HomeUncategorizedಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

ಚಂದ್ರಯಾನಕ್ಕೂ ಹರಭಜನ್ ಸಿಂಗ್ ಗೂ ಸಂಬಂಧವೇನು? ಆದರೂ ನೆಟ್ಟಿಗರು ಈ ಕ್ರಿಕೆಟಿಗನನ್ನು ಟ್ರೋಲ್ ಮಾಡಿದ್ದೇಕೆ?

- Advertisement -
- Advertisement -

ಹಲವು ದೇಶಗಳು ತಮ್ಮ ಧ್ವಜದ ಮೇಲೆ ಚಂದ್ರನ ಚಿತ್ರವನ್ನು ಹೊಂದಿವೆ

ಅದೇ ಸಂದರ್ಭದಲ್ಲಿ ಕೆಲವು ದೇಶಗಳ ಧ್ವಜಗಳು ಚಂದ್ರನ ಮೇಲಿವೆ.. #ಚಂದ್ರಯಾನ-2

ಹೀಗೆಂದು ಟ್ವೀಟ್ ಮಾಡಿದವರು ಭಾರತ ತಂಡದ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್. ಇದಕ್ಕೂ ಹಲವಾರು ಜನರು ಲೈಕ್ ಮಾಡಿದ್ದಾರೆ. ಆದರೆ ಬಹಳಷ್ಟು ಜನರು ಈ ಟ್ವೀಟ್ ನೋಡಿ ಹರಭಜನ್ ಸಿಂಗ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಪದಿಂದ ಪ್ರತಿಕ್ರಿಯಿಸಿದ್ದಾರೆ.

ಭಾರತ ಯಶಸ್ವಿಯಾಗಿ ಚಂದ್ರಯಾನ ಮಾಡಿದ್ದು ಸಂತಸದ ವಿಷಯ. ಆದರೆ ಅದೇ ಸಂದರ್ಭದಲ್ಲಿ ಉಳಿದ ದೇಶಗಳು ಆ ಸಾಧನೆಯನ್ನು ಮಾಡಲಾಗಿಲ್ಲ ಎಂದು ಹಂಗಿಸುವುದು ಎಷ್ಟು ಸರಿ? ಅದರಲ್ಲೂ ಮುಸ್ಲಿಂ ರಾಷ್ಟ್ರಗಳನ್ನೇ ಉದ್ದೇಶಪೂರ್ವಕವಾಗಿ ಆಯ್ದುಕೊಂಡು ಟೀಕಿಸುವುದು ಮತಾಂಧತೆಯಲ್ಲವೇ? ಈ ಚೀಪ್ ಪಾಲಿಟಿಕ್ಸ್ ಬಿಟ್ಟುಬಿಡಿ ಎಂದು ಕಿಡಿಕಾರಿದ್ದಾರೆ.

ಹೌದು ಹರಭಜನ್ ತಮ್ಮ ಟ್ವೀಟ್ ನಲ್ಲಿ ಚಂದ್ರನ ಚಿಹ್ನೆಯುಳ್ಳ 09 ರಾಷ್ಟ್ರಗಳ ಧ್ವಜಗಳನ್ನು ಅಂಟಿಸಿದ್ದಾರೆ. ಅವೆಲ್ಲವೂ ಮುಸ್ಲಿಂ ರಾಷ್ಟ್ರಗಳೇ ಆಗಿವೆ. ಹಾಗೆಯೇ ಚಂದ್ರಯಾನ ಮಾಡಿದ ನಾಲ್ಕು ರಾಷ್ಟ್ರಗಳ ಚಿತ್ರಗಳನ್ನು ಹಾಕಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಖ್ಯಾತ ಹೋರಾಟಗಾರ್ತಿ ಕವಿತ್ ಕೃಷ್ಣನ್ “ನಿಮ್ಮ ಈ ದೊಡ್ಡ ಕಥೆಯನ್ನು ನಾನು ಸ್ವಲ್ಪ ವಾಸ್ತವದೊಂದಿಗೆ ತೊಂದರೆಗೊಳಿಸಬಹುದೇ? ಇದು ನೇಪಾಳ ಧ್ವಜ, ಅದರ ಮೇಲೆ ಅರ್ಧಚಂದ್ರ ಚಂದ್ರನೂ ಇದೆ. ಇದು ಎಲ್ಲಾ ‘ಮುಸ್ಲಿಂ’ ದೇಶಗಳನ್ನು ಅಕ್ಷರಶಃ ಕೆಟ್ಟದಾಗಿ ಚಿತ್ರಿಸುವ ಇಸ್ಲಾಮಿಫೋಬಿಯಾದ ಮೂಲತತ್ವವಾಗಿದೆ. ಶ್ರೀಲಂಕಾದ ಕ್ರಿಕೆಟಿಗರಿಂದ ನೀವು ಕಲಿಯಿರಿ ಮತ್ತು ಇದಕ್ಕಿಂತ ಮೇಲೇರಿ.” ಎಂದು ರಿಪ್ಲೈ ಮಾಡಿದ್ದಾರೆ.

ಇನ್ನು ಕೆಲವರು ವಾಟ್ಸಾಪ್ ಮೆಸೇಜ್ ಗಳನ್ನು ಫಾರ್ವಾಡ್ ಮಾಡುವ ಅಭ್ಯಾಸ ಬಿಡಿ, ನಿಮ್ಮ ಟ್ವೀಟ್ ಕೆಟ್ಟ ಉದ್ದೇಶದಿಂದ ಕೂಡಿದೆ, ನೀವು ಉತ್ತಮ ಕ್ರೀಡಾಪಡು ಅಲ್ಲ ಬದಲಿಗೆ ಕೋಮುವಾದಿಯಾಗಿದ್ದೀಯಾ ಎಂದು ಟ್ವೀಟ್ ಮಾಡಿದ್ದಾರೆ/

ನಮ್ಮ ಸಾಧನೆಯನ್ನು ಸಂಭ್ರಮಿಸುವ ರೀತಿ ಇದಲ್ಲ. ಇನ್ನೊಬ್ಬರನ್ನು ಕೆಳಗಿಳಿಸಿ ನೋಡುವುದನ್ನು ಬಿಟ್ಟು ನಾವಿನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...