Homeರಾಜಕೀಯನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ನೂತನ ಸಂಸದರಲ್ಲಿ ಕ್ರಿಮಿನಲ್ ಹಿನ್ನೆಲೆ, ಮೇಲ್ಜಾತಿ ಮುನ್ನಲೆ

ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!

- Advertisement -
- Advertisement -

| ಮಲ್ಲಿ |
ಇತ್ತೀಚಿನ ಎರಡೂವರೆ ದಶಕದಿಂದ ಸಂಸತ್ತಿನಲ್ಲಿ ಕ್ರಿಮಿನಲ್ ಹಿನ್ನೆಲೆಯ, ಕೋಟ್ಯಾಂತರ ಆಸ್ತಿಯ ಸದಸ್ಯರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಮೀಸಲು ಕ್ಷೇತ್ರ ಬಿಟ್ಟು ಬೇರೆಡೆ ಗೆಲ್ಲುವವರಲ್ಲಿ ಮೇಲ್ಜಾತಿಯ ಬಲಾಢ್ಯ ಅಭ್ಯರ್ಥಿಗಳೇ ಜಾಸ್ತಿ. 2018ರಲ್ಲಿ ಇವರೆಲ್ಲರೊಂದಿಗೆ ಪುಟ್ಟಾಪೂರಾ ಕೋಮುಕ್ರಿಮಿಗಳೆಂದು ಜಗಜ್ಜಾಹೀರಾದವರ ಸಂಖ್ಯೆಯೂ ಏರಿದೆ!
ಹೊಸದಾಗಿ ಆಯ್ಕೆಯಾಗಿರುವ ಸಂಸದರ ಪೈಕಿ ಹೆಚ್ಚೂ ಕಡಿಮೆ ಅರ್ಧದಷ್ಟು ಜನ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಕೊಲೆ, ರೇಪು ಕೇಸುಗಳ ಜೊತೆಗೆ ಭಯೋತ್ಪಾದನೆಯ ಕೇಸುಗಳನ್ನೂ ಹೆಟ್ಟಿಸಿಕೊಂಡ ಮಹಾನುಭಾವರು ಸಂಸತ್ ಪ್ರವೇಶಿಸುತ್ತಿದ್ದಾರೆ.
ಇದೇನೂ ಹೊಸ ವಿದ್ಯಮಾನವಲ್ಲವಾದರೂ, ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತು ಜೈಲೂಟ ಸವಿದು ಜಾಮೀನಿನ ಮೇಲೆ ಹೊರಗಿರುವ ‘ವೀರ’ ಮಹಿಳೆ ಸಂಸತ್ ಪ್ರವೇಶಿಸುತ್ತಿದ್ದಾಳೆ. ದೇಶಭಕ್ತರ ಪಾರ್ಟಿಯಿಂದ ಗೆದ್ದಿರುವ ಈಯಮ್ಮ ಸಂಸತ್ತಿನಲ್ಲಿ ಅದೇನ್ ಮಾಡ್ತದೋ?
ಇದೆಲ್ಲ ವಿವರವನ್ನು ಎಡಿಅರ್ ಸಂಸ್ಥೆ ಬಹಿರಂಗ ಪಡಿಸಿದೆ. 2014ಕ್ಕೆ ಹೋಲಿಸಿದರೆ ಈ ಸಲ ಕ್ರಿಮಿನಲ್ ಹಿನ್ನೆಲೆಯ ಸದಸ್ಯರ ಸಂಖ್ಯೆ ಶೇ. 26ರಷ್ಟು ಹೆಚ್ಚಳವಾಗಿದೆ. 539 ಸದಸ್ಯರ ಹಿನ್ನೆಲೆಯನ್ನು ಪರಿಶೀಲಿಸಲಾಗಿದ್ದು, 233 ಸಂಸದರು ಕ್ರಿಮಿನಲ್ ಕಢಸುಗಳನ್ನು ಹೊತ್ತುಕೊಂಡು ಬಂದಿದ್ದಾರೆ. ಅಂದರೆ ಶೇ. 44ರಷ್ಟು ಸಂಸದರು ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು!
ಇದರಲ್ಲಿ ಬಿಜೆಪಿಯಿಂದ 116, ಕಾಂಗ್ರೆಸ್‍ನಿಂದ 29, ಜೆಡಿಯುನಿಂದ 23, ಡಿಎಂಕೆಯಿಂದ 10 ಮತ್ತು ಟಿಎಂಸಿಯಿಂದ 9 ಸಂಸದರು ಇಂತಹ ಹಿನ್ನೆಲೆ ಹೊಂದಿದ್ದಾರೆ.
ಇದರಲ್ಲಿ ಶೇ 29ರಷ್ಟು ಜನ ಕೊಲೆ, ಕೊಲೆ ಯತ್ನ, ಅತ್ಯಾಚಾರ ಮತ್ತು ಭಯೋತ್ಪಾದನಾ ಚಟುವಟಿಕೆಯ ಆರೋಪ ಹೊತ್ತವರು.

