Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....