Homeಮುಖಪುಟಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧ; ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧ; ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಮಹಿಳೆಯರ ಸುರಕ್ಷತೆ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಮಾಡಿದ ಭಾಷಣಗಳಲ್ಲಿ ಈ ವಿಷಯದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಆದರೆ, ಅವರ ಸರ್ಕಾರವು ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯುವ ಯಾವುದೇ ಕೆಲಸ ಮಾಡಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮಹಿಳೆಯರ ಮೇಲಿನ ಅಪರಾಧಗಳು ಗಂಭೀರ ಸಮಸ್ಯೆಯಾಗಿದ್ದು, ಈ ಅಪರಾಧಗಳನ್ನು ತಡೆಯುವುದು ದೇಶಕ್ಕೆ ದೊಡ್ಡ ಸವಾಲಾಗಿದೆ” ಎಂದು ಖರ್ಗೆ ಪ್ರತಿಪಾದಿಸಿದರು.

“ನಾವೆಲ್ಲರೂ ಒಗ್ಗೂಡಬೇಕು ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ತೆಗೆದುಕೊಂಡು ಹೋಗುವ ಮೂಲಕ ಇದಕ್ಕೆ ಪರಿಹಾರಗಳನ್ನು ಕಂಡುಕೊಳ್ಳಬೇಕು” ಎಂದು ಕಾಂಗ್ರೆಸ್ ಮುಖ್ಯಸ್ಥರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ- ಹತ್ಯೆ ಮತ್ತು ದೇಶದ ಇತರ ಭಾಗಗಳಲ್ಲಿ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

“ದೇಶದಲ್ಲಿ ಪ್ರತಿ ಗಂಟೆಗೆ 43 ಮಹಿಳೆಯರ ವಿರುದ್ಧ ಅಪರಾಧಗಳು ದಾಖಲಾಗುತ್ತಿವೆ. ನಮ್ಮ ದೇಶದ ಅತ್ಯಂತ ದುರ್ಬಲ ದಲಿತ-ಬುಡಕಟ್ಟು ವರ್ಗದ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಪ್ರತಿದಿನ 22 ಅಪರಾಧಗಳು ದಾಖಲಾಗುತ್ತವೆ. ಭಯ, ಬೆದರಿಕೆ, ಸಾಮಾಜಿಕ ಕಾರಣಗಳಿಂದಾಗಿ ಅಸಂಖ್ಯಾತ ಅಪರಾಧಗಳನ್ನು ಸಹ ನೋಂದಾಯಿಸುತ್ತಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

“ನಾವು ದೌರ್ಜನ್ಯಗಳನ್ನು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಸಮರ್ಥರಾಗಿದ್ದೇವೆಯೇ? ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸುಧಾರಿಸಿದೆಯೇ? ಸಮಾಜದ ಶೋಷಿತ ಮತ್ತು ವಂಚಿತ ವರ್ಗಗಳು ಈಗ ಸುರಕ್ಷಿತ ವಾತಾವರಣದಲ್ಲಿ ಬದುಕಲು ಸಮರ್ಥವಾಗಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರತಿ ಗೋಡೆಯ ಮೇಲೆ ಬೇಟಿ ಬಚಾವೋ ಪೇಂಟಿಂಗ್ ಸಾಮಾಜಿಕ ಬದಲಾವಣೆಯನ್ನು ತರುತ್ತದೆಯೇ ಅಥವಾ ಸರ್ಕಾರಗಳ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಮರ್ಥಗೊಳಿಸುತ್ತದೆ. ಸರ್ಕಾರ ಮತ್ತು ಆಡಳಿತವು ಅಪರಾಧವನ್ನು ಮರೆಮಾಡಲು ಪ್ರಯತ್ನಿಸಲಿಲ್ಲವೇ? ಸತ್ಯ ಹೊರಬರದಂತೆ ಪೊಲೀಸರು ಬಲಿಪಶುಗಳನ್ನು ಬಲವಂತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ನಿಲ್ಲಿಸಿದ್ದಾರೆಯೇ” ಎಂದು ಕಾಂಗ್ರೆಸ್ ಮುಖ್ಯಸ್ಥರು ಪ್ರಶ್ನಿಸಿದ್ದಾರೆ.

“2012 ರಲ್ಲಿ ದೆಹಲಿಯಲ್ಲಿ ನಿರ್ಭಯಾ ಪ್ರಕರಣದ ನಂತರ, ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತರಲು ನಮಗೆ ಸಾಧ್ಯವಾಗುತ್ತಿದೆಯೇ” ಎಂದು ಖರ್ಗೆ ಪ್ರಶ್ನಿಸಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) 2013 ರಲ್ಲಿ ಜಾರಿಗೊಳಿಸಲಾದ ಕಾಯಿದೆಯ ನಿಬಂಧನೆಗಳನ್ನು ಸರಿಯಾಗಿ ಅನುಸರಿಸಲಾಗುತ್ತಿದೆಯೇ ಎಂದು ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್‌ಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...