Homeಕರ್ನಾಟಕಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ 'ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ದೂರು ನೀಡಿದ್ದು, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿದೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು 1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ದೂರು ನೀಡಿದ್ದೇವೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ನಮ್ಮ ರಾಜ್ಯದಲ್ಲಿ ಭ್ರಷ್ಟ ರಾಜಕಾರಣವು ನಡೆಯುತ್ತಿದೆಯೆಂದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚಿಗೆ ಖಾಸಗಿ ಮಾಧ್ಯಮವೊಂದು ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿಯವರು ವಸೂಲಿ ಮತ್ತು ಸುಲಿಗೆ ದಂಧೆಯನ್ನು ಖುಲ್ಲಂ ಖುಲ್ಲ ಮಾಡುತ್ತಿರುವುದನ್ನು ಬಿಚ್ಚಿಟ್ಟಿದೆ. ಇಂತಹ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ತಿಳಿದು ಸಹ ನಮ್ಮ ಜನಾಧಿಕಾರ ಸಂಘರ್ಷ ಪರಿಷತ್ ಕೈಕಟ್ಟಿ ಕೂರಬಾರದೆಂದು 25-09-2020 ರಂದು ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ದೂರು ನೀಡಿದ್ದೇವೆ. ಈ ತರಹದ ವಸೂಲಿ ಧಂಧೆಯನ್ನು ಬಿಜೆಪಿ ಸರ್ಕಾರವು ನೇರ ನೇರಾ ಮಾಡುತ್ತಿದ್ದರೂ ಅದನ್ನು ತಡೆಯದ ಪ್ರಧಾನಿ ಮೋದಿಯವರು ಮಾತ್ರ ‘ನಾ ಖಾವುಂಗಾ ನಾ ಖಾನೆ ದೂಂಗಾ’ ಎಂದು ಹೇಳುವುದು ಡೋಂಗಿತನವಲ್ಲದೇ ಬೇರೆನೂ ಅಲ್ಲ” ಎಂದಿದ್ದಾರೆ.

ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಭ್ರಷ್ಟಾಚಾರದ ಕುರಿತು ವಿಶೇ‍ಷ ತನಿಖಾ ದಳದ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. “ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು” ಆಗ್ರಹಿಸಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...