Homeಮುಖಪುಟಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿಂದ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

- Advertisement -
- Advertisement -

ಕಳೆದ ತಿಂಗಳು ನಡೆದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ “ತಪ್ಪಿತಸ್ಥ” ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ವಕೀಲ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕುರಿತಾಗಿ ಪ್ರಶಾಂತ್‌ ಭೂಷಣ್ ಮಾಡಿರುವ ಟೀಕೆಗಳನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ನ್ಯಾಯಾಲಯ ಶಿಕ್ಷೆಯಾಗಿ ಒಂದು ರುಪಾಯಿ ದಂಡವನ್ನು ಕಟ್ಟುವಂತೆ ಆದೇಶಿಸಿತ್ತು ಹಾಗೂ ಪ್ರಶಾಂತ್‌ ಭೂಷಣ್ ಅದನ್ನು ಪಾವತಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಸಹಾರಾ-ಬಿರ್ಲಾ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳಿಗೆ ಲಂಚ ನೀಡಿದ ಆರೋಪವನ್ನು ಒಳಗೊಂಡಂತೆ ಪ್ರಶಾಂತ್‌ ಭೂಷಣ್ ವಾದಿಸಿದ ಪಿಐಎಲ್‌ಗಳನ್ನು ವಜಾಗೊಳಿಸಿದ್ದರಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಈ ಬಗ್ಗೆ ತೀರ್ಪು ನೀಡಬಾರದು ಎಂದು ತಮ್ಮ ಮನವಿಯಲ್ಲಿ ಪ್ರಶಾಂತ್ ಭೂಷಣ್ ಕೋರಿದ್ದಾರೆ.

“ಸಹಾರಾ ಡೈರಿ” – 2014 ರಲ್ಲಿ ಸಹಾರಾ ಗುಂಪಿಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿಗಳಲ್ಲಿ ದೊರೆತ ದಾಖಲೆಗಳ ಸಂಗ್ರಹವಾಗಿದ್ದು, ಅದರಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳ ಹೆಸರನ್ನು ಮತ್ತು ಲಂಚವಾಗಿ ಪಾವತಿಸಿದ ಮೊತ್ತವನ್ನು ಬರೆಯಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

2017 ರ ಜನವರಿಯಲ್ಲಿ ಪ್ರಶಾಂತ್‌ ಭೂಷಣ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಮನವಿ ಸಲ್ಲಿಸಿದ್ದರು. ಈ ಪ್ರಕರಣವನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ನ್ಯಾಯಮೂರ್ತಿ ಅಮಿತವ ರಾಯ್ ವಿಚಾರಣೆ ನಡೆಸಿದ್ದರು.

ಪ್ರಶಾಂತ್‌ ಭೂಷಣ್ ತನ್ನ ಮನವಿಯಲ್ಲಿ ”ಸಮಂಜಸವಾದ ಆತಂಕವಿದೆ” ಎಂದಿದ್ದು, “ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿಂದ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮೂಲಭೂತ ತತ್ವಗಳನ್ನು ಉಲ್ಲಂಘಿಸಲಾಗಿದೆ ಎಂದು ಪ್ರಶಾಂತ್‌ ಭೂಷಣ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಮ್ಮ ದೇಶದ ಶೇ.1 ರಷ್ಟು ಜನರಿಗೂ ನ್ಯಾಯ ಸಿಗುತ್ತಿಲ್ಲ : ಪ್ರಶಾಂತ್‌ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...