Homeಮುಖಪುಟಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

- Advertisement -
- Advertisement -

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳು, ಆತ್ಮಹತ್ಯೆಗಳು ಮತ್ತು ಅಪಘಾತಗಳು 2021ಕ್ಕೆ ಹೋಲಿಕೆ ಮಾಡಿದಾಗ 2022ರಲ್ಲಿ ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB), ವಾರ್ಷಿಕ ಅಪರಾಧ ವರದಿ ಮತ್ತು ಭಾರತದಲ್ಲಿ ಅಪಘಾತದಿಂದಾಗುವ ಸಾವುಗಳು ಹಾಗೂ ಆತ್ಮಹತ್ಯೆಗಳ ಕುರಿತು (ADSI) ವರದಿಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಇದೇ ವರದಿಯನ್ನು ಆಗಸ್ಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯು 2022ರ ಭಾರತದಲ್ಲಿನ ಅಪರಾಧ ಸನ್ನಿವೇಶದ ಸಮಗ್ರ ಅವಲೋಕನವನ್ನು ಮಾಡಿದೆ. ವರದಿಯಲ್ಲಿ ಹಠಾತ್ ಸಾವುಗಳು, ಆತ್ಮಹತ್ಯೆಗಳು, ಮಹಿಳೆಯರು, ಮಕ್ಕಳ ವಿರುದ್ಧದ ಅಪರಾಧಗಳನ್ನು ಅವಲೋಕನ ಮಾಡಿದೆ. ಭಾರತದಲ್ಲಿ ಒಟ್ಟಾರೆ ಅಪರಾಧದ ಪ್ರಮಾಣವು 2021ರಲ್ಲಿ 7% ಇದ್ದು 2022ರಲ್ಲಿ 6.9%ಕ್ಕೆ ಇಳಿದಿದೆ. ಆದರೆ ಮಹಿಳೆಯರು, ಮಕ್ಕಳು, SC- ST ಮತ್ತು ಸೈಬರ್ ಅಪರಾಧ ಸೇರಿದಂತೆ ನಿರ್ದಿಷ್ಟ ವರ್ಗಗಳ ವಿರುದ್ಧದ ಅಪರಾಧಗಳು 2021ಕ್ಕೆ ಹೋಲಿಕೆ ಮಾಡಿದರೆ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ದೇಶಾದ್ಯಂತ ವರದಿಯಾದ ಹಠಾತ್ ಸಾವುಗಳ ಸಂಖ್ಯೆಯಲ್ಲಿ 11.6% ಹೆಚ್ಚಳವಾಗಿದೆ. 2022ರಲ್ಲಿ ಕನಿಷ್ಠ 56,653 ಹಠಾತ್ ಸಾವುಗಳು ಸಂಭವಿಸಿದೆ. ಇದರಲ್ಲಿ ಹೃದಯಾಘಾತದಿಂದ 32,410 ಸಾವುಗಳು ಸಂಭವಿಸಿವೆ. 24,243 ಸಾವುಗಳಿಗೆ ಇತರ ಕಾರಣಗಳಿಂದ ಸಂಭವಿಸಿದೆ. 45-60ವರ್ಷ ವಯಸ್ಸಿನವರಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಎಂದರೆ 19,456 ಸಾವುಗಳು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯೆಗಳು ಮತ್ತು ಆಕಸ್ಮಿಕ ಸಾವುಗಳು

ಭಾರತದಲ್ಲಿ 2021ರಲ್ಲಿ 1,64,033ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಅದು 2022ರಲ್ಲಿ 1,70,924ಕ್ಕೆ ಏರಿಕೆಯಾಗಿದೆ. 2021ರಲ್ಲಿ ಅಪಘಾತದಿಂದ ಭಾರತದಲ್ಲಿ 3,97,530 ಮಂದಿ ಮೃತಪಟ್ಟಿದ್ದು, 2022ರಲ್ಲಿ ಅಪಘಾತದಲ್ಲಿ 4,30,504 ಮಂದಿ ಮೃತಪಟ್ಟಿದ್ದಾರೆ.

