Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...