Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...