Homeಮುಖಪುಟಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ

- Advertisement -
- Advertisement -

ಮಾಧ್ಯಮಗಳು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕೆಲವೇ ದಿನಗಳಲ್ಲಿ ಹೀರೋನ್ನನ್ನಾಗಿ ಮಾಡುತ್ತವೆ. ಹೀರೋ ಆದವನು ತಮ್ಮ ಮಾತು ಕೇಳದಿದ್ದರೆ ಮತ್ತೆ ಕೆಲವೇ ದಿನಗಳಲ್ಲಿ ಆತನನ್ನು ದೊಡ್ಡ ವಿಲನ್ ಎಂದು ಚಿತ್ರಿಸಿಬಿಡುತ್ತವೆ. ಈ ಮಾತು ಈಗ ಏಕೆಂದರೆ, ಕಳೆದೆರಡು ದಿನಗಳಿಂದ ಗುಡಿಸಲಿನಿಂದ ಪಾರ್ಲಿಮೆಂಟ್ ವರೆಗೆ, ಸೈಕಲ್ ನಿಂದ ಸಂಸತ್ತಿನವರೆಗೆ ಸಾಗಿದ ಬಡ ಸಾಧು, ಸರಳ ಜೀವಿ, ಓರಿಸ್ಸಾದ ಮೋದಿ, ರಾಜಕಾರಣದ ಫಕೀರ ಎಂದು ಇನ್ನಿತ್ಯಾದಿ ಭೂಷಣಗಳಿಂದ ಪ್ರತಾಪಚಂದ್ರ ಸಾರಂಗಿ ರವರ ಕುರಿತು ಒಂದೇ ಸಮನೇ ಎಲ್ಲಾ ಮಾಧ್ಯಮಗಳು ವಿಪರೀತ ಹೊಗಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವರಾಗಿ ಪ್ರತಾಪಚಂದ್ರ ಸಾರಂಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗಾಗಿ ಮಾಧ್ಯಮಗಳು ಬಹುಪರಾಕ್ ಹೇಳುವುದನ್ನು ಇನ್ನು ನಿಲ್ಲಿಸಿಲ್ಲ. ಅತಿ ಎನಿಸುವಷ್ಟು ಹೊಗಳಿ ಅಟ್ಟಕ್ಕೇರಿಸಿಬಿಟ್ಟಿದ್ದಾರೆ. ಇದಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಚಪ್ಪಾಳೆ ತಟ್ಟುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಆದರೆ ಕೇಂದ್ರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಾಪ ಸಾರಂಗಿ ವಿರುದ್ಧ ಗಂಭೀರವಾದ ಕ್ರಿಮಿನಲ್ ಆರೋಪಗಳಿವೆ ಎಂಬ ಸತ್ಯ ಬಯಲಿಗೆ ಬಂದಿದೆ. ಸಾರಂಗಿಯವರ ಈ ಇನ್ನೊಂದು ಮುಖವನ್ನು ತೋರಿಸಲು ಯಾವ ಮುಖ್ಯವಾಹಿನಿ ಮಾಧ್ಯಮಗಳು ಮನಸ್ಸು ಮಾಡುತ್ತಿಲ್ಲ.

ಸಾರಂಗಿಯವರು ತಮ್ಮ ಮೇಲೆ ಏಳು ಗಂಭೀರ ಕ್ರಿಮಿನಲ್ ಆಪಾದನೆಗಳಿವೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಕೇಸ್ ಗಳು ದಾಖಲಾಗಿರುವುದು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದಾಗ. ಇಂತಹ ಗಂಭೀರ ಆರೋಪಿ ಈಗ ಕೇಂದ್ರದ ಸಚಿವ. ಅದೂ, ಹಲವಾರು ಖಾತೆಗಳಿಗೆ ಎಂದು ಫೇಸ್ ಬುಕ್ ನಲ್ಲಿ ನೂರಾರು ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಬಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಮತ್ತು ಅವರ ಮೂವರು ಪುಟ್ಟ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ.

