೆಟ್ಟ ಉದ್ದೇಶದಿಂದ ಕೂಡಿದೆ, ನೀವು ಉತ್ತಮ ಕ್ರೀಡಾಪಡು ಅಲ್ಲ ಬದಲಿಗೆ ಕೋಮುವಾದಿಯಾಗಿದ್ದೀಯಾ ಎಂದು ಟ್ವೀಟ್ ಮಾಡಿದ್ದಾರೆ/

ನಮ್ಮ ಸಾಧನೆಯನ್ನು ಸಂಭ್ರಮಿಸುವ ರೀತಿ ಇದಲ್ಲ. ಇನ್ನೊಬ್ಬರನ್ನು ಕೆಳಗಿಳಿಸಿ ನೋಡುವುದನ್ನು ಬಿಟ್ಟು ನಾವಿನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...