Homeಮುಖಪುಟಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಪ್ರತಾಪ ಚಂದ್ರ ಸಾರಂಗಿ ರಾಜೀನಾಮೆ: ಓರಿಸ್ಸಾದ ಮೋದಿಯವರ ಮತ್ತೊಂದು ಮುಖ

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ

- Advertisement -
- Advertisement -

ಮಾಧ್ಯಮಗಳು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕೆಲವೇ ದಿನಗಳಲ್ಲಿ ಹೀರೋನ್ನನ್ನಾಗಿ ಮಾಡುತ್ತವೆ. ಹೀರೋ ಆದವನು ತಮ್ಮ ಮಾತು ಕೇಳದಿದ್ದರೆ ಮತ್ತೆ ಕೆಲವೇ ದಿನಗಳಲ್ಲಿ ಆತನನ್ನು ದೊಡ್ಡ ವಿಲನ್ ಎಂದು ಚಿತ್ರಿಸಿಬಿಡುತ್ತವೆ. ಈ ಮಾತು ಈಗ ಏಕೆಂದರೆ, ಕಳೆದೆರಡು ದಿನಗಳಿಂದ ಗುಡಿಸಲಿನಿಂದ ಪಾರ್ಲಿಮೆಂಟ್ ವರೆಗೆ, ಸೈಕಲ್ ನಿಂದ ಸಂಸತ್ತಿನವರೆಗೆ ಸಾಗಿದ ಬಡ ಸಾಧು, ಸರಳ ಜೀವಿ, ಓರಿಸ್ಸಾದ ಮೋದಿ, ರಾಜಕಾರಣದ ಫಕೀರ ಎಂದು ಇನ್ನಿತ್ಯಾದಿ ಭೂಷಣಗಳಿಂದ ಪ್ರತಾಪಚಂದ್ರ ಸಾರಂಗಿ ರವರ ಕುರಿತು ಒಂದೇ ಸಮನೇ ಎಲ್ಲಾ ಮಾಧ್ಯಮಗಳು ವಿಪರೀತ ಹೊಗಳುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವರಾಗಿ ಪ್ರತಾಪಚಂದ್ರ ಸಾರಂಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಗಾಗಿ ಮಾಧ್ಯಮಗಳು ಬಹುಪರಾಕ್ ಹೇಳುವುದನ್ನು ಇನ್ನು ನಿಲ್ಲಿಸಿಲ್ಲ. ಅತಿ ಎನಿಸುವಷ್ಟು ಹೊಗಳಿ ಅಟ್ಟಕ್ಕೇರಿಸಿಬಿಟ್ಟಿದ್ದಾರೆ. ಇದಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಚಪ್ಪಾಳೆ ತಟ್ಟುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಈಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಆದರೆ ಕೇಂದ್ರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಾಪ ಸಾರಂಗಿ ವಿರುದ್ಧ ಗಂಭೀರವಾದ ಕ್ರಿಮಿನಲ್ ಆರೋಪಗಳಿವೆ ಎಂಬ ಸತ್ಯ ಬಯಲಿಗೆ ಬಂದಿದೆ. ಸಾರಂಗಿಯವರ ಈ ಇನ್ನೊಂದು ಮುಖವನ್ನು ತೋರಿಸಲು ಯಾವ ಮುಖ್ಯವಾಹಿನಿ ಮಾಧ್ಯಮಗಳು ಮನಸ್ಸು ಮಾಡುತ್ತಿಲ್ಲ.

ಸಾರಂಗಿಯವರು ತಮ್ಮ ಮೇಲೆ ಏಳು ಗಂಭೀರ ಕ್ರಿಮಿನಲ್ ಆಪಾದನೆಗಳಿವೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಕೇಸ್ ಗಳು ದಾಖಲಾಗಿರುವುದು ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದಾಗ. ಇಂತಹ ಗಂಭೀರ ಆರೋಪಿ ಈಗ ಕೇಂದ್ರದ ಸಚಿವ. ಅದೂ, ಹಲವಾರು ಖಾತೆಗಳಿಗೆ ಎಂದು ಫೇಸ್ ಬುಕ್ ನಲ್ಲಿ ನೂರಾರು ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2002ರ ಮಾರ್ಚ್ ನಲ್ಲಿ ಒರಿಸ್ಸಾದ ವಿಧಾನಸಭೆಯ ಮೇಲೆ ಬಜರಂಗದಳದ ಸುಮಾರು 500 ಶಸ್ತ್ರದಾರಿ ಸದಸ್ಯರು ದಾಳಿ ನಡೆಸಿದಾಗ ಅದರ ರಾಜ್ಯ ಅಧ್ಯಕ್ಷರಾಗಿದ್ದು ಇದೇ ಸಾರಂಗಿ. 1999ರ ಫೆಬ್ರವರಿಯಲ್ಲಿ ಕ್ರೈಸ್ತ ಧರ್ಮದ ಪ್ರಚಾರಕ ಗ್ರಹಾಂ ಸ್ಟೈನ್ ಮತ್ತು ಅವರ ಮೂವರು ಪುಟ್ಟ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದ ದಾರಾಸಿಂಗನ ಗುರು ಈ ಸಾರಂಗಿ.

