Homeಮುಖಪುಟಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ

- Advertisement -
- Advertisement -

ಮಾಧ್ಯಮಗಳು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕೆಲವೇ ದಿನಗಳಲ್ಲಿ ಹೀರೋನ್ನನ್ನಾಗಿ ಮಾಡುತ್ತವೆ. ಹೀರೋ ಆದವನು ತಮ್ಮ ಮಾತು ಕೇಳದಿದ್ದರೆ ಮತ್ತೆ ಕೆಲವೇ ದಿನಗಳಲ್ಲಿ ಆತನನ್ನು ದೊಡ್ಡ ವಿಲನ್ ಎಂದು ಚಿತ್ರಿಸಿಬಿಡುತ್ತವೆ. ಈ ಮಾತು ಈಗ ಏಕೆಂದರೆ, ಕಳೆದೆರಡು ದಿನಗಳಿಂದ ಗುಡಿಸಲಿನಿಂದ ಪಾರ್ಲಿಮೆಂಟ್ ವರೆಗೆ, ಸೈಕಲ್ ನಿಂದ ಸಂಸತ್ತಿನವರೆಗೆ ಸಾಗಿದ ಬಡ ಸಾಧು, ಸರಳ ಜೀವಿ, ಓರಿಸ್ಸಾದ ಮೋದಿ, ರಾಜಕಾರಣದ ಫಕೀರ ಎಂದು ಇನ್ನಿತ್ಯಾದಿ ಭೂಷಣಗಳಿಂದ ಪ್ರತಾಪಚಂದ್ರ ಸಾರಂಗಿ ರವರ ಕುರಿತು ಒಂದೇ ಸಮನೇ ಎಲ್ಲಾ ಮಾಧ್ಯಮಗಳು ವಿಪರೀತ ಹೊಗಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವರಾಗಿ ಪ್ರತಾಪಚಂದ್ರ ಸಾರಂಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗಾಗಿ ಮಾಧ್ಯಮಗಳು ಬಹುಪರಾಕ್ ಹೇಳುವುದನ್ನು ಇನ್ನು ನಿಲ್ಲಿಸಿಲ್ಲ. ಅತಿ ಎನಿಸುವಷ್ಟು ಹೊಗಳಿ ಅಟ್ಟಕ್ಕೇರಿಸಿಬಿಟ್ಟಿದ್ದಾರೆ. ಇದಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಚಪ್ಪಾಳೆ ತಟ್ಟುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಆದರೆ ಕೇಂದ್ರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಾಪ ಸಾರಂಗಿ ವಿರುದ್ಧ ಗಂಭೀರವಾದ ಕ್ರಿಮಿನಲ್ ಆರೋಪಗಳಿವೆ ಎಂಬ ಸತ್ಯ ಬಯಲಿಗೆ ಬಂದಿದೆ. ಸಾರಂಗಿಯವರ ಈ ಇನ್ನೊಂದು ಮುಖವನ್ನು ತೋರಿಸಲು ಯಾವ ಮುಖ್ಯವಾಹಿನಿ ಮಾಧ್ಯಮಗಳು ಮನಸ್ಸು ಮಾಡುತ್ತಿಲ್ಲ.

ಸಾರಂಗಿಯವರು ತಮ್ಮ ಮೇಲೆ ಏಳು ಗಂಭೀರ ಕ್ರಿಮಿನಲ್ ಆಪಾದನೆಗಳಿವೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಕೇಸ್ ಗಳು ದಾಖಲಾಗಿರುವುದು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದಾಗ. ಇಂತಹ ಗಂಭೀರ ಆರೋಪಿ ಈಗ ಕೇಂದ್ರದ ಸಚಿವ. ಅದೂ, ಹಲವಾರು ಖಾತೆಗಳಿಗೆ ಎಂದು ಫೇಸ್ ಬುಕ್ ನಲ್ಲಿ ನೂರಾರು ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಬಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಮತ್ತು ಅವರ ಮೂವರು ಪುಟ್ಟ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ.