ಇಂಡಿಯಾ ಸ್ಪೆಂಡ್ ವರದಿಯ ಪ್ರಕಾರ, ಭಾರತವು 2021ರಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣವನ್ನು ವರದಿ ಮಾಡಿದೆ. ಪ್ರತಿ 1,00,000 ಜನರಿಗೆ 12 ಆತ್ಮಹತ್ಯೆಗಳು ಸಂಭವಿಸಿದೆ.

ಮಹಿಳೆಯರ ವಿರುದ್ಧದ ಅಪರಾಧಗಳು

2022ರಲ್ಲಿ ಕನಿಷ್ಠ 4,45,256 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, 2021ರಿಂದ ಇದು 4% ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪತಿ ಮತ್ತು ಆತನ ಸಂಬಂಧಿಕರಿಂದ ಕ್ರೌರ್ಯ, ಮಹಿಳೆಯರ ಅಪಹರಣ, ಮಹಿಳೆಯರ ಮೇಲೆ ಹಲ್ಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಸೇರಿದೆ. ವಿಶ್ವ ಆರೋಗ್ಯ ಸಂಸ್ಥೆಯ ದಾಖಲೆಯನ್ನು ಉಲ್ಲೇಖಿಸಿ 2022ರಲ್ಲಿ  ಬಿಬಿಸಿ ಮಾಡಿದ ವರದಿಯ ಪ್ರಕಾರ ಜಾಗತಿಕವಾಗಿ ಮೂವರು ಮಹಿಳೆಯರಲ್ಲಿ ಓರ್ವರು ಲಿಂಗ ಆಧಾರಿತ ಹಿಂಸೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

2021ರಲ್ಲಿ ಭಾರತವು ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧಗಳನ್ನು ದಾಖಲಿಸಿದೆ ಎಂದು ವರದಿಯು ಗಮನಿಸಿದೆ. ಇದು 2016ರಿಂದ 6 ವರ್ಷಗಳಲ್ಲಿ 26.35% ರಷ್ಟು ಏರಿಕೆಯಾಗಿದೆ.

ಮಕ್ಕಳ ವಿರುದ್ಧದ ಅಪರಾಧಗಳು

2022ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ಕನಿಷ್ಠ 1,62,449 ಪ್ರಕರಣಗಳು ದಾಖಲಾಗಿವೆ. ಇದು 2021 ರಿಂದ 8.7% ಹೆಚ್ಚಳವಾಗಿದೆ. ಇವುಗಳಲ್ಲಿ ಅಪಹರಣ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಗಳು ಹೆಚ್ಚು ದಾಖಲಾಗಿವೆ.

ಇದಲ್ಲದೆ 2022ರಲ್ಲಿ ಹಿರಿಯ ನಾಗರಿಕರು, ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳು ಮತ್ತು ಆರ್ಥಿಕ ಅಪರಾಧಗಳು ಭಾರಿ ಹೆಚ್ಚಳವನ್ನು ತೋರಿಸಿವೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 28,545 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದರೆ 9.3% ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎಸ್‌ಸಿಗಳ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿ ಒಟ್ಟು 57,582 ಪ್ರಕರಣಗಳು ದಾಖಲಾಗಿವೆ. ಇದು 2021ರಿಂದ 13.1% ಹೆಚ್ಚಳವನ್ನು ತೋರಿಸುತ್ತದೆ. ಪರಿಶಿಷ್ಟ ಪಂಗಡಗಳ(ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 10,064 ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿ ಕನಿಷ್ಠ 1,93,385 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ರಿಂದ 11.1% ಹೆಚ್ಚಳವಾಗಿದೆ. ಸೈಬರ್ ಅಪರಾಧಕ್ಕೆ ಸಂಬಂಧಿಸಿ 65,893 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದಾಗ 4.4% ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ಇದನ್ನು ಓದಿ: ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...