Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...