Homeಮುಖಪುಟಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

- Advertisement -
- Advertisement -

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳು, ಆತ್ಮಹತ್ಯೆಗಳು ಮತ್ತು ಅಪಘಾತಗಳು 2021ಕ್ಕೆ ಹೋಲಿಕೆ ಮಾಡಿದಾಗ 2022ರಲ್ಲಿ ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB), ವಾರ್ಷಿಕ ಅಪರಾಧ ವರದಿ ಮತ್ತು ಭಾರತದಲ್ಲಿ ಅಪಘಾತದಿಂದಾಗುವ ಸಾವುಗಳು ಹಾಗೂ ಆತ್ಮಹತ್ಯೆಗಳ ಕುರಿತು (ADSI) ವರದಿಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಇದೇ ವರದಿಯನ್ನು ಆಗಸ್ಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯು 2022ರ ಭಾರತದಲ್ಲಿನ ಅಪರಾಧ ಸನ್ನಿವೇಶದ ಸಮಗ್ರ ಅವಲೋಕನವನ್ನು ಮಾಡಿದೆ. ವರದಿಯಲ್ಲಿ ಹಠಾತ್ ಸಾವುಗಳು, ಆತ್ಮಹತ್ಯೆಗಳು, ಮಹಿಳೆಯರು, ಮಕ್ಕಳ ವಿರುದ್ಧದ ಅಪರಾಧಗಳನ್ನು ಅವಲೋಕನ ಮಾಡಿದೆ. ಭಾರತದಲ್ಲಿ ಒಟ್ಟಾರೆ ಅಪರಾಧದ ಪ್ರಮಾಣವು 2021ರಲ್ಲಿ 7% ಇದ್ದು 2022ರಲ್ಲಿ 6.9%ಕ್ಕೆ ಇಳಿದಿದೆ. ಆದರೆ ಮಹಿಳೆಯರು, ಮಕ್ಕಳು, SC- ST ಮತ್ತು ಸೈಬರ್ ಅಪರಾಧ ಸೇರಿದಂತೆ ನಿರ್ದಿಷ್ಟ ವರ್ಗಗಳ ವಿರುದ್ಧದ ಅಪರಾಧಗಳು 2021ಕ್ಕೆ ಹೋಲಿಕೆ ಮಾಡಿದರೆ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ದೇಶಾದ್ಯಂತ ವರದಿಯಾದ ಹಠಾತ್ ಸಾವುಗಳ ಸಂಖ್ಯೆಯಲ್ಲಿ 11.6% ಹೆಚ್ಚಳವಾಗಿದೆ. 2022ರಲ್ಲಿ ಕನಿಷ್ಠ 56,653 ಹಠಾತ್ ಸಾವುಗಳು ಸಂಭವಿಸಿದೆ. ಇದರಲ್ಲಿ ಹೃದಯಾಘಾತದಿಂದ 32,410 ಸಾವುಗಳು ಸಂಭವಿಸಿವೆ. 24,243 ಸಾವುಗಳಿಗೆ ಇತರ ಕಾರಣಗಳಿಂದ ಸಂಭವಿಸಿದೆ. 45-60ವರ್ಷ ವಯಸ್ಸಿನವರಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಎಂದರೆ 19,456 ಸಾವುಗಳು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯೆಗಳು ಮತ್ತು ಆಕಸ್ಮಿಕ ಸಾವುಗಳು

ಭಾರತದಲ್ಲಿ 2021ರಲ್ಲಿ 1,64,033ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಅದು 2022ರಲ್ಲಿ 1,70,924ಕ್ಕೆ ಏರಿಕೆಯಾಗಿದೆ. 2021ರಲ್ಲಿ ಅಪಘಾತದಿಂದ ಭಾರತದಲ್ಲಿ 3,97,530 ಮಂದಿ ಮೃತಪಟ್ಟಿದ್ದು, 2022ರಲ್ಲಿ ಅಪಘಾತದಲ್ಲಿ 4,30,504 ಮಂದಿ ಮೃತಪಟ್ಟಿದ್ದಾರೆ.