1999 ರಲ್ಲಿ ಒಡಿಶಾ ರಾಜ್ಯದ ಮಯೂಬರ್ಂಜ್ ಜಿಲ್ಲೆಯಲ್ಲಿ ಕುಷ್ಠ ರೋಗ ಮಿತಿ ಮೀರೀತ್ತು. ಆಗ ಗ್ರಹಾಂ ಸ್ಟೈನ್ಸ್ ಎಂಬ ಕ್ರೈಸ್ತ ಮಿಷನರಿ ರೋಗಿಗಳ ಚಿಕಿತ್ಸೆ, ಆರೈಕೆ ಮಾಡುತ್ತಿದ್ದರು. ಆದರೆ ಹಲವು ಜನರನ್ನು ಮತಾಂತಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾರಾ ಸಿಂಗ್ ಮತ್ತು ಹಲವರು ಗ್ರಹಾಂ ಸ್ಟೈನ್ಸ್ ಅವರರನ್ನು ಅವರ ಮಕ್ಕಳ ಸಮೇತ ವಾಹನವೊಂದಕ್ಕೆ ಕೂಡಿ ಹಾಕಿ ಸಜೀವ ದಹನ ಮಾಡಿದ್ದರು. ಆ ತಂಡಕ್ಕೆ ಗುರುವಾಗಿದ್ದವರು ಇದೇ ಸಾರಂಗಿ ಎಂಬ ಆರೋಪವಿದೆ.

 

1999 ರಲ್ಲಿ ಒಡಿಶಾ ರಾಜ್ಯದ ಬಜರಂಗದಳ ಸಂಚಾಲಕರಾಗಿದ್ದ ಸಾರಂಗಿ, ದಾರಾ ಸಿಂಗ್ ತಂಡಕ್ಕೆ ನೇರಾ ಹಾಗೂ ಪರೋಕ್ಷವಾಗಿ ಸಹಕಾರಿಸಿದ್ದಾರೆ ಎಂಬ ಆರೋಪದ ಮೇಲೆ ಸಾರಂಗಿಯವರಿಗೆ 2003ರಲ್ಲಿ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿದಿಸಿತ್ತು. ನಂತರ ಓರಿಸ್ಸಾ ಹೈಕೋರ್ಟ್ ಸಾಕ್ಷ್ಯಗಳ ಕೊರತೆಯ ನೆಪದಿಂದ ಜೀವಾವಧಿ ಶಿಕ್ಷೆಯನ್ನು ಎರಡು ವರ್ಷಕ್ಕೆ ಇಳಿಸಿ ನಂತರ ಬಿಡುಗಡೆಗೊಳಿಸಲಾಗಿತ್ತು.

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ. ಸಂಪೂರ್ಣ ಪರಾಮರ್ಶಿಸುವ ಗುಣವನ್ನು ಎಂದೋ ಕಳೆದುಕೊಂಡ ಬಹಳಷ್ಟು ಭಾರತೀಯರು ಅದಕ್ಕೆ ದನಿಗೂಡಿಸಿ ಬಹುಪರಾಕ್ ಹೇಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‍ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)


ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀರೊ ಯಾವತ್ತಿಗು ಹೀರೊನೆ,
    ಅವರ ಸರಳತೆ ಹಾಗು ಜೀವನ ಶೈಲಿಯ ಬಗ್ಗೆ ತಿಳಿದು ಇಂತಹ ವ್ಯಕ್ತಿಯನ್ನು ಗುರುತಿಸಿ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿದಂತಹ ವಿಷಯ ಬಹಳ ಮಹತ್ವದಾಗಿತ್ತು,ನಿಜವಾದ ಅಚ್ಚೆ ದಿನ ಇದಾಗಿತ್ತು ಹೀಗಿದ್ದು ಅವರು ಸಂಘ ಪರಿವಾರ,ಭಜರಂಗದಳದ ವ್ಯಕ್ತಿಯೆಂಬ ಮಾಹಿತಿ ತಿಳಿದು ಇನ್ನಷ್ಟು ಹೆಮ್ಮೆ ಮೂಡುತ್ತಿದೆ ನಿಮ್ಮ ಈ ಮಾಹಿತಿಗಾಗಿ ಧನ್ಯವಾದಗಳು.
    ಸಂಘ ಶಕ್ತಿಗೆ ಜಯವಾಗಲಿ
    ಜೈ ಭಜರಂಗದಳ???

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...