Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...