Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...