1999 ರಲ್ಲಿ ಒಡಿಶಾ ರಾಜ್ಯದ ಮಯೂಬರ್ಂಜ್ ಜಿಲ್ಲೆಯಲ್ಲಿ ಕುಷ್ಠ ರೋಗ ಮಿತಿ ಮೀರೀತ್ತು. ಆಗ ಗ್ರಹಾಂ ಸ್ಟೈನ್ಸ್ ಎಂಬ ಕ್ರೈಸ್ತ ಮಿಷನರಿ ರೋಗಿಗಳ ಚಿಕಿತ್ಸೆ, ಆರೈಕೆ ಮಾಡುತ್ತಿದ್ದರು. ಆದರೆ ಹಲವು ಜನರನ್ನು ಮತಾಂತಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಾರಾ ಸಿಂಗ್ ಮತ್ತು ಹಲವರು ಗ್ರಹಾಂ ಸ್ಟೈನ್ಸ್ ಅವರರನ್ನು ಅವರ ಮಕ್ಕಳ ಸಮೇತ ವಾಹನವೊಂದಕ್ಕೆ ಕೂಡಿ ಹಾಕಿ ಸಜೀವ ದಹನ ಮಾಡಿದ್ದರು. ಆ ತಂಡಕ್ಕೆ ಗುರುವಾಗಿದ್ದವರು ಇದೇ ಸಾರಂಗಿ ಎಂಬ ಆರೋಪವಿದೆ.

 

1999 ರಲ್ಲಿ ಒಡಿಶಾ ರಾಜ್ಯದ ಬಜರಂಗದಳ ಸಂಚಾಲಕರಾಗಿದ್ದ ಸಾರಂಗಿ, ದಾರಾ ಸಿಂಗ್ ತಂಡಕ್ಕೆ ನೇರಾ ಹಾಗೂ ಪರೋಕ್ಷವಾಗಿ ಸಹಕಾರಿಸಿದ್ದಾರೆ ಎಂಬ ಆರೋಪದ ಮೇಲೆ ಸಾರಂಗಿಯವರಿಗೆ 2003ರಲ್ಲಿ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿದಿಸಿತ್ತು. ನಂತರ ಓರಿಸ್ಸಾ ಹೈಕೋರ್ಟ್ ಸಾಕ್ಷ್ಯಗಳ ಕೊರತೆಯ ನೆಪದಿಂದ ಜೀವಾವಧಿ ಶಿಕ್ಷೆಯನ್ನು ಎರಡು ವರ್ಷಕ್ಕೆ ಇಳಿಸಿ ನಂತರ ಬಿಡುಗಡೆಗೊಳಿಸಲಾಗಿತ್ತು.

ಸಾರಂಗಿಯವರು ಹಲವು ಸಂದರ್ಶನಗಳಲ್ಲಿ ಈಗಲೂ ತಾವು ಕ್ರೈಸ್ತ ಮಿಷನರಿಗಳಿಗೆ ವಿರುದ್ಧವಾಗಿದ್ದೇನೆಂದು ಬಹಿರಂಗವಾಗಿ ಎಂದು ಹೇಳಿಕೊಂಡಿದ್ದಾರೆ. ಇಂತಹ ವ್ಯಕ್ತಿಯನ್ನು ಹೀರೊ ಮಾಡಲು ಮಾಧ್ಯಮಗಳು ಹೊರಟಿವೆ. ಸಂಪೂರ್ಣ ಪರಾಮರ್ಶಿಸುವ ಗುಣವನ್ನು ಎಂದೋ ಕಳೆದುಕೊಂಡ ಬಹಳಷ್ಟು ಭಾರತೀಯರು ಅದಕ್ಕೆ ದನಿಗೂಡಿಸಿ ಬಹುಪರಾಕ್ ಹೇಳುತ್ತಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‍ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)


ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೀರೊ ಯಾವತ್ತಿಗು ಹೀರೊನೆ,
    ಅವರ ಸರಳತೆ ಹಾಗು ಜೀವನ ಶೈಲಿಯ ಬಗ್ಗೆ ತಿಳಿದು ಇಂತಹ ವ್ಯಕ್ತಿಯನ್ನು ಗುರುತಿಸಿ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿದಂತಹ ವಿಷಯ ಬಹಳ ಮಹತ್ವದಾಗಿತ್ತು,ನಿಜವಾದ ಅಚ್ಚೆ ದಿನ ಇದಾಗಿತ್ತು ಹೀಗಿದ್ದು ಅವರು ಸಂಘ ಪರಿವಾರ,ಭಜರಂಗದಳದ ವ್ಯಕ್ತಿಯೆಂಬ ಮಾಹಿತಿ ತಿಳಿದು ಇನ್ನಷ್ಟು ಹೆಮ್ಮೆ ಮೂಡುತ್ತಿದೆ ನಿಮ್ಮ ಈ ಮಾಹಿತಿಗಾಗಿ ಧನ್ಯವಾದಗಳು.
    ಸಂಘ ಶಕ್ತಿಗೆ ಜಯವಾಗಲಿ
    ಜೈ ಭಜರಂಗದಳ???

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...