Homeಮುಖಪುಟಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

ಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

- Advertisement -
- Advertisement -

2018ರ ಹಳೆಯ ಟ್ವೀಟ್ ಒಂದಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಮೊಹಮ್ಮದ್ ಜುಬೇರ್‌ರವರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಂದು ಅವರ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಿನ್ನೆ ಜುಬೇರ್‌ರವರನ್ನು ಬೆಂಗಳೂರಿನ ನಿವಾಸಕ್ಕೆ ಕರೆತಂದಿದ್ದ ದೆಹಲಿ ಪೊಲೀಸ್ ಮತ್ತು ಇಡಿ ಅಧಿಕಾರಿಗಳು ಅವರ ಲ್ಯಾಪ್‌ಟ್ಯಾಪ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಆ ಬೆನ್ನಲ್ಲೆ ಇಂದು ಅವರ ಮೇಲೆ ಹೊಸ ಪ್ರಕರಣಗಳನ್ನು ಹೇರಲಾಗಿದೆ.

ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದ ಆಲ್‌ನ್ಯೂಸ್‌ ಸಹ ಸಂಪಾದಕ ಜುಬೇರ್‌ರವರನ್ನು ಜೂನ್ 27 ರಂದು ದೆಹಲಿ ಪೊಲೀಸರು ಬಂಧಿಸಿದ್ದರು. ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ನಂತರ ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಮುನ್ನವೇ ದೆಹಲಿ ಪೊಲೀಸರು ಹೊಸ ಪ್ರಕರಣಗಳನ್ನು ಸೇರಿಸುವ ಮೂಲಕ ಅವರು ಮತ್ತಷ್ಟು ದಿನ ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ.

ಜುಬೇರ್ ಅವರನ್ನು ಬಂಧಿಸಲು ಕಾರಣವಾಗಿರುವ ಅವರು ಟ್ವೀಟ್ ಮಾಡಿದ ಆ ’ಚಿತ್ರ’ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಅದು 1983ರ ಹಿಂದಿ ಚಲನಚಿತ್ರವಾದ ’ಕಿಸ್ಸಿ ಸೆ ನಾ ಕೆಹನಾ’ದ (ಯಾರಿಗೂ ಹೇಳ್ಬೇಡಿ) ದೃಶ್ಯವಾಗಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ’ಯು’ (ಯೂವಿವರ್ಸಲ್-ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಇವೆ. ಆ ಪೋಸ್ಟ್‌ನ ಚಿತ್ರದಲ್ಲಿ, ’ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ’ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ. ಅದರೊಟ್ಟಿಗೆ ’2014ಕ್ಕೆ ಮುಂಚೆ ಹನಿಮೂನ್ ಹೋಟೆಲ್ ಇದ್ದಿದ್ದು, 2014ರ ನಂತರ ಹನುಮಾನ್ ಹೋಟೆಲ್’ ಆಗಿ ಬದಲಾಗಲಿದೆ. ಸಂಸ್ಕಾರಿ ಹೋಟೆಲ್ ಎಂದು ಜುಬೇರ್ ಟ್ವೀಟ್ ಮಾಡಿದ್ದರು. ಪ್ರೇಮಿಗಳ ದಿನಕ್ಕೆ ತಡೆಯೊಡ್ಡುತ್ತಿದ್ದ ಬಲಪಂಥೀಯ ಕಾರ್ಯಕರ್ತರ ಧೋರಣೆ ಖಂಡಿಸಿ ವ್ಯಂಗ್ಯವಾಗಿ ಮಾಡಿದ್ದ ಪೋಸ್ಟ್ ಅದಾಗಿತ್ತು.

ಇನ್ನು ಜುಬೇರ್‌ ವಿರುದ್ಧ ದೂರು ನೀಡಿದ್ದು ನಕಲಿ ಟ್ವಿಟರ್ ಖಾತೆ ಆಗಿತ್ತು. ಅದನ್ನು ಕೆಲ ದಿನಗಳ ಹಿಂದೆ ಡಿಲೀಟ್ ಮಾಡಲಾಗಿದೆ. ಅವರ ಬಂಧನದ ಐದು ದಿನಗಳ ನಂತರ ದೆಹಲಿ ಪೊಲೀಸರು ದೂರುದಾರರನ್ನು ಹುಡುಕುತ್ತಿದ್ದಾರೆ. ಇಂತಹ ಸಂದರ್ಭದ್ಲಿ ಹೊಸ ಪ್ರಕರಣ ಹೇರಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ದ್ವೇಷ ಪ್ರಚಾರಕರ, ನಕಲಿ ಸುದ್ದಿ ಸೃಷ್ಟಿಕರ್ತರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಜುಬೇರ್

ಇಷ್ಟಕ್ಕೆ ಅವರನ್ನು ಬಂಧಿಸಿದ ಪೊಲೀಸರು ಈಗ 50 ಲಕ್ಷ ರೂ ಅವರ ಖಾತೆಗೆ ವರ್ಗಾವಣೆಯಾಗಿದೆ ಎಂದೆಲ್ಲಾ ಆರೋಪಿಸಿ ತನಿಖೆ ನಡೆಸುತ್ತಿದ್ದಾರೆ. ಈಗ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಹಲವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನು ಪತ್ರಕರ್ತ ಅಲ್ಲಾ ಅಂತ ಈ ಅಯೋಗ್ಯನೇ ಹೇಳಿಕೊಂಡಿದ್ದಾನೇ, ಆದರೂ ಈ ಮೂರ್ಖರು ಅವನನ್ನ ಪತ್ರಕರ್ತ ಅಂತಿರೋದು ನೋಡಿದರೆ ,ಎಂಥ ಬೇವರ್ಸಿಗಳು ಅನ್ನೋದು ತಿಳಿಯುತ್ತೇ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...