Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...