Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...