Homeಮುಖಪುಟಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

ಪತ್ರಕರ್ತ ಜುಬೇರ್ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ ದೆಹಲಿ ಪೊಲೀಸ್

- Advertisement -
- Advertisement -

2018ರ ಹಳೆಯ ಟ್ವೀಟ್ ಒಂದಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಮೊಹಮ್ಮದ್ ಜುಬೇರ್‌ರವರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಂದು ಅವರ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಿನ್ನೆ ಜುಬೇರ್‌ರವರನ್ನು ಬೆಂಗಳೂರಿನ ನಿವಾಸಕ್ಕೆ ಕರೆತಂದಿದ್ದ ದೆಹಲಿ ಪೊಲೀಸ್ ಮತ್ತು ಇಡಿ ಅಧಿಕಾರಿಗಳು ಅವರ ಲ್ಯಾಪ್‌ಟ್ಯಾಪ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಆ ಬೆನ್ನಲ್ಲೆ ಇಂದು ಅವರ ಮೇಲೆ ಹೊಸ ಪ್ರಕರಣಗಳನ್ನು ಹೇರಲಾಗಿದೆ.

ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದ ಆಲ್‌ನ್ಯೂಸ್‌ ಸಹ ಸಂಪಾದಕ ಜುಬೇರ್‌ರವರನ್ನು ಜೂನ್ 27 ರಂದು ದೆಹಲಿ ಪೊಲೀಸರು ಬಂಧಿಸಿದ್ದರು. ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ನಂತರ ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಮುನ್ನವೇ ದೆಹಲಿ ಪೊಲೀಸರು ಹೊಸ ಪ್ರಕರಣಗಳನ್ನು ಸೇರಿಸುವ ಮೂಲಕ ಅವರು ಮತ್ತಷ್ಟು ದಿನ ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ.

ಜುಬೇರ್ ಅವರನ್ನು ಬಂಧಿಸಲು ಕಾರಣವಾಗಿರುವ ಅವರು ಟ್ವೀಟ್ ಮಾಡಿದ ಆ ’ಚಿತ್ರ’ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಅದು 1983ರ ಹಿಂದಿ ಚಲನಚಿತ್ರವಾದ ’ಕಿಸ್ಸಿ ಸೆ ನಾ ಕೆಹನಾ’ದ (ಯಾರಿಗೂ ಹೇಳ್ಬೇಡಿ) ದೃಶ್ಯವಾಗಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ’ಯು’ (ಯೂವಿವರ್ಸಲ್-ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಇವೆ. ಆ ಪೋಸ್ಟ್‌ನ ಚಿತ್ರದಲ್ಲಿ, ’ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ’ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ. ಅದರೊಟ್ಟಿಗೆ ’2014ಕ್ಕೆ ಮುಂಚೆ ಹನಿಮೂನ್ ಹೋಟೆಲ್ ಇದ್ದಿದ್ದು, 2014ರ ನಂತರ ಹನುಮಾನ್ ಹೋಟೆಲ್’ ಆಗಿ ಬದಲಾಗಲಿದೆ. ಸಂಸ್ಕಾರಿ ಹೋಟೆಲ್ ಎಂದು ಜುಬೇರ್ ಟ್ವೀಟ್ ಮಾಡಿದ್ದರು. ಪ್ರೇಮಿಗಳ ದಿನಕ್ಕೆ ತಡೆಯೊಡ್ಡುತ್ತಿದ್ದ ಬಲಪಂಥೀಯ ಕಾರ್ಯಕರ್ತರ ಧೋರಣೆ ಖಂಡಿಸಿ ವ್ಯಂಗ್ಯವಾಗಿ ಮಾಡಿದ್ದ ಪೋಸ್ಟ್ ಅದಾಗಿತ್ತು.

ಇನ್ನು ಜುಬೇರ್‌ ವಿರುದ್ಧ ದೂರು ನೀಡಿದ್ದು ನಕಲಿ ಟ್ವಿಟರ್ ಖಾತೆ ಆಗಿತ್ತು. ಅದನ್ನು ಕೆಲ ದಿನಗಳ ಹಿಂದೆ ಡಿಲೀಟ್ ಮಾಡಲಾಗಿದೆ. ಅವರ ಬಂಧನದ ಐದು ದಿನಗಳ ನಂತರ ದೆಹಲಿ ಪೊಲೀಸರು ದೂರುದಾರರನ್ನು ಹುಡುಕುತ್ತಿದ್ದಾರೆ. ಇಂತಹ ಸಂದರ್ಭದ್ಲಿ ಹೊಸ ಪ್ರಕರಣ ಹೇರಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ದ್ವೇಷ ಪ್ರಚಾರಕರ, ನಕಲಿ ಸುದ್ದಿ ಸೃಷ್ಟಿಕರ್ತರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಜುಬೇರ್

ಇಷ್ಟಕ್ಕೆ ಅವರನ್ನು ಬಂಧಿಸಿದ ಪೊಲೀಸರು ಈಗ 50 ಲಕ್ಷ ರೂ ಅವರ ಖಾತೆಗೆ ವರ್ಗಾವಣೆಯಾಗಿದೆ ಎಂದೆಲ್ಲಾ ಆರೋಪಿಸಿ ತನಿಖೆ ನಡೆಸುತ್ತಿದ್ದಾರೆ. ಈಗ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಪ್ರಕರಣಗಳನ್ನು ಹೇರಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಹಲವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನು ಪತ್ರಕರ್ತ ಅಲ್ಲಾ ಅಂತ ಈ ಅಯೋಗ್ಯನೇ ಹೇಳಿಕೊಂಡಿದ್ದಾನೇ, ಆದರೂ ಈ ಮೂರ್ಖರು ಅವನನ್ನ ಪತ್ರಕರ್ತ ಅಂತಿರೋದು ನೋಡಿದರೆ ,ಎಂಥ ಬೇವರ್ಸಿಗಳು ಅನ್ನೋದು ತಿಳಿಯುತ್ತೇ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...