Homeಮುಖಪುಟಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

- Advertisement -
- Advertisement -

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳು, ಆತ್ಮಹತ್ಯೆಗಳು ಮತ್ತು ಅಪಘಾತಗಳು 2021ಕ್ಕೆ ಹೋಲಿಕೆ ಮಾಡಿದಾಗ 2022ರಲ್ಲಿ ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB), ವಾರ್ಷಿಕ ಅಪರಾಧ ವರದಿ ಮತ್ತು ಭಾರತದಲ್ಲಿ ಅಪಘಾತದಿಂದಾಗುವ ಸಾವುಗಳು ಹಾಗೂ ಆತ್ಮಹತ್ಯೆಗಳ ಕುರಿತು (ADSI) ವರದಿಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಇದೇ ವರದಿಯನ್ನು ಆಗಸ್ಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯು 2022ರ ಭಾರತದಲ್ಲಿನ ಅಪರಾಧ ಸನ್ನಿವೇಶದ ಸಮಗ್ರ ಅವಲೋಕನವನ್ನು ಮಾಡಿದೆ. ವರದಿಯಲ್ಲಿ ಹಠಾತ್ ಸಾವುಗಳು, ಆತ್ಮಹತ್ಯೆಗಳು, ಮಹಿಳೆಯರು, ಮಕ್ಕಳ ವಿರುದ್ಧದ ಅಪರಾಧಗಳನ್ನು ಅವಲೋಕನ ಮಾಡಿದೆ. ಭಾರತದಲ್ಲಿ ಒಟ್ಟಾರೆ ಅಪರಾಧದ ಪ್ರಮಾಣವು 2021ರಲ್ಲಿ 7% ಇದ್ದು 2022ರಲ್ಲಿ 6.9%ಕ್ಕೆ ಇಳಿದಿದೆ. ಆದರೆ ಮಹಿಳೆಯರು, ಮಕ್ಕಳು, SC- ST ಮತ್ತು ಸೈಬರ್ ಅಪರಾಧ ಸೇರಿದಂತೆ ನಿರ್ದಿಷ್ಟ ವರ್ಗಗಳ ವಿರುದ್ಧದ ಅಪರಾಧಗಳು 2021ಕ್ಕೆ ಹೋಲಿಕೆ ಮಾಡಿದರೆ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ದೇಶಾದ್ಯಂತ ವರದಿಯಾದ ಹಠಾತ್ ಸಾವುಗಳ ಸಂಖ್ಯೆಯಲ್ಲಿ 11.6% ಹೆಚ್ಚಳವಾಗಿದೆ. 2022ರಲ್ಲಿ ಕನಿಷ್ಠ 56,653 ಹಠಾತ್ ಸಾವುಗಳು ಸಂಭವಿಸಿದೆ. ಇದರಲ್ಲಿ ಹೃದಯಾಘಾತದಿಂದ 32,410 ಸಾವುಗಳು ಸಂಭವಿಸಿವೆ. 24,243 ಸಾವುಗಳಿಗೆ ಇತರ ಕಾರಣಗಳಿಂದ ಸಂಭವಿಸಿದೆ. 45-60ವರ್ಷ ವಯಸ್ಸಿನವರಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಎಂದರೆ 19,456 ಸಾವುಗಳು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯೆಗಳು ಮತ್ತು ಆಕಸ್ಮಿಕ ಸಾವುಗಳು

ಭಾರತದಲ್ಲಿ 2021ರಲ್ಲಿ 1,64,033ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಅದು 2022ರಲ್ಲಿ 1,70,924ಕ್ಕೆ ಏರಿಕೆಯಾಗಿದೆ. 2021ರಲ್ಲಿ ಅಪಘಾತದಿಂದ ಭಾರತದಲ್ಲಿ 3,97,530 ಮಂದಿ ಮೃತಪಟ್ಟಿದ್ದು, 2022ರಲ್ಲಿ ಅಪಘಾತದಲ್ಲಿ 4,30,504 ಮಂದಿ ಮೃತಪಟ್ಟಿದ್ದಾರೆ.