ಇಂಡಿಯಾ ಸ್ಪೆಂಡ್ ವರದಿಯ ಪ್ರಕಾರ, ಭಾರತವು 2021ರಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣವನ್ನು ವರದಿ ಮಾಡಿದೆ. ಪ್ರತಿ 1,00,000 ಜನರಿಗೆ 12 ಆತ್ಮಹತ್ಯೆಗಳು ಸಂಭವಿಸಿದೆ.

ಮಹಿಳೆಯರ ವಿರುದ್ಧದ ಅಪರಾಧಗಳು

2022ರಲ್ಲಿ ಕನಿಷ್ಠ 4,45,256 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, 2021ರಿಂದ ಇದು 4% ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪತಿ ಮತ್ತು ಆತನ ಸಂಬಂಧಿಕರಿಂದ ಕ್ರೌರ್ಯ, ಮಹಿಳೆಯರ ಅಪಹರಣ, ಮಹಿಳೆಯರ ಮೇಲೆ ಹಲ್ಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಸೇರಿದೆ. ವಿಶ್ವ ಆರೋಗ್ಯ ಸಂಸ್ಥೆಯ ದಾಖಲೆಯನ್ನು ಉಲ್ಲೇಖಿಸಿ 2022ರಲ್ಲಿ  ಬಿಬಿಸಿ ಮಾಡಿದ ವರದಿಯ ಪ್ರಕಾರ ಜಾಗತಿಕವಾಗಿ ಮೂವರು ಮಹಿಳೆಯರಲ್ಲಿ ಓರ್ವರು ಲಿಂಗ ಆಧಾರಿತ ಹಿಂಸೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

2021ರಲ್ಲಿ ಭಾರತವು ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧಗಳನ್ನು ದಾಖಲಿಸಿದೆ ಎಂದು ವರದಿಯು ಗಮನಿಸಿದೆ. ಇದು 2016ರಿಂದ 6 ವರ್ಷಗಳಲ್ಲಿ 26.35% ರಷ್ಟು ಏರಿಕೆಯಾಗಿದೆ.

ಮಕ್ಕಳ ವಿರುದ್ಧದ ಅಪರಾಧಗಳು

2022ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ಕನಿಷ್ಠ 1,62,449 ಪ್ರಕರಣಗಳು ದಾಖಲಾಗಿವೆ. ಇದು 2021 ರಿಂದ 8.7% ಹೆಚ್ಚಳವಾಗಿದೆ. ಇವುಗಳಲ್ಲಿ ಅಪಹರಣ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಗಳು ಹೆಚ್ಚು ದಾಖಲಾಗಿವೆ.

ಇದಲ್ಲದೆ 2022ರಲ್ಲಿ ಹಿರಿಯ ನಾಗರಿಕರು, ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳು ಮತ್ತು ಆರ್ಥಿಕ ಅಪರಾಧಗಳು ಭಾರಿ ಹೆಚ್ಚಳವನ್ನು ತೋರಿಸಿವೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 28,545 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದರೆ 9.3% ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎಸ್‌ಸಿಗಳ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿ ಒಟ್ಟು 57,582 ಪ್ರಕರಣಗಳು ದಾಖಲಾಗಿವೆ. ಇದು 2021ರಿಂದ 13.1% ಹೆಚ್ಚಳವನ್ನು ತೋರಿಸುತ್ತದೆ. ಪರಿಶಿಷ್ಟ ಪಂಗಡಗಳ(ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 10,064 ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿ ಕನಿಷ್ಠ 1,93,385 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ರಿಂದ 11.1% ಹೆಚ್ಚಳವಾಗಿದೆ. ಸೈಬರ್ ಅಪರಾಧಕ್ಕೆ ಸಂಬಂಧಿಸಿ 65,893 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದಾಗ 4.4% ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ಇದನ್ನು ಓದಿ: ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...