Homeಮುಖಪುಟಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ

- Advertisement -
- Advertisement -

ಮಾಧ್ಯಮಗಳು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕೆಲವೇ ದಿನಗಳಲ್ಲಿ ಹೀರೋನ್ನನ್ನಾಗಿ ಮಾಡುತ್ತವೆ. ಹೀರೋ ಆದವನು ತಮ್ಮ ಮಾತು ಕೇಳದಿದ್ದರೆ ಮತ್ತೆ ಕೆಲವೇ ದಿನಗಳಲ್ಲಿ ಆತನನ್ನು ದೊಡ್ಡ ವಿಲನ್ ಎಂದು ಚಿತ್ರಿಸಿಬಿಡುತ್ತವೆ. ಈ ಮಾತು ಈಗ ಏಕೆಂದರೆ, ಕಳೆದೆರಡು ದಿನಗಳಿಂದ ಗುಡಿಸಲಿನಿಂದ ಪಾರ್ಲಿಮೆಂಟ್ ವರೆಗೆ, ಸೈಕಲ್ ನಿಂದ ಸಂಸತ್ತಿನವರೆಗೆ ಸಾಗಿದ ಬಡ ಸಾಧು, ಸರಳ ಜೀವಿ, ಓರಿಸ್ಸಾದ ಮೋದಿ, ರಾಜಕಾರಣದ ಫಕೀರ ಎಂದು ಇನ್ನಿತ್ಯಾದಿ ಭೂಷಣಗಳಿಂದ ಪ್ರತಾಪಚಂದ್ರ ಸಾರಂಗಿ ರವರ ಕುರಿತು ಒಂದೇ ಸಮನೇ ಎಲ್ಲಾ ಮಾಧ್ಯಮಗಳು ವಿಪರೀತ ಹೊಗಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವರಾಗಿ ಪ್ರತಾಪಚಂದ್ರ ಸಾರಂಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗಾಗಿ ಮಾಧ್ಯಮಗಳು ಬಹುಪರಾಕ್ ಹೇಳುವುದನ್ನು ಇನ್ನು ನಿಲ್ಲಿಸಿಲ್ಲ. ಅತಿ ಎನಿಸುವಷ್ಟು ಹೊಗಳಿ ಅಟ್ಟಕ್ಕೇರಿಸಿಬಿಟ್ಟಿದ್ದಾರೆ. ಇದಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಚಪ್ಪಾಳೆ ತಟ್ಟುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಆದರೆ ಕೇಂದ್ರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಾಪ ಸಾರಂಗಿ ವಿರುದ್ಧ ಗಂಭೀರವಾದ ಕ್ರಿಮಿನಲ್ ಆರೋಪಗಳಿವೆ ಎಂಬ ಸತ್ಯ ಬಯಲಿಗೆ ಬಂದಿದೆ. ಸಾರಂಗಿಯವರ ಈ ಇನ್ನೊಂದು ಮುಖವನ್ನು ತೋರಿಸಲು ಯಾವ ಮುಖ್ಯವಾಹಿನಿ ಮಾಧ್ಯಮಗಳು ಮನಸ್ಸು ಮಾಡುತ್ತಿಲ್ಲ.

ಸಾರಂಗಿಯವರು ತಮ್ಮ ಮೇಲೆ ಏಳು ಗಂಭೀರ ಕ್ರಿಮಿನಲ್ ಆಪಾದನೆಗಳಿವೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಕೇಸ್ ಗಳು ದಾಖಲಾಗಿರುವುದು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದಾಗ. ಇಂತಹ ಗಂಭೀರ ಆರೋಪಿ ಈಗ ಕೇಂದ್ರದ ಸಚಿವ. ಅದೂ, ಹಲವಾರು ಖಾತೆಗಳಿಗೆ ಎಂದು ಫೇಸ್ ಬುಕ್ ನಲ್ಲಿ ನೂರಾರು ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಬಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಮತ್ತು ಅವರ ಮೂವರು ಪುಟ್ಟ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ.