ಇಂಡಿಯಾ ಸ್ಪೆಂಡ್ ವರದಿಯ ಪ್ರಕಾರ, ಭಾರತವು 2021ರಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣವನ್ನು ವರದಿ ಮಾಡಿದೆ. ಪ್ರತಿ 1,00,000 ಜನರಿಗೆ 12 ಆತ್ಮಹತ್ಯೆಗಳು ಸಂಭವಿಸಿದೆ.

ಮಹಿಳೆಯರ ವಿರುದ್ಧದ ಅಪರಾಧಗಳು

2022ರಲ್ಲಿ ಕನಿಷ್ಠ 4,45,256 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, 2021ರಿಂದ ಇದು 4% ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪತಿ ಮತ್ತು ಆತನ ಸಂಬಂಧಿಕರಿಂದ ಕ್ರೌರ್ಯ, ಮಹಿಳೆಯರ ಅಪಹರಣ, ಮಹಿಳೆಯರ ಮೇಲೆ ಹಲ್ಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಸೇರಿದೆ. ವಿಶ್ವ ಆರೋಗ್ಯ ಸಂಸ್ಥೆಯ ದಾಖಲೆಯನ್ನು ಉಲ್ಲೇಖಿಸಿ 2022ರಲ್ಲಿ  ಬಿಬಿಸಿ ಮಾಡಿದ ವರದಿಯ ಪ್ರಕಾರ ಜಾಗತಿಕವಾಗಿ ಮೂವರು ಮಹಿಳೆಯರಲ್ಲಿ ಓರ್ವರು ಲಿಂಗ ಆಧಾರಿತ ಹಿಂಸೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

2021ರಲ್ಲಿ ಭಾರತವು ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧಗಳನ್ನು ದಾಖಲಿಸಿದೆ ಎಂದು ವರದಿಯು ಗಮನಿಸಿದೆ. ಇದು 2016ರಿಂದ 6 ವರ್ಷಗಳಲ್ಲಿ 26.35% ರಷ್ಟು ಏರಿಕೆಯಾಗಿದೆ.

ಮಕ್ಕಳ ವಿರುದ್ಧದ ಅಪರಾಧಗಳು

2022ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ಕನಿಷ್ಠ 1,62,449 ಪ್ರಕರಣಗಳು ದಾಖಲಾಗಿವೆ. ಇದು 2021 ರಿಂದ 8.7% ಹೆಚ್ಚಳವಾಗಿದೆ. ಇವುಗಳಲ್ಲಿ ಅಪಹರಣ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಗಳು ಹೆಚ್ಚು ದಾಖಲಾಗಿವೆ.

ಇದಲ್ಲದೆ 2022ರಲ್ಲಿ ಹಿರಿಯ ನಾಗರಿಕರು, ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳು ಮತ್ತು ಆರ್ಥಿಕ ಅಪರಾಧಗಳು ಭಾರಿ ಹೆಚ್ಚಳವನ್ನು ತೋರಿಸಿವೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 28,545 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದರೆ 9.3% ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎಸ್‌ಸಿಗಳ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿ ಒಟ್ಟು 57,582 ಪ್ರಕರಣಗಳು ದಾಖಲಾಗಿವೆ. ಇದು 2021ರಿಂದ 13.1% ಹೆಚ್ಚಳವನ್ನು ತೋರಿಸುತ್ತದೆ. ಪರಿಶಿಷ್ಟ ಪಂಗಡಗಳ(ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 10,064 ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿ ಕನಿಷ್ಠ 1,93,385 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ರಿಂದ 11.1% ಹೆಚ್ಚಳವಾಗಿದೆ. ಸೈಬರ್ ಅಪರಾಧಕ್ಕೆ ಸಂಬಂಧಿಸಿ 65,893 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದಾಗ 4.4% ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ಇದನ್ನು ಓದಿ: ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...