ಮೇಲ್ಜಾತಿಯವರೇ ಮೇಲ್ ಮೇಲೆ!
ಇನ್ನೊಂದು ಸಂಸ್ಥೆ ಪ್ರಕಟಿಸಿರುವ ವಿವರಗಳ ಪ್ರಕಾರ, ಮೇಲ್ಜಾತಿಯ ಸಂಸದರು ಎಂದಿನಂತೆ ಪ್ರಾಬಲ್ಯ ಹೊಂದಿದ್ದಾರೆ. 232 ಸಂಸದರು ಮೇಲ್ಜಾತಿ, 120 ಸಂಸದರು ಒಬಿಸಿ, 86 ಸಂಸದರು ಎಸ್‍ಸಿ, 52 ಸಂಸದರು ಎಸ್‍ಟಿ ಮತ್ತು 52 ಸಂಸದರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಮೀಸಲು ಕ್ಷೇತ್ರಗಳು ಇಲ್ಲದಿದ್ದರೆ ಒಬ್ಬ ಎಸ್‍ಸಿ/ಎಸ್‍ಟಿ ಸಂಸದರೂ ಇರುತ್ತಿರಲಿಲ್ಲವೇನೋ?

ಕರ್ನಾಟಕದ್ದೂ ಅದೇ ಕತೆ!
ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅನಂತಕುಮಾರ ಹೆಗಡೆ, ನಳೀನಕುಮಾರ ಕಟೀಲರಂತಹ ‘ಉಗ್ರ’ ವ್ಯಕ್ತಿಗಳಿದ್ದಾರೆ. ಧಾರವಾಡದ ಪ್ರಹ್ಲಾದ ಜೋಶಿಯವರೇನೂ ಪ್ರಚೋದನಾಕಾರಿ ಭಾಷಣ ಮತ್ತು ತಂತ್ರದಲ್ಲಿ ಕಮ್ಮಿಯೇನಲ್ಲ. ಹಲವು ಯುವತಿಯರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ, ಮೊದಲ ಬಾರಿ ಸಂಸತ್ ಪ್ರವೇಶ ಮಾಡುತ್ತಿರುವ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ, ಗೆಲುವಿನ ನಂತರ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತೇ? ‘ನನ್ನ ಈ ಗೆಲುವನ್ನು ಬೆವರು, ರಕ್ತ ಹರಿಸಿ ಬಿಜೆಪಿಗಾಗಿ ಹೋರಾಡುತ್ತಿರುವ ಕೇರಳ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ’ ಎಂದು! ಶೋಭಾ, ಕಟೀಲ್, ಹೆಗಡೆ ಗೋಡ್ಸೆಯನ್ನು ಬಹಿರಂಗವಾಗಿ ಬೆಂಬಲಿಸಿದವರು. ಈಗ ಶೋಭಾ ಸುಳ್ ಸುದ್ದಿಯೊಂದನ್ನು ಹರಡಿ ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿದ ಆರೋಪ ಹೊತ್ತಿದ್ದಾರೆ.
ಜಾತಿ ವಿಷಯಕ್ಕೆ ಬಂದರೆ ಮೀಸಲು ಕ್ಷೇತ್ರಗಳನ್ನು ಬಿಟ್ಟರೆ, ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್,ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!
ಎಸ್‍ಸಿ ಮೀಸಲು ಕ್ಷೇತ್ರಗಳಿಂದ ಐವರು, ಎಸ್‍ಟಿ ಮೀಸಲು ಕ್ಷೇತ್ರಗಳಿಂದ ಇಬ್ಬರು ಸಂಸದರಾದರೆ, 3 ಒಬಿಸಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ.

ಇದನ್ನು ಓದಿ: ಗಾಂಧಿಯನ್ನು ಕೊಂದ ಗೂಡ್ಸೆ ದೇಶಭಕ್ತ – ಪ್ರಗ್ಯಾ ಸಿಂಗ್‍

ಎಂದಿನಂತೆ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಈ ಸಲ ಎಲ್ಲ ಮೀಸಲು ಕ್ಷೇತ್ರಗಳನ್ನೂ ಬುಟ್ಟಿಗೆ ಹಾಕಿಕೊಂಡಿದೆ. ಗೆದ್ದಿರುವ 3 ಒಬಿಸಿ ಕೂಡ ( ಸುಮಲತಾ ಪಕ್ಷೇತರ ಆದರೂ ಬಿಜೆಪಿನೇ!) ಬಿಜೆಪಿಯವರೇ.
ಸಂಪುಟ ವಿಸ್ತರಣೇ ಆದರೆ ಮೂವರು ಬ್ರಾಹ್ಮಣರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಗ್ಯಾರಂಟಿ! ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳ ಸಂಘಟನೆ ಮರೆತ ಕಾಂಗ್ರೆಸ್, ಒಕ್ಕಲಿಗರನ್ನು ಹಗುರವಾಗಿ ಪರಿಗಣಿಸಿದ ಜೆಡಿಎಸ್ ಇನ್ನಾದರೂ ಪಾಠ ಕಲಿಯುವವೇ? ಸದ್ಯಕ್ಕೆ ಆ ಲಕ್ಷಣಗಳಂತೂ ಕಾಣುತ್ತಿಲ್ಲ. ಅಂದಂತೆ ಈ ಸಲ ಶೋಭಾ ಮತ್ತು ಸುಮಲತಾ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಇಲ್ಲಿ ಸಾಮಾಜಿಕ ನ್ಯಾಯವನ್ನು ಅಪೇಕ್ಷಿಸುವುದಾದರೂ ಹೇಗೆ? ಸಶಕ್ತ ಹೋರಾಟವೊಂದೇ ದಾರಿಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...