1999 ರಲ್ಲಿ ಒಡಿಶಾ ರಾಜ್ಯದ ಮಯೂಬರ್ಂಜ್ ಜಿಲ್ಲೆಯಲ್ಲಿ ಕುಷ್ಠ ರೋಗ ಮಿತಿ ಮೀರೀತ್ತು. ಆಗ ಗ್ರಹಾಂ ಸ್ಟೈನ್ಸ್ ಎಂಬ ಕ್ರೈಸ್ತ ಮಿಷನರಿ ರೋಗಿಗಳ ಚಿಕಿತ್ಸೆ, ಆರೈಕೆ ಮಾಡುತ್ತಿದ್ದರು. ಆದರೆ ಹಲವು ಜನರನ್ನು ಮತಾಂತಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾರಾ ಸಿಂಗ್ ಮತ್ತು ಹಲವರು ಗ್ರಹಾಂ ಸ್ಟೈನ್ಸ್ ಅವರರನ್ನು ಅವರ ಮಕ್ಕಳ ಸಮೇತ ವಾಹನವೊಂದಕ್ಕೆ ಕೂಡಿ ಹಾಕಿ ಸಜೀವ ದಹನ ಮಾಡಿದ್ದರು. ಆ ತಂಡಕ್ಕೆ ಗುರುವಾಗಿದ್ದವರು ಇದೇ ಸಾರಂಗಿ ಎಂಬ ಆರೋಪವಿದೆ.

 

1999 ರಲ್ಲಿ ಒಡಿಶಾ ರಾಜ್ಯದ ಬಜರಂಗದಳ ಸಂಚಾಲಕರಾಗಿದ್ದ ಸಾರಂಗಿ, ದಾರಾ ಸಿಂಗ್ ತಂಡಕ್ಕೆ ನೇರಾ ಹಾಗೂ ಪರೋಕ್ಷವಾಗಿ ಸಹಕಾರಿಸಿದ್ದಾರೆ ಎಂಬ ಆರೋಪದ ಮೇಲೆ ಸಾರಂಗಿಯವರಿಗೆ 2003ರಲ್ಲಿ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿದಿಸಿತ್ತು. ನಂತರ ಓರಿಸ್ಸಾ ಹೈಕೋರ್ಟ್ ಸಾಕ್ಷ್ಯಗಳ ಕೊರತೆಯ ನೆಪದಿಂದ ಜೀವಾವಧಿ ಶಿಕ್ಷೆಯನ್ನು ಎರಡು ವರ್ಷಕ್ಕೆ ಇಳಿಸಿ ನಂತರ ಬಿಡುಗಡೆಗೊಳಿಸಲಾಗಿತ್ತು.

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ. ಸಂಪೂರ್ಣ ಪರಾಮರ್ಶಿಸುವ ಗುಣವನ್ನು ಎಂದೋ ಕಳೆದುಕೊಂಡ ಬಹಳಷ್ಟು ಭಾರತೀಯರು ಅದಕ್ಕೆ ದನಿಗೂಡಿಸಿ ಬಹುಪರಾಕ್ ಹೇಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‍ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)


ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀರೊ ಯಾವತ್ತಿಗು ಹೀರೊನೆ,
    ಅವರ ಸರಳತೆ ಹಾಗು ಜೀವನ ಶೈಲಿಯ ಬಗ್ಗೆ ತಿಳಿದು ಇಂತಹ ವ್ಯಕ್ತಿಯನ್ನು ಗುರುತಿಸಿ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿದಂತಹ ವಿಷಯ ಬಹಳ ಮಹತ್ವದಾಗಿತ್ತು,ನಿಜವಾದ ಅಚ್ಚೆ ದಿನ ಇದಾಗಿತ್ತು ಹೀಗಿದ್ದು ಅವರು ಸಂಘ ಪರಿವಾರ,ಭಜರಂಗದಳದ ವ್ಯಕ್ತಿಯೆಂಬ ಮಾಹಿತಿ ತಿಳಿದು ಇನ್ನಷ್ಟು ಹೆಮ್ಮೆ ಮೂಡುತ್ತಿದೆ ನಿಮ್ಮ ಈ ಮಾಹಿತಿಗಾಗಿ ಧನ್ಯವಾದಗಳು.
    ಸಂಘ ಶಕ್ತಿಗೆ ಜಯವಾಗಲಿ
    ಜೈ ಭಜರಂಗದಳ???

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...