Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...