Homeಮುಖಪುಟಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

- Advertisement -
- Advertisement -

ಪ್ರಸಿದ್ದ ಸ್ಟಾಂಡ್‌ಅಪ್ ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಅನುಮತಿ ನೀಡಿದ್ದಾರೆ. ಕುನಾಲ್ ಕಮ್ರಾ ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.

ಕುನಾಲ್ ವಿರುದ್ದದ ಅರ್ಜಿಯನ್ನು ಮನ್ನಿಸಿರುವ ಅಟಾರ್ನಿ ಜನರಲ್‌ ಕೆ.ಕೆ ವೇಣುಗೋಪಾಲ್, “ಸುಪ್ರೀಂ ಕೋರ್ಟ್‌ ಮೇಲೆ ಅನ್ಯಾಯವಾಗಿ ದಾಳಿ ಮಾಡುವವರು ಶಿಕ್ಷೆಗೆ ಆಹ್ವಾನ ನೀಡುತ್ತಿದ್ದಾರೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ” ಎಂದಿದ್ದಾರೆ.

ಇದನ್ನೂ ಓದಿ: ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

ನ್ಯಾಯಾಂಗ ನಿಂದನೆ ಕಾಯ್ದೆ 1975ರ ಸೆಕ್ಷನ್ 15ರ ರೂಲ್ 3ರ ಅಡಿಯಲ್ಲಿ ಕುನಾಲ್ ಕಮ್ರಾ ವಿರುದ್ದ, ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ವಕೀಲ ರಿಜ್ವಾನ್ ಸಿದ್ದೀಖ್ ಮನವಿ ಮಾಡಿದ್ದರು.

ಟ್ವಿಟ್ಟರ್‌ನಲ್ಲಿ 17 ಲಕ್ಷ ಫಾಲೋವರ್ಸ್ ಹೊಂದಿರುವ ಕುನಾಲ್ ಕಮ್ರ ರವರು ಸುಪ್ರೀಂ ಕೋರ್ಟಿನ ಅವರಹೇಳನ ಮಾಡುವ ನಾಲ್ಕು ಟ್ವೀಟ್ ಮಾಡಿದ್ದಾರೆ. ಅವರನ್ನು ಶಿಕ್ಷಿಸದಿದ್ದರೆ ಅವರ ಫಾಲೋವರ್ಸ್ ಕೂಡ ಸುಪ್ರೀಂ ಕೋರ್ಟಿಗೆ ಬೆಲೆ ನೀಡುವುದಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆತ್ಮಹತ್ಯಾ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಜಾಮೀನನ್ನು ಟೀಕಿಸಿದ್ದ, ಕುನಾಲ್ “ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪ್ರಥಮ ದರ್ಜೆ ಪ್ರಯಾಣಿಕರಿಗೆ ಶೀಘ್ರವಾಗಿ ಶಾಂಪೇನ್ ಸೇವೆ ಸಲ್ಲಿಸುತ್ತಿರುವ ಫ್ಲೈಟ್ ಅಟೆಂಡೆರ್‌‌‌ನಂತೆ ಆಗಿದ್ದಾರೆ. ಆದರೆ ಸಾಮಾನ್ಯರು ಹತ್ತುತ್ತಿದ್ದಾರೆಯೇ ಅಥವಾ ಕುಳಿತುಕೊಳ್ಳುತ್ತಾರೆಯೇ ಎಂದು ಅವರು ಯೋಚಿಸುತ್ತಿಲ್ಲ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: CJI ಬೋಬ್ಡೆ ಹೆಲಿಕಾಪ್ಟರ್ ಕುರಿತು ಟ್ವೀಟ್‌: ಪ್ರಶಾಂತ್‌ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಮನವಿ

ಅಷ್ಟೇ ಅಲ್ಲದೆ, ಈ ದೇಶದ ಸುಪ್ರೀಂ ಕೋರ್ಟ್ ಈ ದೇಶದ ಅತ್ಯಂತ ಸುಪ್ರೀಂ ಜೋಕ್ ಆಗಿದೆ ಎಂದು ಕೂಡಾ ಹೇಳಿದ್ದ ಅವರು, “ರಾಷ್ಟ್ರೀಯ ಹಿತಾಸಕ್ತಿ” ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ಕಾರ್ಯನಿರ್ವಹಿಸುವ ವೇಗವನ್ನು ನೋಡಿದರೆ, ನಾವು ಮಹಾತ್ಮ ಗಾಂಧಿಯವರ ಫೋಟೋ ಬದಲಿಗೆ ಹರೀಶ್ ಸಾಲ್ವೆ ಅವರ ಫೋಟೋ ಹಾಕಬೇಕಾದ ಸಮಯ ಬಂದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...