Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...