Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...