1999 ರಲ್ಲಿ ಒಡಿಶಾ ರಾಜ್ಯದ ಮಯೂಬರ್ಂಜ್ ಜಿಲ್ಲೆಯಲ್ಲಿ ಕುಷ್ಠ ರೋಗ ಮಿತಿ ಮೀರೀತ್ತು. ಆಗ ಗ್ರಹಾಂ ಸ್ಟೈನ್ಸ್ ಎಂಬ ಕ್ರೈಸ್ತ ಮಿಷನರಿ ರೋಗಿಗಳ ಚಿಕಿತ್ಸೆ, ಆರೈಕೆ ಮಾಡುತ್ತಿದ್ದರು. ಆದರೆ ಹಲವು ಜನರನ್ನು ಮತಾಂತಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾರಾ ಸಿಂಗ್ ಮತ್ತು ಹಲವರು ಗ್ರಹಾಂ ಸ್ಟೈನ್ಸ್ ಅವರರನ್ನು ಅವರ ಮಕ್ಕಳ ಸಮೇತ ವಾಹನವೊಂದಕ್ಕೆ ಕೂಡಿ ಹಾಕಿ ಸಜೀವ ದಹನ ಮಾಡಿದ್ದರು. ಆ ತಂಡಕ್ಕೆ ಗುರುವಾಗಿದ್ದವರು ಇದೇ ಸಾರಂಗಿ ಎಂಬ ಆರೋಪವಿದೆ.

 

1999 ರಲ್ಲಿ ಒಡಿಶಾ ರಾಜ್ಯದ ಬಜರಂಗದಳ ಸಂಚಾಲಕರಾಗಿದ್ದ ಸಾರಂಗಿ, ದಾರಾ ಸಿಂಗ್ ತಂಡಕ್ಕೆ ನೇರಾ ಹಾಗೂ ಪರೋಕ್ಷವಾಗಿ ಸಹಕಾರಿಸಿದ್ದಾರೆ ಎಂಬ ಆರೋಪದ ಮೇಲೆ ಸಾರಂಗಿಯವರಿಗೆ 2003ರಲ್ಲಿ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿದಿಸಿತ್ತು. ನಂತರ ಓರಿಸ್ಸಾ ಹೈಕೋರ್ಟ್ ಸಾಕ್ಷ್ಯಗಳ ಕೊರತೆಯ ನೆಪದಿಂದ ಜೀವಾವಧಿ ಶಿಕ್ಷೆಯನ್ನು ಎರಡು ವರ್ಷಕ್ಕೆ ಇಳಿಸಿ ನಂತರ ಬಿಡುಗಡೆಗೊಳಿಸಲಾಗಿತ್ತು.

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ. ಸಂಪೂರ್ಣ ಪರಾಮರ್ಶಿಸುವ ಗುಣವನ್ನು ಎಂದೋ ಕಳೆದುಕೊಂಡ ಬಹಳಷ್ಟು ಭಾರತೀಯರು ಅದಕ್ಕೆ ದನಿಗೂಡಿಸಿ ಬಹುಪರಾಕ್ ಹೇಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‍ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)


ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀರೊ ಯಾವತ್ತಿಗು ಹೀರೊನೆ,
    ಅವರ ಸರಳತೆ ಹಾಗು ಜೀವನ ಶೈಲಿಯ ಬಗ್ಗೆ ತಿಳಿದು ಇಂತಹ ವ್ಯಕ್ತಿಯನ್ನು ಗುರುತಿಸಿ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿದಂತಹ ವಿಷಯ ಬಹಳ ಮಹತ್ವದಾಗಿತ್ತು,ನಿಜವಾದ ಅಚ್ಚೆ ದಿನ ಇದಾಗಿತ್ತು ಹೀಗಿದ್ದು ಅವರು ಸಂಘ ಪರಿವಾರ,ಭಜರಂಗದಳದ ವ್ಯಕ್ತಿಯೆಂಬ ಮಾಹಿತಿ ತಿಳಿದು ಇನ್ನಷ್ಟು ಹೆಮ್ಮೆ ಮೂಡುತ್ತಿದೆ ನಿಮ್ಮ ಈ ಮಾಹಿತಿಗಾಗಿ ಧನ್ಯವಾದಗಳು.
    ಸಂಘ ಶಕ್ತಿಗೆ ಜಯವಾಗಲಿ
    ಜೈ ಭಜರಂಗದಳ???

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...