HomeಮುಖಪುಟSC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ - NCRB ಮಾಹಿತಿ

SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

- Advertisement -
- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಪರಿಶಿಷ್ಟ ಜಾತಿಗಳ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಅಪರಾಧಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2020 ರಲ್ಲಿ ಕ್ರಮವಾಗಿ 9.4% ಮತ್ತು 9.3% ರಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಆದರೆ ವರದಿಯು ಮಹಿಳೆಯರ ವಿರುದ್ಧದ ಅಪರಾಧಗಳು 8.3% ರಷ್ಟು ಇಳಿಮುಖವಾಗಿದೆ ತಿಳಿಸಿದೆ.

ಕಳೆದ ವರ್ಷ ಒಟ್ಟು 50,291 ಅಪರಾಧಗಳು ಎಸ್ಸಿಗಳ ವಿರುದ್ಧ ನಡೆದಿದೆ ಎಂದು ದಾಖಲಾಗಿದೆ. 2019 ರಲ್ಲಿ ಈ ಸಂಖ್ಯೆ 45,961 ಆಗಿತ್ತು. ಈ ಮಧ್ಯೆ, 2020 ರಲ್ಲಿ ST ಗಳ ವಿರುದ್ಧ 8,272 ಅಪರಾಧಗಳು ನಡೆದಿದ್ದು, 2019 ರಲ್ಲಿ ಈ ಸಂಖ್ಯೆ 7,570 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

2020 ರಲ್ಲಿ ಎಸ್ಸಿಗಳ ವಿರುದ್ದ ನಡೆದ ಅಪರಾಧಗಳಲ್ಲಿ, ‘ಸಿಂಪಲ್ ಹರ್ಟ್’ ಎಂದು ಒಟ್ಟು 16,543 (32.9 %) ಅಪರಾಧಗಳು ಮತ್ತು ದೌರ್ಜನ್ಯಗಳು ನಡೆದಿದೆ. ಜೊತೆಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 4,273 (8.5%) ಅಪರಾಧಗಳು ಮತ್ತು 3,788 ಕ್ರಿಮಿನಲ್ ಬೆದರಿಕೆಗಳು ಎಸ್ಸಿಗಳ ವಿರುದ್ದ ನಡೆದಿದೆ.

ಎಸ್‌ಟಿಗಳ ವಿಷಯದಲ್ಲಿ ನಡೆದ ಒಟ್ಟು ಅಪರಾಧಗಳಲ್ಲಿ, ‘ಸಿಂಪಲ್ ಹರ್ಟ್’ ಎಂದು ಒಟ್ಟು 2,247(27.2%) ಅಪರಾಧಗಳು ಮತ್ತು ದೌರ್ಜನ್ಯಗಳು ನಡೆದಿದ್ದು, ಅತ್ಯಾಚಾರ ಅಪರಾಧಗಳು 1,137(13.7%) ಮಹಿಳೆಯರ ಮೇಲೆ ಹಲ್ಲೆ ನಡೆದಿರುವ 885 (10.7%) ಪ್ರಕರಣಗಳು ದಾಖಲಾಗಿವೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅತ್ಯಧಿಕ ಅಪರಾಧ ದಾಖಲಾಗಿದೆ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಲ್ಲಿ ಎಸ್‌ಸಿಗಳ ವಿರುದ್ಧ ಅತ್ಯಧಿಕ ಅಪರಾಧಗಳು ನಡೆದಿವೆ. ಅದರಲ್ಲೂ ಈ ರಾಜ್ಯಗಳ ನಗರಗಳಾದ ಕಾನ್ಪುರ ಮತ್ತು ಜೈಪುರದಲ್ಲಿ ಅತ್ಯಧಿಕ ಅಪರಾಧಗಳು ನಡೆದಿವೆ.

ಕೇರಳ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯದಗಳಲ್ಲಿ ಎಸ್ಟಿಗಳ ವಿರುದ್ಧ ಅತ್ಯಧಿಕ ಅಪರಾಧಗಳು ನಡೆದಿದೆ.

ಇದನ್ನೂ ಓದಿ: ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ಮಹಿಳೆಯರ ವಿರುದ್ಧದ ಅಪರಾಧಗಳು

2020 ರಲ್ಲಿ ಒಟ್ಟು 3,71,503 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿದೆ. 2019 ಕ್ಕೆ ಹೋಲಿಸಿದರೆ ಇದು 8.3% ರಷ್ಟು ಇಳಿಕೆಯಾಗಿದೆ. 2019 ರಲ್ಲಿ 4,05,326 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿತ್ತು.

ಮಹಿಳೆಯರ ವಿರುದ್ದ ನಡೆದಿರುವ ಅಪರಾಧಗಳು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಅತಿ ಹೆಚ್ಚು ಏರಿಕೆಯಾಗಿದೆ.

ಮಹಿಳೆಯರ ಮೇಲೆ ನಡೆದ ಅಪರಾಧಗಳಲ್ಲಿ ಉತ್ತರ ಪ್ರದೇಶದಲ್ಲಿ ಅತಿದೊಡ್ಡ ಕುಸಿತ ದಾಖಲಾಗಿದೆ. 2019 ರಲ್ಲಿ 59,853 ಮಹಿಳೆಯರ ವಿರುದ್ದ ಅಪರಾಧಗಳು ನಡೆದರೆ, 2020 ರಲ್ಲಿ 49,385 ಮಹಿಳೆಯರ ವಿರುದ್ದ ಅಪರಾಧಗಳು ನಡೆದಿದೆ.

ಇದನ್ನೂ ಓದಿ: ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ 

ದೆಹಲಿಯಲ್ಲಿ ಕೂಡಾ 2019 ರಲ್ಲಿ 13,395 ಅಪರಾಧಗಳು ನಡೆದರೆ, 2021 ರಲ್ಲಿ 10,093 ಅಪರಾಧಗಳು ಮಹಿಳೆಯರ ವಿರುದ್ದ ನಡೆದಿದೆ.

ಮಹಿಳೆಯರ ವಿರುದ್ದ ನಡೆದ ಒಟ್ಟು ಅಪರಾಧದಲ್ಲಿ, ‘ಪತಿ ಅಥವಾ ಅವರ ಸಂಬಂಧಿಕರ ಕ್ರೌರ್ಯ’ವೇ ಅತಿ ಹೆಚ್ಚು(30%) ಎಂದು ಅಂಕಿ ಅಂಶ ಹೇಳಿದೆ. ‘ಮಹಿಳೆಯ ಘನತೆಗೆ ಕುತ್ತು ತರುವ ಉದ್ದೇಶದಿಂದ ನಡೆದ ಹಲ್ಲೆ 23 %, ಮಹಿಳೆಯರ ಅಪಹರಣ 16.8 % ಮತ್ತು ಅತ್ಯಾಚಾರ 7.5% ನಡೆದಿದೆ ಎಂದು ಅಂಕಿ ಅಂಶ ಹೇಳಿದೆ.

ಎನ್‌ಸಿಆರ್‌ಬಿ ವರದಿಯು, ಕಳೆದ ವರ್ಷ ಮಾರ್ಚ್-ಮೇ ನಿಂದ ಲಾಕ್‌ಡೌನ್ ಸಮಯದಲ್ಲಿ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧ ಕಳ್ಳತನ, ದರೋಡೆ ಮತ್ತು ದೌರ್ಜನ್ಯದ ಅಡಿಯಲ್ಲಿ ಅಪರಾಧಗಳು ಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...