Homeಮುಖಪುಟಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ

- Advertisement -
- Advertisement -

ಮಾಧ್ಯಮಗಳು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕೆಲವೇ ದಿನಗಳಲ್ಲಿ ಹೀರೋನ್ನನ್ನಾಗಿ ಮಾಡುತ್ತವೆ. ಹೀರೋ ಆದವನು ತಮ್ಮ ಮಾತು ಕೇಳದಿದ್ದರೆ ಮತ್ತೆ ಕೆಲವೇ ದಿನಗಳಲ್ಲಿ ಆತನನ್ನು ದೊಡ್ಡ ವಿಲನ್ ಎಂದು ಚಿತ್ರಿಸಿಬಿಡುತ್ತವೆ. ಈ ಮಾತು ಈಗ ಏಕೆಂದರೆ, ಕಳೆದೆರಡು ದಿನಗಳಿಂದ ಗುಡಿಸಲಿನಿಂದ ಪಾರ್ಲಿಮೆಂಟ್ ವರೆಗೆ, ಸೈಕಲ್ ನಿಂದ ಸಂಸತ್ತಿನವರೆಗೆ ಸಾಗಿದ ಬಡ ಸಾಧು, ಸರಳ ಜೀವಿ, ಓರಿಸ್ಸಾದ ಮೋದಿ, ರಾಜಕಾರಣದ ಫಕೀರ ಎಂದು ಇನ್ನಿತ್ಯಾದಿ ಭೂಷಣಗಳಿಂದ ಪ್ರತಾಪಚಂದ್ರ ಸಾರಂಗಿ ರವರ ಕುರಿತು ಒಂದೇ ಸಮನೇ ಎಲ್ಲಾ ಮಾಧ್ಯಮಗಳು ವಿಪರೀತ ಹೊಗಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವರಾಗಿ ಪ್ರತಾಪಚಂದ್ರ ಸಾರಂಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗಾಗಿ ಮಾಧ್ಯಮಗಳು ಬಹುಪರಾಕ್ ಹೇಳುವುದನ್ನು ಇನ್ನು ನಿಲ್ಲಿಸಿಲ್ಲ. ಅತಿ ಎನಿಸುವಷ್ಟು ಹೊಗಳಿ ಅಟ್ಟಕ್ಕೇರಿಸಿಬಿಟ್ಟಿದ್ದಾರೆ. ಇದಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಚಪ್ಪಾಳೆ ತಟ್ಟುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಆದರೆ ಕೇಂದ್ರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಾಪ ಸಾರಂಗಿ ವಿರುದ್ಧ ಗಂಭೀರವಾದ ಕ್ರಿಮಿನಲ್ ಆರೋಪಗಳಿವೆ ಎಂಬ ಸತ್ಯ ಬಯಲಿಗೆ ಬಂದಿದೆ. ಸಾರಂಗಿಯವರ ಈ ಇನ್ನೊಂದು ಮುಖವನ್ನು ತೋರಿಸಲು ಯಾವ ಮುಖ್ಯವಾಹಿನಿ ಮಾಧ್ಯಮಗಳು ಮನಸ್ಸು ಮಾಡುತ್ತಿಲ್ಲ.

ಸಾರಂಗಿಯವರು ತಮ್ಮ ಮೇಲೆ ಏಳು ಗಂಭೀರ ಕ್ರಿಮಿನಲ್ ಆಪಾದನೆಗಳಿವೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಕೇಸ್ ಗಳು ದಾಖಲಾಗಿರುವುದು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದಾಗ. ಇಂತಹ ಗಂಭೀರ ಆರೋಪಿ ಈಗ ಕೇಂದ್ರದ ಸಚಿವ. ಅದೂ, ಹಲವಾರು ಖಾತೆಗಳಿಗೆ ಎಂದು ಫೇಸ್ ಬುಕ್ ನಲ್ಲಿ ನೂರಾರು ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಬಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಮತ್ತು ಅವರ ಮೂವರು ಪುಟ್ಟ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ.

