Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...