1999 ರಲ್ಲಿ ಒಡಿಶಾ ರಾಜ್ಯದ ಮಯೂಬರ್ಂಜ್ ಜಿಲ್ಲೆಯಲ್ಲಿ ಕುಷ್ಠ ರೋಗ ಮಿತಿ ಮೀರೀತ್ತು. ಆಗ ಗ್ರಹಾಂ ಸ್ಟೈನ್ಸ್ ಎಂಬ ಕ್ರೈಸ್ತ ಮಿಷನರಿ ರೋಗಿಗಳ ಚಿಕಿತ್ಸೆ, ಆರೈಕೆ ಮಾಡುತ್ತಿದ್ದರು. ಆದರೆ ಹಲವು ಜನರನ್ನು ಮತಾಂತಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾರಾ ಸಿಂಗ್ ಮತ್ತು ಹಲವರು ಗ್ರಹಾಂ ಸ್ಟೈನ್ಸ್ ಅವರರನ್ನು ಅವರ ಮಕ್ಕಳ ಸಮೇತ ವಾಹನವೊಂದಕ್ಕೆ ಕೂಡಿ ಹಾಕಿ ಸಜೀವ ದಹನ ಮಾಡಿದ್ದರು. ಆ ತಂಡಕ್ಕೆ ಗುರುವಾಗಿದ್ದವರು ಇದೇ ಸಾರಂಗಿ ಎಂಬ ಆರೋಪವಿದೆ.

 

1999 ರಲ್ಲಿ ಒಡಿಶಾ ರಾಜ್ಯದ ಬಜರಂಗದಳ ಸಂಚಾಲಕರಾಗಿದ್ದ ಸಾರಂಗಿ, ದಾರಾ ಸಿಂಗ್ ತಂಡಕ್ಕೆ ನೇರಾ ಹಾಗೂ ಪರೋಕ್ಷವಾಗಿ ಸಹಕಾರಿಸಿದ್ದಾರೆ ಎಂಬ ಆರೋಪದ ಮೇಲೆ ಸಾರಂಗಿಯವರಿಗೆ 2003ರಲ್ಲಿ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿದಿಸಿತ್ತು. ನಂತರ ಓರಿಸ್ಸಾ ಹೈಕೋರ್ಟ್ ಸಾಕ್ಷ್ಯಗಳ ಕೊರತೆಯ ನೆಪದಿಂದ ಜೀವಾವಧಿ ಶಿಕ್ಷೆಯನ್ನು ಎರಡು ವರ್ಷಕ್ಕೆ ಇಳಿಸಿ ನಂತರ ಬಿಡುಗಡೆಗೊಳಿಸಲಾಗಿತ್ತು.

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ. ಸಂಪೂರ್ಣ ಪರಾಮರ್ಶಿಸುವ ಗುಣವನ್ನು ಎಂದೋ ಕಳೆದುಕೊಂಡ ಬಹಳಷ್ಟು ಭಾರತೀಯರು ಅದಕ್ಕೆ ದನಿಗೂಡಿಸಿ ಬಹುಪರಾಕ್ ಹೇಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‍ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)


ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀರೊ ಯಾವತ್ತಿಗು ಹೀರೊನೆ,
    ಅವರ ಸರಳತೆ ಹಾಗು ಜೀವನ ಶೈಲಿಯ ಬಗ್ಗೆ ತಿಳಿದು ಇಂತಹ ವ್ಯಕ್ತಿಯನ್ನು ಗುರುತಿಸಿ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿದಂತಹ ವಿಷಯ ಬಹಳ ಮಹತ್ವದಾಗಿತ್ತು,ನಿಜವಾದ ಅಚ್ಚೆ ದಿನ ಇದಾಗಿತ್ತು ಹೀಗಿದ್ದು ಅವರು ಸಂಘ ಪರಿವಾರ,ಭಜರಂಗದಳದ ವ್ಯಕ್ತಿಯೆಂಬ ಮಾಹಿತಿ ತಿಳಿದು ಇನ್ನಷ್ಟು ಹೆಮ್ಮೆ ಮೂಡುತ್ತಿದೆ ನಿಮ್ಮ ಈ ಮಾಹಿತಿಗಾಗಿ ಧನ್ಯವಾದಗಳು.
    ಸಂಘ ಶಕ್ತಿಗೆ ಜಯವಾಗಲಿ
    ಜೈ ಭಜರಂಗದಳ???

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...